AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಭಯ-ಭಕ್ತಿ ಇಲ್ಲದ ಜನ… ನಾಗರ ಪಂಚಮಿಯಂದು ನಾಗರಾಜನ ಮುಂದೆ ಕೇಕ್‌ ಕಟ್ ಮಾಡಿ ಯುವಕರ ಹುಚ್ಚಾಟ

ಇಂದು ನಾಗರ ಪಂಚಮಿ. ಈ ದಿನ ಶ್ರದ್ಧಾ ಭಕ್ತಿಯಿಂದ ನಾಗರ ಕಲ್ಲಿಗೆ ಅಥವಾ ಹುತ್ತಗಳಿಗೆ ಹಾಲೆರೆದು ಪೂಜೆ ಸಲ್ಲಿಸಲಾಗುತ್ತದೆ. ಹಿಂದೂ ಸಂಪ್ರದಾಯದಲ್ಲಿ ಭಕ್ತಿ ಪೂರ್ವಕವಾಗಿ ನಾಗರ ಪಂಚಮಿಯನ್ನು ಆಚರಿಸಲಾಗುತ್ತದೆ. ಆದ್ರೆ ಇಲ್ಲೊಂದಷ್ಟು ಯುವಕರು ಭಯ-ಭಕ್ತಿಯಿಲ್ಲದೆ ನಾಗರಾಜನ ಮುಂದೆ ಕೇಕ್‌ ಇಟ್ಟು ನಗುತಾ ನಗುತಾ ಬಾಳು ನೀನು ನೂರು ವರುಷ... ಎಂಬ ಹಾಡನ್ನು ಹಾಡುತ್ತಾ ನಾಗರ ಪಂಚಮಿಯಂದು ಹುಚ್ಚಾಟ ಮೆರೆದಿದ್ದಾರೆ. ಈ ವಿಡಿಯೋ ಇದೀಗ ಭಾರೀ ವೈರಲ್‌ ಆಗುತ್ತಿದ್ದು, ಯುವಕರ ಈ ದುರ್ವರ್ತನೆಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

Video: ಭಯ-ಭಕ್ತಿ ಇಲ್ಲದ ಜನ... ನಾಗರ ಪಂಚಮಿಯಂದು ನಾಗರಾಜನ ಮುಂದೆ ಕೇಕ್‌ ಕಟ್ ಮಾಡಿ ಯುವಕರ ಹುಚ್ಚಾಟ
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on: Aug 09, 2024 | 11:22 AM

Share

ಸನಾತನ ಧರ್ಮವಾದ ಹಿಂದೂ ಧರ್ಮದಲ್ಲಿ ವ್ರತ, ಹಬ್ಬಗಳಿಗೆ ವಿಶೇಷ ಮಹತ್ವವನ್ನು ನೀಡಲಾಗಿದೆ. ಪ್ರತಿಯೊಂದು ಹಬ್ಬಕ್ಕೂ ಅದರದ್ದೇ ಆದ ಪದ್ಧತಿ, ಆಚರಣೆಯ ವಿಧಿ-ವಿಧಾನಗಳು ಇರುತ್ತದೆ. ಈ ಹಬ್ಬಗಳಲ್ಲಿ ನಾಗರ ಪಂಚಮಿಯೂ ಒಂದು. ಶ್ರಾವಣ ಮಾಸದ ಶುಕ್ಷ ಪಕ್ಷದ ಪಂಚಮಿ ತಿಥಿಯಂದು ಆಚರಿಸಲಾಗುವ ನಾಗರ ಪಂಚಮಿಯನ್ನು ಭಕ್ತಿ-ಪೂರ್ವಕವಾಗಿ ಆಚರಿಸಲಾಗುತ್ತದೆ. ಈ ದಿನ ಶ್ರದ್ಧಾ ಭಕ್ತಿಯಿಂದ ನಾಗರ ಕಲ್ಲಿಗೆ ಅಥವಾ ಹುತ್ತಗಳಿಗೆ ಹಾಲೆರೆದು ಪೂಜೆ ಸಲ್ಲಿಸಲಾಗುತ್ತದೆ. ಆದರೆ ಇಲ್ಲೊಂದಷ್ಟು ಯುವಕರು ಭಯ-ಭಕ್ತಿ ಇಲ್ಲದೆ, ಸಂಪ್ರದಾಯ ಆಚರಣೆಗಳಿಗೆ ಬೆಲೆ ಕೊಡದೆ ನಾಗರಾಜನ ಮುಂದೆ ಕೇಕ್‌ ಇಟ್ಟು ನಗುತಾ ನಗುತಾ ಬಾಳು ನೀನು ನೂರು ವರುಷ… ಎಂಬ ಹಾಡನ್ನು ಹಾಡುತ್ತಾ ನಾಗರ ಪಂಚಮಿಯ ಈ ದಿನ ಹುಚ್ಚಾಟ ಮೆರೆದಿದ್ದಾರೆ. ಈ ವಿಡಿಯೋ ಇದೀಗ ಭಾರೀ ವೈರಲ್‌ ಆಗುತ್ತಿದ್ದು, ಯುವಕರ ಈ ದುರ್ವರ್ತನೆಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

ಶಾಂತರಾಯ್‌ (Shantaray H Hosur) ಎಂಬವರು ಈ ಕುರಿತ ಪೋಸ್ಟ್‌ ಒಂದನ್ನು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡಿದ್ದು, “ನಾಗರ ಪಂಚಮಿಯಂದು ಹುಚ್ಚಾಟ ಮಾಡಿದ ಗೆಳೆಯರು” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ವೈರಲ್‌ ವಿಡಿಯೋದಲ್ಲಿ ಒಂದಷ್ಟು ಯುವಕರು ನಾಗರ ಹಾವಿನ ಮುಂದೆ ಕೇಕ್‌ ಇಟ್ಟು ನಾಗರ ಪಂಚಮಿ ಆಚರಿಸಿದ ದೃಶ್ಯವನ್ನು ಕಾಣಬಹುದು. ಈ ಯುವಕರು ಹಾವಿನ ಮುಂದೆ ನಿಂತು ನಗುತಾ ನಗುತಾ ಬಾಳು ನೀನು ನೂರು ವರುಷ… ಎಂಬ ಹಾಡನ್ನು ಹಾಡುತ್ತಾ ಹ್ಯಾಪಿ ಬರ್ತ್‌ ಡೇ ನಾಗು ಭಾಯ್‌ ಎನ್ನುತ್ತಾ ಭಯ-ಭಕ್ತಿ ಇಲ್ಲದೆ ನಮ್ಮ ಸಂಪ್ರದಾಯ, ಆಚರಣೆಗಳಿಗೆ ತಮಾಷೆ ಮಾಡುತ್ತಾ ಹುಚ್ಚಾಟ ಮೆರೆದಿದ್ದಾರೆ.

ಇದನ್ನೂ ಓದಿ: ಮೂಕ ಪ್ರಾಣಿಗಳನ್ನು ಸಹ ಬಿಡಲಿಲ್ಲ… ಮೃಗಾಲಯದ ಮೇಲೂ ದಾಳಿ ಮಾಡಿದ ಬಾಂಗ್ಲಾದೇಶದ ಪ್ರತಿಭಟನಾಕಾರರು

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 1.9 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಹಿಂದೂ ಧರ್ಮದ ಧಾರ್ಮಿಕ ನಂಬಿಕೆಯನ್ನು ಹೀಗೆ ಕೀಳು ಮಟ್ಟದಲ್ಲಿ ತಮಾಷೆಯಾಗಿ ತೋರಿಸುವುದು ಎಷ್ಟು ಸರಿʼ ಎಂದು ಕಿಡಿಕಾರಿದ್ದಾರೆ. ಇನ್ನೊಬ್ಬ ಬಳಕೆದಾರರು ʼಮಿತಿ ಮೀರಿದ ಹುಚ್ಚುತನʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ