Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇರುವ ಎರಡು ಜೊತೆ ಒಳ ಉಡುಪೂ ಹರಿದಿದೆ’; ಬಟ್ಟೆ ಅಂಗಡಿ ತೆರೆಸಲು ಸಿಎಂಗೆ ಮೈಸೂರು ವ್ಯಕ್ತಿ ಮನವಿ

ಹೊಸ ಬಟ್ಟೆ ಖರೀದಿ ಮಾಡಬೇಕು ಎನ್ನುವ ಆಲೋಚನೆ ಇದ್ದವರು ಸುಮ್ಮನಿದ್ದಾರೆ. ಈ ಮಧ್ಯೆ ಮೈಸೂರು ವ್ಯಕ್ತಿಯೋರ್ವ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರಿಗೆ ವಿಚಿತ್ರ ಪತ್ರ ಒಂದನ್ನು ಬರೆದಿದ್ದಾರೆ.

Follow us
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​

Updated on: Jun 01, 2021 | 4:54 PM

ಕೊರೊನಾ ಲಾಕ್​ಡೌನ್​ನಿಂದ ಜನರಿಗೆ ನಾನಾ ತೊಂದರೆ ಎದುರಾಗುತ್ತಿದೆ. ಮುಂಜಾನೆ ಏಳುವುದು ತಡವಾದರೆ ಅಗತ್ಯ ವಸ್ತುಗಳು ಸಿಗುವುದಿಲ್ಲ. ಇನ್ನು, ಮೊಬೈಲ್​ ಹಾಳಾದರೆ ತಕ್ಷಣಕ್ಕೆ ಸಿಗುವುದಿಲ್ಲ. ಆನ್​ಲೈನ್ ಮೂಲಕ ಆರ್ಡರ್​​ ಮಾಡಿ ಅದನ್ನು ತರಿಸಿಕೊಳ್ಳಬೇಕು. ಹೀಗೆ, ಮೊಬೈಲ್​ ಆರ್ಡರ್​ ಹಾಕೋದಕ್ಕೂ ಇನ್ನೊಂದು ಮೊಬೈಲ್​ ಬೇಕು! ಈ ಮಧ್ಯೆ ಲಾಕ್​ಡೌನ್​ನಿಂದ ಬಟ್ಟೆ ಅಂಗಡಿ ತೆರೆಯುತ್ತಿಲ್ಲ. ಹೀಗಾಗಿ, ಹೊಸ ಬಟ್ಟೆ ಖರೀದಿ ಮಾಡಬೇಕು ಎನ್ನುವ ಆಲೋಚನೆ ಇದ್ದವರು ಸುಮ್ಮನಿದ್ದಾರೆ. ಈ ಮಧ್ಯೆ ಮೈಸೂರು ವ್ಯಕ್ತಿಯೋರ್ವ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರಿಗೆ ವಿಚಿತ್ರ ಪತ್ರ ಒಂದನ್ನು ಬರೆದಿದ್ದಾರೆ.

ಹೆಸರು, ಕೊ.ಸು. ನರಸಿಂಹ ಮೂರ್ತಿ. ಸಿಎಂ ಬಳಿ ಅವರು ಬಟ್ಟೆ ಅಂಡಗಿ ತೆರೆಸಬೇಕೆನ್ನುವ ಬೇಡಿಕೆ ಇಟ್ಟಿದ್ದಾರೆ. ಹಾಗಾದರೆ ಅವರಿಗೆ ಹೊಸ ಬಟ್ಟೆ ಖರೀದಿ ಮಾಡಬೇಕೆ? ಇಲ್ಲ. ಅವರ ಒಳ ಉಡುಪು ಹರಿದು ಹೋಗಿದ್ದು, ಹೊಸದನ್ನು ಖರೀದಿಸಬೇಕಂತೆ. ಹೀಗಾಗಿ, ಸಿಎಂ ಎದುರು ಈ ವಿಚಿತ್ರ ಬೇಡಿಕೆ ಇಟ್ಟಿದ್ದಾರೆ.

‘ಮಾನ್ಯ ಮುಖ್ಯಮಂತ್ರಿಗಳೇ ನನ್ನ ಬೇಡಿಕೆ ನಿಮಗೆ ವಿಚಿತ್ರ ಎನಿಸಬಹುದು. ಆದರೆ, ಪರಿಸ್ಥಿತಿ ಅವಲೋಕಿಸಿ. ಕಳೆದ ಎರಡು ತಿಂಗಳಿಂದ ಎಲ್ಲಾ ಅಂಗಡಿ ತೆರೆದಿವೆ. ಆದರೆ, ಬಟ್ಟೆ ಅಂಗಡಿ ಓಪನ್ ಮಾಡಲು ಅನುಮತಿ ನೀಡಿಲ್ಲ. ಇದರಿಂದ ಜನರಿಗೆ ಎಷ್ಟು ತೊಂದರೆ ಆಗುತ್ತಿದೆ ಗೊತ್ತಾ?’ ಎಂದು ಅವರು ಪತ್ರ ಆರಂಭಿಸಿದ್ದಾರೆ.

‘ಕೇವಲ ಎರಡು ಜತೆ ಒಳಉಡುಪು ಹೊಂದಿರುವ ನನ್ನಂಥವರ ಒಳಚೆಡ್ಡಿ ಹಾಗೂ ಬನಿಯನ್​ ಹರಿಯುತ್ತಿದೆ. ಪಾಪ ಹೆಣ್ಣುಮಕ್ಕಳ ಬಟ್ಟೆ ಗತಿಯೂ ಹೀಗೆಯೇ ಆಗಿರಬಹುದು. ನಮ್ಮ ಸಮಸ್ಯೆಯನ್ನು ಯಾರಿಗೆ ಹೇಳೋಣ? ಜನರ ಸಮಸ್ಯೆ ನಿಮಗೆ ಗೊತ್ತಾದರೆ ಸಾಕು. ತಿಂಗಳಿಗೆ ಒಮ್ಮೆಯಾದರೂ ಬಟ್ಟೆ ಅಂಗಡಿ ತೆಗೆದು ನಮ್ಮ ಒಳುಡುಪಿನ ಸಮಸ್ಯೆ ಬಗೆಹರಿಸಿ ಸ್ವಾಮಿ’ ಎಂದು ನರಸಿಂಹ ಮೂರ್ತಿ ಪತ್ರದಲ್ಲಿ ಕೋರಿದ್ದಾರೆ.

ಇದನ್ನೂ ಓದಿ: ಮೈಸೂರು ಡಿಸಿ ರೋಹಿಣಿ ಸಿಂಧೂರಿ ವಿರುದ್ಧ ಸಿಎಂ ಯಡಿಯೂರಪ್ಪರಿಗೆ ಪತ್ರ ಬರೆದ ಸಂಸದ ಪ್ರತಾಪ್ ಸಿಂಹ

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ