AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಪಕ್ಷಿ ಸಂಕುಲಕ್ಕೆ ಆಶ್ರಯವಾಗಿದ್ದ ಅರಳಿ ಮರದ ಕೊಂಬೆಗಳನ್ನು ಕಡಿದು ಹಾಕಿದ ಪಾಪಿಗಳು

ಪ್ರಕೃತಿ, ಪ್ರಾಣಿ-ಪಕ್ಷಿಗಳ ಮೇಲೆ ಮನುಷ್ಯನ ದೌರ್ಜನ್ಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ತನ್ನ ಸ್ವಾರ್ಥಕ್ಕಾಗಿ ಸುಂದರ ಪ್ರಕೃತಿಯನ್ನೇ ಹಾಳುಗೆಡವುತ್ತಿದ್ದಾನೆ. ಇದೀಗ ಅಂತಹದ್ದೇ ಅಮಾನವೀಯ ಘಟನೆಯೊಂದು ನಡೆದಿದ್ದು, ಪಾಪಿಗಳು ಅದೆಷ್ಟೋ ಪಕ್ಷಿಗಳಿಗೆ ಆಶ್ರಯವಾಗಿದ್ದ ಅರಳಿ ಮರದ ಕೊಂಬೆಗಳನ್ನೇ ಕಡಿದು ಹಾಕಿ ಪಕ್ಷಿಗಳನ್ನು ಬೀದಿಗೆ ಬರುವಂತೆ ಮಾಡಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ವೈರಲ್‌ ಆಗುತ್ತಿದೆ.

Viral: ಪಕ್ಷಿ ಸಂಕುಲಕ್ಕೆ ಆಶ್ರಯವಾಗಿದ್ದ ಅರಳಿ ಮರದ ಕೊಂಬೆಗಳನ್ನು ಕಡಿದು ಹಾಕಿದ ಪಾಪಿಗಳು
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Sep 26, 2024 | 6:08 PM

Share

ಅಭಿವೃದ್ಧಿಯ ಹೆಸರಿನಲ್ಲಿ ಮನುಷ್ಯ ನಿರಂತರವಾಗಿ ಪ್ರಕೃತಿಯ ಮೇಲೆ ದೌರ್ಜನ್ಯ ಎಸಗುತ್ತಾ ಬರುತ್ತಲೇ ಇದ್ದಾನೆ. ತನ್ನ ಸ್ವಾರ್ಥಕ್ಕಾಗಿ ಪ್ರಾಣಿ ಪಕ್ಷಿಗಳಿಗೆ ಆಶ್ರಯವಾಗಿದ್ದ ಮರಗಳನ್ನು ಸಹ ನಾಶ ಮಾಡುತ್ತಿದ್ದಾನೆ. ಮನುಷ್ಯನ ಅಟ್ಟಹಾಸಕ್ಕೆ ಅದೆಷ್ಟೋ ಪಕ್ಷಿಗಳು ತಮ್ಮ ಆವಾಸಸ್ಥಾನವನ್ನೇ ಕಳೆದುಕೊಂಡಿವೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಪಾಪಿಗಳು ದೈತ್ಯ ಅರಳಿ ಮರದ ಕೊಂಬೆಗಳನ್ನು ಕಡಿದು ಕಾಕುವ ಮೂಲಕ ಪಕ್ಷಿಗಳ ಆವಾಸಸ್ಥಾನವನ್ನು ನಾಶ ಮಾಡಿದ್ದಾರೆ. ಇದೀಗ ಈ ಪಕ್ಷಿಗಳು ತಮ್ಮ ಬೆಚ್ಚಗಿನ ಆಶ್ರಯವನ್ನು ಕಳೆದುಕೊಂಡು ಬೀದಿಗೆ ಬಿದ್ದಿದ್ದು, ಈ ಕುರಿತ ಕರುಳು ಹಿಂಡುವ ದೃಶ್ಯವೊಂದು ಇದೀಗ ವೈರಲ್‌ ಆಗಿದೆ.

ಈ ಘಟನೆ ಆಗಸ್ಟ್‌ ತಿಂಗಳ ಕೊನೆಯಲ್ಲಿ ನಮ್ಮ ಮೈಸೂರಿನ ಟಿ. ನರಸೀಪುರ ತಾಲೂಕಿನಲ್ಲಿ ನಡೆದಿದ್ದು, ಹಕ್ಕಿಗಳು ಹಿಕ್ಕೆ ಹಾಕುತ್ತವೆ ಎಂಬ ಕಾರಣಕ್ಕೆ ಇಲ್ಲಿನ ಸರ್ಕಾರಿ ಶಾಲೆಯೊಂದರ ಬಳಿ ಇದ್ದ ದೈತ್ಯ ಅರಳಿ ಮರದ ಕೊಂಬೆಗಳನ್ನು ಕಡಿದು ಹಾಕಿದ್ದಾರೆ. ಕೊಂಬೆಗಳನ್ನು ಕಡಿದ ಪರಿಣಾಮ ಪಕ್ಷಿಗಳು ತಮ್ಮ ಆವಾಸಸ್ಥಾನವನ್ನು ಕಳೆದುಕೊಂಡು ಬೀದಿಗೆ ಬಂದಿವೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

fitness_farming_nature ಹೆಸರಿನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಅರಳಿ ಮರದ ಕೊಂಬೆಗಳನ್ನು ಕಡಿದು ಹಾಕಿರುವ ದೃಶ್ಯವನ್ನು ಕಾಣಬಹುದು. ಅದೇ ಕಡಿದು ಬಿದ್ದ ಕೊಂಬೆಯ ಪಕ್ಕದಲ್ಲಿ ಬೆಳ್ಳಕ್ಕಿಗಳು ತಮ್ಮ ಗೂಡುಗಳನ್ನು ಹುಡುಕಾಡುವ ದೃಶ್ಯವನ್ನು ನೋಡಿದ್ರೆ ನಿಜಕ್ಕೂ ದೃಶ್ಯವನ್ನು ನೋಡಿದಾಗ ಕರುಳು ಚುರುಕ್‌ ಎನ್ನುತ್ತೆ.

ಇದನ್ನೂ ಓದಿ: ಅಮೆರಿಕದಲ್ಲೂ ಮಂಗಳೂರಿನ ಯಕ್ಷಗಾನದ ರಂಗು, ವೈರಲ್‌ ಆಯ್ತು ವಿಡಿಯೋ

ಕೆಲ ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 2 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಆದಷ್ಟು ಬೇಗ ಈ ಪಾಪಿ ಮಾನವರು ನಾಶವಾಗಲಿʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಮನುಷ್ಯನಿಗಿಂತ ಅಪಾಯಕಾರಿಯಾಗಿರುವ ಕ್ರೂರ ಪ್ರಾಣಿ ಈ ಭೂಮಿಯ ಮೇಲೆ ಮತ್ತೊಂದಿಲ್ಲʼ ಎಂದು ಹೇಳಿದ್ದಾರೆ.

ವೈರಲ್​​ ಸ್ಟೋರಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!