AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಮೈಲ್ಯಾಂಗ್​ ಆಡಿಯೋ ಸ್ಟೋರಿ ಚಾಲೇಂಜ್​ನಲ್ಲಿ ಪಾಲ್ಗೊಳ್ಳಿ ರೂ.10000 ಬಹುಮಾನ ಗೆಲ್ಲಿ

Kannada Short Stories : ನೀವು ಕನ್ನಡದಲ್ಲಿ ಕಥೆ ಬರೆಯುತ್ತೀರೆ ಅಥವಾ ಬರೆದ ಕಥೆಯನ್ನು ಓದುವಲ್ಲಿ ನಿಮಗೆ ಆಸಕ್ತಿ ಇದೆಯೇ? ಹಾಗಿದ್ದರೆ ಕನ್ನಡದ ಮೊದಲ ಆಡಿಯೋ ಸ್ಟೋರಿ ಚಾಲೇಂಜ್​ನಲ್ಲಿ ನೀವು ಖಂಡಿತ ಭಾಗವಹಿಸಬಹುದು.

Viral: ಮೈಲ್ಯಾಂಗ್​ ಆಡಿಯೋ ಸ್ಟೋರಿ ಚಾಲೇಂಜ್​ನಲ್ಲಿ ಪಾಲ್ಗೊಳ್ಳಿ ರೂ.10000 ಬಹುಮಾನ ಗೆಲ್ಲಿ
ಮೈಲ್ಯಾಂಗ್​ ಆಡಿಯೋ ಸ್ಟೋರಿ ಚಾಲೇಂಜ್​
ಶ್ರೀದೇವಿ ಕಳಸದ
|

Updated on:Jul 18, 2023 | 3:02 PM

Share

Challenge : ಅಯ್ಯೋ ಅದೊಂದು ದೊಡ್ಡ ಕಥೆ ಬಿಡು. ಅವನ ಕಥೆ ಕೇಳಿದರೆ ಅಷ್ಟೇ. ಅಂದಹಾಗೆ ಆ ಕಥೆ ಮುಂದೇನಾಯ್ತು? ಬರೆದರೆ ಅದೊಂದು ಕಥೆನೇ. ಆ ಕಥೆ ಓದಬೇಕು ಅಂದರೆ ಆಗ್ತಾನೇ ಇಲ್ಲ. ಬರೀಲೇಬೇಕಂತಿಲ್ಲ ಬರೆದ ಕಥೆಯನ್ನು ಓದಿದರೂ ಆಯ್ತು! ಹೌದಾ? ಹೌದು, ಇದೀಗ ಮೈಲ್ಯಾಂಗ್​ (Mylang) ಕನ್ನಡದ ಹೊಸ ತಲೆಮಾರಿನ ಓದುಗರನ್ನು ಸೆಳೆಯುವುದಕ್ಕಾಗಿ ಮತ್ತು ಕಥಾಪ್ರಿಯರಿಗಾಗಿ ಆಡಿಯೋಸ್ಟೋರಿ ಚಾಲೇಂಜ್​ ಏರ್ಪಡಿಸಿದೆ. ಕನ್ನಡದಲ್ಲಿ ನಡೆಯುತ್ತಿರುವ ಈ ಮೊದಲ ಪ್ರಯತ್ನದಲ್ಲಿ ನೀವೂ ಪಾಲ್ಗೊಳ್ಳಬಹುದು ಮತ್ತು  ರೂ. 10,000 ಬಹುಮಾನವನ್ನೂ ಪಡೆಯಬಹುದು! ಮಾಹಿತಿಗಾಗಿ ಈ ಕೆಳಗಿನ ವಿಡಿಯೋ ನೋಡಿ.

ಈ ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಮೈಲ್ಯಾಂಗ್ ಆಡಿಯೋ ಆ್ಯಪ್​ ಡೌನ್​ಲೋಡ್​ ಮಾಡಿಕೊಳ್ಳಬೇಕು. ಕಥೆ ಬರೆಯಲು ಆಸಕ್ತಿ ಇದ್ದವರು ಈ ಅಪ್ಲಿಕೇಷನ್​ನಲ್ಲಿ ತಮ್ಮ ಕಥೆಗಳನ್ನು ಪ್ರಕಟಿಸಬಹುದು. ಇತರರ ಕಥೆಗಳಿಗೆ ಧ್ವನಿಯಾಗಲು ಇಚ್ಛಿಸುವವರು, ಅಂದರೆ ಕಥೆ ಓದಲು ಆಸಕ್ತಿ ಇರುವವರು ಈ ಅಪ್ಲೀಕೇಷನ್​ನಲ್ಲಿರುವ ಕಥೆಗಳನ್ನು ಆಯ್ಕೆ ಮಾಡಿಕೊಂಡು ಓದಿ ಅಲ್ಲಿಯೇ ಆಡಿಯೋ ಅಪ್​ಲೋಡ್ ಮಾಡಬೇಕು. ಆಯ್ದ ಕಥೆಗೆ ರೂ. 10,000 ನಗದು ಬಹುಮಾನ ನೀಡಲಾಗುತ್ತದೆ.

ಇದನ್ನೂ ಓದಿ : Viral Video: ದೂಧಸಾಗರ; ರೈಲ್ವೆ ಹಳಿ ದಾಟಿದ್ದಕ್ಕೆ ಚಾರಣಿಗರಿಂದ ಬಸ್ಕಿ ಹೊಡೆಸಿದ ಪೊಲೀಸರು

ಮೈಲ್ಯಾಂಗ್​ನ ವಸಂತ ಶೆಟ್ಟಿ, ‘ಹೊಸ ತಲೆಮಾರಿನವರಿಗೆ ಕನ್ನಡದ ರುಚಿಯನ್ನು ಕಥೆಗಳ ಮೂಲಕ ಉಣಿಸಬೇಕು. ಈ ಮೂಲಕ ಕನ್ನಡ ಸಾಹಿತ್ಯದಲ್ಲಿ ಈ ಪೀಳಿಗೆಯವರಲ್ಲಿ ಆಸಕ್ತಿ ಮೂಡಿಸಬೇಕು ಎನ್ನುವುದು ನಮ್ಮ ಆಶಯ. ಈ ಸ್ಪರ್ಧೆಗೆ ವಯಸ್ಸಿನ ಮಿತಿ ಇಲ್ಲ. ಕನ್ನಡದಲ್ಲಿ ಕಥೆ ಬರೆಯಬಲ್ಲ ಮತ್ತು ಕಥೆಗಳನ್ನು ಓದಬಲ್ಲ ಯಾರೂ ಇದರಲ್ಲಿ ಭಾಗವಹಿಸಬಹುದು. ಈ ಕುರಿತು ವಿವರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ದಿನವೇ 50 ಕಥೆಗಾರರು ತಮ್ಮ ಕಥೆಗಳನ್ನು ಮೈಲ್ಯಾಂಗ್​ನಲ್ಲಿ ಪ್ರಕಟಿಸಿದ್ದರು ಮತ್ತು 50 ಜನರು ಇತರರ ಕಥೆಗಳನ್ನು ಓದಿದ್ದರು. ಕರ್ನಾಟಕ ಅಷ್ಟೇ ಅಲ್ಲ, ಹೊರನಾಡ/ದೇಶಗಳಲ್ಲಿರುವ ಕನ್ನಡಿಗರೂ ಈ ಸ್ಪರ್ಧೆಯಲ್ಲಿ ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ’ ಎನ್ನುತ್ತಾರೆ.

ನೀವೂ ಭಾಗವಹಿಸಿ, ಆಸಕ್ತರಿಗೂ ತಿಳಿಸಿ. ಹೆಚ್ಚಿನ ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 12:27 pm, Tue, 18 July 23

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ