AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ್ತ್‌ಡೇ ಸೆಲೆಬ್ರೇಟ್‌ ಮಾಡಿಲ್ಲವೆಂದು ಮನೆಬಿಟ್ಟು ಹೋದ ಬಾಲಕ; ವಿಶೇಷವಾಗಿ ಬಾಲಕನ ಹುಟ್ಟುಹಬ್ಬ ಆಚರಿಸಿದ ಪೊಲೀಸರು

ಪೊಲೀಸರು ತಮ್ಮ ಕರ್ತವ್ಯದ ಜೊತೆಗೆ ದಯೆ, ಕಾಳಜಿ, ಮಾನವೀಯ ಕಾರ್ಯಗಳಿಂದಲೂ ಆಗಾಗ್ಗೆ ಜನಮನ ಗೆಲ್ಲುತ್ತಿರುತ್ತಾರೆ. ಇದೀಗ ಇಂತಹದ್ದೇ ಮತ್ತೊಂದು ಘಟನೆ ನಡೆದಿದ್ದು, ಪೊಲೀಸರು ಬಾಲಕನೊಬ್ಬನ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ್ದಾರೆ. ಮನೆಯವರು ಬರ್ತ್‌ಡೇ ಸೆಲೆಬ್ರೇಟ್‌ ಮಾಡಿಲ್ಲವೆಂದು ಕೋಪದಲ್ಲಿ ಮನೆ ಬಿಟ್ಟು ಹೋದ ಬಾಲಕನನ್ನು ಕರೆಸಿ ಕೇಕ್‌ ಕಟ್‌ ಮಾಡಿಸಿ, ಅವನ ಇಷ್ಟದಂತೆಯೇ ಪೊಲೀಸರು ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. ಈ ಕುರಿತ ಸುದ್ದಿಯೊಂದು ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಬರ್ತ್‌ಡೇ ಸೆಲೆಬ್ರೇಟ್‌ ಮಾಡಿಲ್ಲವೆಂದು ಮನೆಬಿಟ್ಟು ಹೋದ ಬಾಲಕ; ವಿಶೇಷವಾಗಿ ಬಾಲಕನ ಹುಟ್ಟುಹಬ್ಬ ಆಚರಿಸಿದ ಪೊಲೀಸರು
ವೈರಲ್​ ಫೋಟೋ
ಮಾಲಾಶ್ರೀ ಅಂಚನ್​
| Edited By: |

Updated on: Jan 31, 2025 | 4:52 PM

Share

ಮಕ್ಕಳು ಸಣ್ಣಪುಟ್ಟ ವಿಷಯಗಳಿಗೆ ಹಟ ಮಾಡುವುದು, ಕೋಪ ಮಾಡಿಕೊಳ್ಳುವುದು ಮಾಡುತ್ತಿರುತ್ತಾರೆ. ಅದರಲ್ಲೂ ಕೆಲ ತುಂಟ ಮಕ್ಕಳು ಮನೆಯಲ್ಲಿ ಜಗಳವಾಡಿ ಮನೆ ಬಿಟ್ಟು ಹೋಗಿದ್ದು ಕೂಡಾ ಇದೆ. ಅದೇ ರೀತಿ ಇಲ್ಲೊಬ್ಬ 10 ವರ್ಷ ವಯಸ್ಸಿನ ಬಾಲಕ ಮನೆಯವರು ತನ್ನ ಬರ್ತ್‌ಡೇ ಸೆಲೆಬ್ರೇಟ್‌ ಮಾಡಿಲ್ಲವೆಂದು ಕೋಪದಲ್ಲಿ ಮನೆಬಿಟ್ಟು ಹೋಗಿದ್ದಾನೆ. ಮನೆಯವರು ಈ ಬಗ್ಗೆ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದು, ಹಲವು ಹೊತ್ತಿನ ಹುಡುಕಾಟದ ಬಳಿಕ ಸಿಕ್ಕ ಆ ಬಾಲಕನಿಗೆ ಗದರದೇ, ಪೊಲೀಸರು ಆತನ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ್ದಾರೆ. ಹೌದು ಕೇಕ್‌ ಕಟ್‌ ಮಾಡಿಸಿ ಬಾಲಕನ ಹುಟ್ಟುಹಬ್ಬವನ್ನು ವಿಶೇಷಗೊಳಿಸಿದ್ದು, ಪೊಲೀಸರ ಈ ಮಾನವೀಯ ಕಾರ್ಯಕ್ಕೆ ಭಾರೀ ಶ್ಲಾಘನೆ ವ್ಯಕ್ತವಾಗಿದೆ.

ಈ ಘಟನೆ ನಾಗ್ಪರದ ವಾಠೋಡ ಎಂಬಲ್ಲಿ ನಡೆದಿದ್ದು, ಮನೆಯವರು ತನ್ನ ಬರ್ತ್‌ಡೇ ಸೆಲೆಬ್ರೇಟ್‌ ಮಾಡಿಲ್ಲವೆಂದು 10 ವರ್ಷದ ಬಾಲಕನೊಬ್ಬ ಮನೆಬಿಟ್ಟು ಹೋಗಿದ್ದಾನೆ. ನಂತರ ಪೊಲೀಸರೇ ಆತನ ಹುಟ್ಟುಹಬ್ಬವನ್ನು ಆಚರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಜನವರಿ 30 ರಂದು ಸಂಚಿತ್‌ ಅರವಿಂದ್‌ ಎಂಬ ಹುಡುಗನ ಹುಟ್ಟುಹಬ್ಬವಿತ್ತು. ಆದರೆ ಕಾರಣಾಂತರಗಳಿಂದ ಆತನ ಮನೆಯವರು ಬರ್ತ್‌ಡೇ ಸೆಲೆಬ್ರೇಟ್‌ ಮಾಡಿಲ್ಲ. ಇದರಿಂದ ಬೇಸರಗೊಂಡ ಸಂಚಿತ್‌ ಬೆಳಗ್ಗೆ 11 ಗಂಟೆಯ ಸುಮಾರಿಗೆ ಮನೆ ಬಿಟ್ಟು ಹೋಗಿದ್ದಾನೆ. ಅಕ್ಕಪಕ್ಕ ಹುಡುಕಿದರೂ ಸಂಚಿತ್‌ ಎಲ್ಲೂ ಕಾಣಿಸಿದೇ ಇದ್ದ ಕಾರಣ ಆತನ ಪೋಷಕರು ಪೊಲೀಸರಿಗೆ ದೂರನ್ನು ನೀಡಿದ್ದಾರೆ. ತಕ್ಷಣ ಪೊಲೀಸರು ಬಾಲಕನಿಗಾಗಿ ಹುಡುಕಾಟ ನಡೆಸಲಾರಂಭಿಸಿದರು. ಹೀಗೆ ಸಂಜೆಯ ವೇಳೆ ಗಸ್ತು ತಿರುಗುತ್ತಿದ್ದ ಕಾನ್‌ಸ್ಟೇಬಲ್‌ ಸ್ವಾಮಿನಾರಾಯಣ ದೇವಸ್ಥಾನದ ಬಳಿ ಸಂಚಿತ್‌ ಇರುವುದು ಪತ್ತೆ ಹಚ್ಚಿ ಠಾಣೆಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ಬಾಲಕನೊಂದಿಗೆ ಮಾತನಾಡಿ, ಆತನನ್ನು ಮನೆಗೆ ಕರೆದುಕೊಂಡು ಹೋಗಿ ಕೇಕ್‌ ಕಟ್‌ ಮಾಡಿಸಿ ಆತನ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ್ದಾರೆ. ಹೀಗೆ ಬಾಲಕನ ಹುಟ್ಟುಹಬ್ಬವನ್ನು ಸ್ಮರಣೀಯವಾಗಿ ಆಚರಿಸುವ ಮೂಲಕ ಮಾನವೀಯತೆಯನ್ನು ಮರೆದಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ