AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಮೈಲ್ಯಾಂಗ್​ ಆಡಿಯೋ ಸ್ಟೋರಿ ಚಾಲೇಂಜ್​ನಲ್ಲಿ ಪಾಲ್ಗೊಳ್ಳಿ ರೂ.10000 ಬಹುಮಾನ ಗೆಲ್ಲಿ

Kannada Short Stories : ನೀವು ಕನ್ನಡದಲ್ಲಿ ಕಥೆ ಬರೆಯುತ್ತೀರೆ ಅಥವಾ ಬರೆದ ಕಥೆಯನ್ನು ಓದುವಲ್ಲಿ ನಿಮಗೆ ಆಸಕ್ತಿ ಇದೆಯೇ? ಹಾಗಿದ್ದರೆ ಕನ್ನಡದ ಮೊದಲ ಆಡಿಯೋ ಸ್ಟೋರಿ ಚಾಲೇಂಜ್​ನಲ್ಲಿ ನೀವು ಖಂಡಿತ ಭಾಗವಹಿಸಬಹುದು.

Viral: ಮೈಲ್ಯಾಂಗ್​ ಆಡಿಯೋ ಸ್ಟೋರಿ ಚಾಲೇಂಜ್​ನಲ್ಲಿ ಪಾಲ್ಗೊಳ್ಳಿ ರೂ.10000 ಬಹುಮಾನ ಗೆಲ್ಲಿ
ಮೈಲ್ಯಾಂಗ್​ ಆಡಿಯೋ ಸ್ಟೋರಿ ಚಾಲೇಂಜ್​
Follow us
ಶ್ರೀದೇವಿ ಕಳಸದ
|

Updated on:Jul 18, 2023 | 3:02 PM

Challenge : ಅಯ್ಯೋ ಅದೊಂದು ದೊಡ್ಡ ಕಥೆ ಬಿಡು. ಅವನ ಕಥೆ ಕೇಳಿದರೆ ಅಷ್ಟೇ. ಅಂದಹಾಗೆ ಆ ಕಥೆ ಮುಂದೇನಾಯ್ತು? ಬರೆದರೆ ಅದೊಂದು ಕಥೆನೇ. ಆ ಕಥೆ ಓದಬೇಕು ಅಂದರೆ ಆಗ್ತಾನೇ ಇಲ್ಲ. ಬರೀಲೇಬೇಕಂತಿಲ್ಲ ಬರೆದ ಕಥೆಯನ್ನು ಓದಿದರೂ ಆಯ್ತು! ಹೌದಾ? ಹೌದು, ಇದೀಗ ಮೈಲ್ಯಾಂಗ್​ (Mylang) ಕನ್ನಡದ ಹೊಸ ತಲೆಮಾರಿನ ಓದುಗರನ್ನು ಸೆಳೆಯುವುದಕ್ಕಾಗಿ ಮತ್ತು ಕಥಾಪ್ರಿಯರಿಗಾಗಿ ಆಡಿಯೋಸ್ಟೋರಿ ಚಾಲೇಂಜ್​ ಏರ್ಪಡಿಸಿದೆ. ಕನ್ನಡದಲ್ಲಿ ನಡೆಯುತ್ತಿರುವ ಈ ಮೊದಲ ಪ್ರಯತ್ನದಲ್ಲಿ ನೀವೂ ಪಾಲ್ಗೊಳ್ಳಬಹುದು ಮತ್ತು  ರೂ. 10,000 ಬಹುಮಾನವನ್ನೂ ಪಡೆಯಬಹುದು! ಮಾಹಿತಿಗಾಗಿ ಈ ಕೆಳಗಿನ ವಿಡಿಯೋ ನೋಡಿ.

ಈ ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಮೈಲ್ಯಾಂಗ್ ಆಡಿಯೋ ಆ್ಯಪ್​ ಡೌನ್​ಲೋಡ್​ ಮಾಡಿಕೊಳ್ಳಬೇಕು. ಕಥೆ ಬರೆಯಲು ಆಸಕ್ತಿ ಇದ್ದವರು ಈ ಅಪ್ಲಿಕೇಷನ್​ನಲ್ಲಿ ತಮ್ಮ ಕಥೆಗಳನ್ನು ಪ್ರಕಟಿಸಬಹುದು. ಇತರರ ಕಥೆಗಳಿಗೆ ಧ್ವನಿಯಾಗಲು ಇಚ್ಛಿಸುವವರು, ಅಂದರೆ ಕಥೆ ಓದಲು ಆಸಕ್ತಿ ಇರುವವರು ಈ ಅಪ್ಲೀಕೇಷನ್​ನಲ್ಲಿರುವ ಕಥೆಗಳನ್ನು ಆಯ್ಕೆ ಮಾಡಿಕೊಂಡು ಓದಿ ಅಲ್ಲಿಯೇ ಆಡಿಯೋ ಅಪ್​ಲೋಡ್ ಮಾಡಬೇಕು. ಆಯ್ದ ಕಥೆಗೆ ರೂ. 10,000 ನಗದು ಬಹುಮಾನ ನೀಡಲಾಗುತ್ತದೆ.

ಇದನ್ನೂ ಓದಿ : Viral Video: ದೂಧಸಾಗರ; ರೈಲ್ವೆ ಹಳಿ ದಾಟಿದ್ದಕ್ಕೆ ಚಾರಣಿಗರಿಂದ ಬಸ್ಕಿ ಹೊಡೆಸಿದ ಪೊಲೀಸರು

ಮೈಲ್ಯಾಂಗ್​ನ ವಸಂತ ಶೆಟ್ಟಿ, ‘ಹೊಸ ತಲೆಮಾರಿನವರಿಗೆ ಕನ್ನಡದ ರುಚಿಯನ್ನು ಕಥೆಗಳ ಮೂಲಕ ಉಣಿಸಬೇಕು. ಈ ಮೂಲಕ ಕನ್ನಡ ಸಾಹಿತ್ಯದಲ್ಲಿ ಈ ಪೀಳಿಗೆಯವರಲ್ಲಿ ಆಸಕ್ತಿ ಮೂಡಿಸಬೇಕು ಎನ್ನುವುದು ನಮ್ಮ ಆಶಯ. ಈ ಸ್ಪರ್ಧೆಗೆ ವಯಸ್ಸಿನ ಮಿತಿ ಇಲ್ಲ. ಕನ್ನಡದಲ್ಲಿ ಕಥೆ ಬರೆಯಬಲ್ಲ ಮತ್ತು ಕಥೆಗಳನ್ನು ಓದಬಲ್ಲ ಯಾರೂ ಇದರಲ್ಲಿ ಭಾಗವಹಿಸಬಹುದು. ಈ ಕುರಿತು ವಿವರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ದಿನವೇ 50 ಕಥೆಗಾರರು ತಮ್ಮ ಕಥೆಗಳನ್ನು ಮೈಲ್ಯಾಂಗ್​ನಲ್ಲಿ ಪ್ರಕಟಿಸಿದ್ದರು ಮತ್ತು 50 ಜನರು ಇತರರ ಕಥೆಗಳನ್ನು ಓದಿದ್ದರು. ಕರ್ನಾಟಕ ಅಷ್ಟೇ ಅಲ್ಲ, ಹೊರನಾಡ/ದೇಶಗಳಲ್ಲಿರುವ ಕನ್ನಡಿಗರೂ ಈ ಸ್ಪರ್ಧೆಯಲ್ಲಿ ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ’ ಎನ್ನುತ್ತಾರೆ.

ನೀವೂ ಭಾಗವಹಿಸಿ, ಆಸಕ್ತರಿಗೂ ತಿಳಿಸಿ. ಹೆಚ್ಚಿನ ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 12:27 pm, Tue, 18 July 23

ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು