AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇರುವ ಎರಡು ಜೊತೆ ಒಳ ಉಡುಪೂ ಹರಿದಿದೆ’; ಬಟ್ಟೆ ಅಂಗಡಿ ತೆರೆಸಲು ಸಿಎಂಗೆ ಮೈಸೂರು ವ್ಯಕ್ತಿ ಮನವಿ

ಹೊಸ ಬಟ್ಟೆ ಖರೀದಿ ಮಾಡಬೇಕು ಎನ್ನುವ ಆಲೋಚನೆ ಇದ್ದವರು ಸುಮ್ಮನಿದ್ದಾರೆ. ಈ ಮಧ್ಯೆ ಮೈಸೂರು ವ್ಯಕ್ತಿಯೋರ್ವ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರಿಗೆ ವಿಚಿತ್ರ ಪತ್ರ ಒಂದನ್ನು ಬರೆದಿದ್ದಾರೆ.

ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on: Jun 01, 2021 | 4:54 PM

Share

ಕೊರೊನಾ ಲಾಕ್​ಡೌನ್​ನಿಂದ ಜನರಿಗೆ ನಾನಾ ತೊಂದರೆ ಎದುರಾಗುತ್ತಿದೆ. ಮುಂಜಾನೆ ಏಳುವುದು ತಡವಾದರೆ ಅಗತ್ಯ ವಸ್ತುಗಳು ಸಿಗುವುದಿಲ್ಲ. ಇನ್ನು, ಮೊಬೈಲ್​ ಹಾಳಾದರೆ ತಕ್ಷಣಕ್ಕೆ ಸಿಗುವುದಿಲ್ಲ. ಆನ್​ಲೈನ್ ಮೂಲಕ ಆರ್ಡರ್​​ ಮಾಡಿ ಅದನ್ನು ತರಿಸಿಕೊಳ್ಳಬೇಕು. ಹೀಗೆ, ಮೊಬೈಲ್​ ಆರ್ಡರ್​ ಹಾಕೋದಕ್ಕೂ ಇನ್ನೊಂದು ಮೊಬೈಲ್​ ಬೇಕು! ಈ ಮಧ್ಯೆ ಲಾಕ್​ಡೌನ್​ನಿಂದ ಬಟ್ಟೆ ಅಂಗಡಿ ತೆರೆಯುತ್ತಿಲ್ಲ. ಹೀಗಾಗಿ, ಹೊಸ ಬಟ್ಟೆ ಖರೀದಿ ಮಾಡಬೇಕು ಎನ್ನುವ ಆಲೋಚನೆ ಇದ್ದವರು ಸುಮ್ಮನಿದ್ದಾರೆ. ಈ ಮಧ್ಯೆ ಮೈಸೂರು ವ್ಯಕ್ತಿಯೋರ್ವ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರಿಗೆ ವಿಚಿತ್ರ ಪತ್ರ ಒಂದನ್ನು ಬರೆದಿದ್ದಾರೆ.

ಹೆಸರು, ಕೊ.ಸು. ನರಸಿಂಹ ಮೂರ್ತಿ. ಸಿಎಂ ಬಳಿ ಅವರು ಬಟ್ಟೆ ಅಂಡಗಿ ತೆರೆಸಬೇಕೆನ್ನುವ ಬೇಡಿಕೆ ಇಟ್ಟಿದ್ದಾರೆ. ಹಾಗಾದರೆ ಅವರಿಗೆ ಹೊಸ ಬಟ್ಟೆ ಖರೀದಿ ಮಾಡಬೇಕೆ? ಇಲ್ಲ. ಅವರ ಒಳ ಉಡುಪು ಹರಿದು ಹೋಗಿದ್ದು, ಹೊಸದನ್ನು ಖರೀದಿಸಬೇಕಂತೆ. ಹೀಗಾಗಿ, ಸಿಎಂ ಎದುರು ಈ ವಿಚಿತ್ರ ಬೇಡಿಕೆ ಇಟ್ಟಿದ್ದಾರೆ.

‘ಮಾನ್ಯ ಮುಖ್ಯಮಂತ್ರಿಗಳೇ ನನ್ನ ಬೇಡಿಕೆ ನಿಮಗೆ ವಿಚಿತ್ರ ಎನಿಸಬಹುದು. ಆದರೆ, ಪರಿಸ್ಥಿತಿ ಅವಲೋಕಿಸಿ. ಕಳೆದ ಎರಡು ತಿಂಗಳಿಂದ ಎಲ್ಲಾ ಅಂಗಡಿ ತೆರೆದಿವೆ. ಆದರೆ, ಬಟ್ಟೆ ಅಂಗಡಿ ಓಪನ್ ಮಾಡಲು ಅನುಮತಿ ನೀಡಿಲ್ಲ. ಇದರಿಂದ ಜನರಿಗೆ ಎಷ್ಟು ತೊಂದರೆ ಆಗುತ್ತಿದೆ ಗೊತ್ತಾ?’ ಎಂದು ಅವರು ಪತ್ರ ಆರಂಭಿಸಿದ್ದಾರೆ.

‘ಕೇವಲ ಎರಡು ಜತೆ ಒಳಉಡುಪು ಹೊಂದಿರುವ ನನ್ನಂಥವರ ಒಳಚೆಡ್ಡಿ ಹಾಗೂ ಬನಿಯನ್​ ಹರಿಯುತ್ತಿದೆ. ಪಾಪ ಹೆಣ್ಣುಮಕ್ಕಳ ಬಟ್ಟೆ ಗತಿಯೂ ಹೀಗೆಯೇ ಆಗಿರಬಹುದು. ನಮ್ಮ ಸಮಸ್ಯೆಯನ್ನು ಯಾರಿಗೆ ಹೇಳೋಣ? ಜನರ ಸಮಸ್ಯೆ ನಿಮಗೆ ಗೊತ್ತಾದರೆ ಸಾಕು. ತಿಂಗಳಿಗೆ ಒಮ್ಮೆಯಾದರೂ ಬಟ್ಟೆ ಅಂಗಡಿ ತೆಗೆದು ನಮ್ಮ ಒಳುಡುಪಿನ ಸಮಸ್ಯೆ ಬಗೆಹರಿಸಿ ಸ್ವಾಮಿ’ ಎಂದು ನರಸಿಂಹ ಮೂರ್ತಿ ಪತ್ರದಲ್ಲಿ ಕೋರಿದ್ದಾರೆ.

ಇದನ್ನೂ ಓದಿ: ಮೈಸೂರು ಡಿಸಿ ರೋಹಿಣಿ ಸಿಂಧೂರಿ ವಿರುದ್ಧ ಸಿಎಂ ಯಡಿಯೂರಪ್ಪರಿಗೆ ಪತ್ರ ಬರೆದ ಸಂಸದ ಪ್ರತಾಪ್ ಸಿಂಹ

ಕಿತ್ತೂರು ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಈ ಸಲ ಫ್ಲಾವರ್​ ಶೋ ಥೀಮ್
ಕಿತ್ತೂರು ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಈ ಸಲ ಫ್ಲಾವರ್​ ಶೋ ಥೀಮ್
100 ಎಸೆತಗಳ ಪಂದ್ಯ: 99ನೇ ಎಸೆತದಲ್ಲಿ 1 ವಿಕೆಟ್​ನ ರೋಚಕ ಗೆಲುವು..!
100 ಎಸೆತಗಳ ಪಂದ್ಯ: 99ನೇ ಎಸೆತದಲ್ಲಿ 1 ವಿಕೆಟ್​ನ ರೋಚಕ ಗೆಲುವು..!
ಕಂದಕಕ್ಕೆ ಉರುಳಿದ ವಾಹನ,ಮೂವರು ಸಿಆರ್​​ಪಿಎಫ್​ ಸಿಬ್ಬಂದಿ ಸಾವು
ಕಂದಕಕ್ಕೆ ಉರುಳಿದ ವಾಹನ,ಮೂವರು ಸಿಆರ್​​ಪಿಎಫ್​ ಸಿಬ್ಬಂದಿ ಸಾವು
ರಾತ್ರಿ ಸುರಿದ ಭಾರೀ ಮಳೆಯಿಂದ ನೀರು ಜಮೀನಿಗೆ ನುಗ್ಗಿ ರೈತ ರಾಜಣ್ಣ ಕಂಗಾಲು
ರಾತ್ರಿ ಸುರಿದ ಭಾರೀ ಮಳೆಯಿಂದ ನೀರು ಜಮೀನಿಗೆ ನುಗ್ಗಿ ರೈತ ರಾಜಣ್ಣ ಕಂಗಾಲು
VIDEO: ಕೆಣಕಿದ ದಿಗ್ವೇಶ್ ರಾಥಿಯ ಬೆಂಡೆತ್ತಿದ ಅಂಕಿತ್
VIDEO: ಕೆಣಕಿದ ದಿಗ್ವೇಶ್ ರಾಥಿಯ ಬೆಂಡೆತ್ತಿದ ಅಂಕಿತ್
ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ; ಮುಂದೇನಾಯ್ತು ಗೊತ್ತಾ?
ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ; ಮುಂದೇನಾಯ್ತು ಗೊತ್ತಾ?
ತೆಲುಗು ವೇದಿಕೆ ಮೇಲೆ ‘ಬಾವ’ ಹಾಡಿಗೆ ರಾಜ್, ಜೆಪಿ, ಶನೀಲ್ ಭರ್ಜರಿ ಸ್ಟೆಪ್
ತೆಲುಗು ವೇದಿಕೆ ಮೇಲೆ ‘ಬಾವ’ ಹಾಡಿಗೆ ರಾಜ್, ಜೆಪಿ, ಶನೀಲ್ ಭರ್ಜರಿ ಸ್ಟೆಪ್
ಪಾರ್ಕಿಂಗ್​ಗಾಗಿ ಪೂರ್ತಿ ರಸ್ತೆಯನ್ನೇ ಕಬಳಿಸಿರುವುದು ಮೂರ್ಖತನದ ಪರಮಾವಧಿ
ಪಾರ್ಕಿಂಗ್​ಗಾಗಿ ಪೂರ್ತಿ ರಸ್ತೆಯನ್ನೇ ಕಬಳಿಸಿರುವುದು ಮೂರ್ಖತನದ ಪರಮಾವಧಿ
ರಾಯಚೂರು: ಎದೆಯತ್ತರದ ನೀರಲ್ಲೇ ಮೃತದೇಹ ಹೊತ್ತು ಸಾಗಿದ ಗ್ರಾಮಸ್ಥರು; ವಿಡಿಯೋ
ರಾಯಚೂರು: ಎದೆಯತ್ತರದ ನೀರಲ್ಲೇ ಮೃತದೇಹ ಹೊತ್ತು ಸಾಗಿದ ಗ್ರಾಮಸ್ಥರು; ವಿಡಿಯೋ
ವರಮಹಾಲಕ್ಷ್ಮೀ ಹಬ್ಬ: ಕೆಆರ್ ಮಾರುಕಟ್ಟೆಯಲ್ಲಿ ಖರೀದಿಗೆ ಮುಗಿಬಿದ್ದ ಜನ
ವರಮಹಾಲಕ್ಷ್ಮೀ ಹಬ್ಬ: ಕೆಆರ್ ಮಾರುಕಟ್ಟೆಯಲ್ಲಿ ಖರೀದಿಗೆ ಮುಗಿಬಿದ್ದ ಜನ