AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಾಗಾಲ್ಯಾಂಡ್ ಸಚಿವರು ವಡಾ ಪಾವ್​ ಮಾಡಿದ ವಿಡಿಯೋ ವೈರಲ್

Vada Pav: ನಾಗಾಲ್ಯಾಂಡ್​ ಸಚಿವ ತೆಮ್ಜೆನ್​ ತಯಾರಿಸಿದ ವಡಾ ಪಾವ್ ವಿಡಿಯೋ ನೋಡಿ ನೆಟ್ಟಿಗರು ಹುರುಪುಗೊಂಡಿದ್ದಾರೆ. ಮುಂದಿನ ಸಲ ಬೆಂಗಾಲಿ ಖಾದ್ಯ ತಯಾರಿಸಿ, ಮಿಸಳ್​ ಪಾವ್ ತಯಾರಿಸಿ ಎಂದು ಫರಮಾಯಿಷ್​ ಹೊರಡಿಸುತ್ತಿದ್ದಾರೆ ನೆಟ್ಟಿಗರು. ಈ ವಿಡಿಯೋ ನೋಡಿದ ನೀವು ಖಂಡಿತ ಅಡುಗೆಮನೆಗೆ ಓಡುತ್ತೀರಿ ಇಲ್ಲವೇ ಆನ್​ಲೈನ್ ಆರ್ಡರ್ ಮಾಡುತ್ತೀರಿ!

Viral Video: ನಾಗಾಲ್ಯಾಂಡ್ ಸಚಿವರು ವಡಾ ಪಾವ್​ ಮಾಡಿದ ವಿಡಿಯೋ ವೈರಲ್
ನಾಗಾಲ್ಯಾಂಡ್ ಸಚಿವ ತೆಮ್ಜೆನ್​ ವಡಾ ಪಾವ್ ತಯಾರಿಸುತ್ತಿರುವುದು
ಶ್ರೀದೇವಿ ಕಳಸದ
|

Updated on: Oct 11, 2023 | 4:54 PM

Share

Nagaland: ನಾಗಾಲ್ಯಾಂಡ್ ಸಚಿವ ತೆಮ್ಜೆನ್ ಇಮ್ನಾ ಅಲಾಂಗ್ (Temjen Imna Along) ಸಾಮಾಜಿಕ ಜಾಲತಾಣದಲ್ಲಿ ಒಂದಿಲ್ಲಾ ಒಂದು ಚಟುವಟಿಕೆಯಿಂದ ತಮ್ಮ ಫಾಲೋವರ್​ಗಳ ಗಮನ ಸೆಳೆಯುತ್ತಿರುತ್ತಾರೆ.  ವಿನೋದಮಯ ಪ್ರವೃತ್ತಿಯಿಂದ ಎಲ್ಲರೆಲ್ಲರೂ ಉತ್ಸಾಹದಿಂದ ತಮ್ಮ ಪೋಸ್ಟ್​ನೆಡೆ ಪ್ರತಿಕ್ರಿಯಿಸುವಂತೆ ಮಾಡುತ್ತಿರುತ್ತಾರೆ. ಇದೀಗ ತೆಮ್ಜೆನ್​ ವಡಾ ಪಾವ್ (Vada Pav) ಮಾಡುವ ಮೂಲಕ ಸುದ್ದಿಯಲ್ಲಿದ್ದಾರೆ. ಈ ವಿಡಿಯೋ ನೋಡಿದವರೆಲ್ಲರಿಗೂ ಖಂಡಿತ ಬಾಯಲ್ಲಿ ನೀರೂರುವುದು ಗ್ಯಾರಂಟೀ, ಅಷ್ಟೊಂದು ಅಚ್ಚುಕಟ್ಟಾಗಿ ವಡಾ ಪಾವ್ ತಯಾರಿಸಿದ್ದಾರೆ. Xನಲ್ಲಿ ಅ.9ರಂದು ಈ ವಿಡಿಯೋ ಹಂಚಿಕೊಂಡಿದ್ದಾರೆ. ನೀವು ಪ್ರತಿಭಾವಂತರು, ಸಕಲಕಲಾವಲ್ಲಭರು ಅಂತೆಲ್ಲ ನೆಟ್ಟಿಗರು ಶ್ಲಾಘಿಸುತ್ತಿದ್ದಾರೆ.

ಇದನ್ನೂ ಓದಿ : Viral Video: ಇಂಡಿಯನ್ ಐಡಲ್; ಆಡಿಷನ್​ನಲ್ಲಿ ಶ್ರೇಯಾ ಘೋಷಾಲ್ ಅತ್ತಿದ್ದು ಈ ಕಾರಣಕ್ಕೆ 

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಸಚಿವರು ಈರುಳ್ಳಿ, ಮೆಣಸಿನಕಾಯಿ, ಬೆಳ್ಳುಳ್ಳಿ ಕತ್ತರಿಸುತ್ತಾರೆ. ಬೇಯಿಸಿದ ಆಲೂಗಡ್ಡೆಯನ್ನು ಹಿಸುಕುತ್ತಾರೆ. ನಂತರ ಕಡಲೆಹಿಟ್ಟಿನಲ್ಲಿ ಆಲೂಗಡ್ಡೆ ಉಂಡೆಯನ್ನು ಅದ್ದಿ ಕರಿಯುತ್ತಾರೆ. ಪಾವ್​ನ ಮಧ್ಯೆ ಇಟ್ಟು ಸವಿಯುತ್ತಾರೆ ಮತ್ತು ಅಲ್ಲಿದ್ದವರಿಗೆ ಸವಿಯಲು ಹೇಳುತ್ತಾರೆ.

ತೆಮ್ಜೆನ್​ ವಡಾ ಪಾವ್ ಮಾಡಿದ ವಿಡಿಯೋ

ಈತನಕ 37,000 ಜನರು ಈ ವಿಡಿಯೋ ನೋಡಿದ್ದಾರೆ. ಸುಮಾರು 2,000ಕ್ಕಿಂತಲೂ ಹೆಚ್ಚು ಜನ ಲೈಕ್ ಮಾಡಿದ್ದಾರೆ. 177 ಜನರು ರೀಪೊಸ್ಟ್ ಮಾಡಿದ್ದಾರೆ. ಅನೇಕರು ಪ್ರತಿಕ್ರಿಯಿಸಿದ್ದಾರೆ. ಇದು ಒಳ್ಳೆಯ ಸ್ಟಾರ್ಟರ್​, ಹಾಗಿದ್ದರೆ ಊಟಕ್ಕೇನು ನಮಗೆ? ಎಂದು ಕೇಳಿದ್ದಾರೆ ಒಬ್ಬರು. ನೀವು ಅತ್ಯಂತ ಪ್ರತಿಭಾವಂತರು, ಮುಂದಿನ ಸಲ ದಯವಿಟ್ಟು ಬಂಗಾಳಿ ಖಾದ್ಯ ತಯಾರಿಸಿದ್ದಾರೆ ಇನ್ನೊಬ್ಬರು. ಲವ್​ ಫ್ರಂ ಮಹಾರಾಷ್ಟ್ರ, ಮಿಸಳ್ ಪಾವ್ ತಯಾರಿಸಿ ಎಂದಿದ್ದಾರೆ ಮತ್ತೊಬ್ಬರು.

ಇದನ್ನೂ ಓದಿ : Viral Video: ದೆಹಲಿ; ಮೆಟ್ರೋದಲ್ಲಿ ಉಗಿಯುವ ಆಟ, ಅವನ ಬಾಯಿಯಲ್ಲಿ ಈಕೆ, ಇವಳ ಬಾಯಿಯಲ್ಲಿ ಅವನು 

ಮಹಾರಾಷ್ಟ್ರದ ಈ ಖಾದ್ಯ ಆಹಾ, ಬಹಳ ರುಚಿಯಾಗಿರುವಂತೆ ಕಾಣುತ್ತಿದೆ ಎಂದಿದ್ದಾರೆ ಒಬ್ಬರು. ಅದ್ಭುತ ಸರ್, ಬಾಯಿಯಲ್ಲಿ ನೀರೂರುತ್ತಿದೆ ಎಂದಿದ್ದಾರೆ ಇನ್ನೊಬ್ಬರು. ಸರ್ ನೀವು ರಾಜಕೀಯ ಬಿಟ್ಟು ಪೂರ್ಣಪ್ರಮಾಣದಲ್ಲಿ ಇದೇ ವೃತ್ತಿಯಲ್ಲಿ ತೊಡಗಿಕೊಳ್ಳಿ, ಇದು ನಿಮಗೆ ಸರಿಹೊಂದುತ್ತದೆ ಎಂದಿದ್ದಾರೆ ಮತ್ತೊಬ್ಬರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು