AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ್ತ್‌ಡೇ ಸೆಲೆಬ್ರೇಟ್‌ ಮಾಡಿಲ್ಲವೆಂದು ಮನೆಬಿಟ್ಟು ಹೋದ ಬಾಲಕ; ವಿಶೇಷವಾಗಿ ಬಾಲಕನ ಹುಟ್ಟುಹಬ್ಬ ಆಚರಿಸಿದ ಪೊಲೀಸರು

ಪೊಲೀಸರು ತಮ್ಮ ಕರ್ತವ್ಯದ ಜೊತೆಗೆ ದಯೆ, ಕಾಳಜಿ, ಮಾನವೀಯ ಕಾರ್ಯಗಳಿಂದಲೂ ಆಗಾಗ್ಗೆ ಜನಮನ ಗೆಲ್ಲುತ್ತಿರುತ್ತಾರೆ. ಇದೀಗ ಇಂತಹದ್ದೇ ಮತ್ತೊಂದು ಘಟನೆ ನಡೆದಿದ್ದು, ಪೊಲೀಸರು ಬಾಲಕನೊಬ್ಬನ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ್ದಾರೆ. ಮನೆಯವರು ಬರ್ತ್‌ಡೇ ಸೆಲೆಬ್ರೇಟ್‌ ಮಾಡಿಲ್ಲವೆಂದು ಕೋಪದಲ್ಲಿ ಮನೆ ಬಿಟ್ಟು ಹೋದ ಬಾಲಕನನ್ನು ಕರೆಸಿ ಕೇಕ್‌ ಕಟ್‌ ಮಾಡಿಸಿ, ಅವನ ಇಷ್ಟದಂತೆಯೇ ಪೊಲೀಸರು ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. ಈ ಕುರಿತ ಸುದ್ದಿಯೊಂದು ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಬರ್ತ್‌ಡೇ ಸೆಲೆಬ್ರೇಟ್‌ ಮಾಡಿಲ್ಲವೆಂದು ಮನೆಬಿಟ್ಟು ಹೋದ ಬಾಲಕ; ವಿಶೇಷವಾಗಿ ಬಾಲಕನ ಹುಟ್ಟುಹಬ್ಬ ಆಚರಿಸಿದ ಪೊಲೀಸರು
ವೈರಲ್​ ಫೋಟೋ
ಮಾಲಾಶ್ರೀ ಅಂಚನ್​
| Edited By: |

Updated on: Jan 31, 2025 | 4:52 PM

Share

ಮಕ್ಕಳು ಸಣ್ಣಪುಟ್ಟ ವಿಷಯಗಳಿಗೆ ಹಟ ಮಾಡುವುದು, ಕೋಪ ಮಾಡಿಕೊಳ್ಳುವುದು ಮಾಡುತ್ತಿರುತ್ತಾರೆ. ಅದರಲ್ಲೂ ಕೆಲ ತುಂಟ ಮಕ್ಕಳು ಮನೆಯಲ್ಲಿ ಜಗಳವಾಡಿ ಮನೆ ಬಿಟ್ಟು ಹೋಗಿದ್ದು ಕೂಡಾ ಇದೆ. ಅದೇ ರೀತಿ ಇಲ್ಲೊಬ್ಬ 10 ವರ್ಷ ವಯಸ್ಸಿನ ಬಾಲಕ ಮನೆಯವರು ತನ್ನ ಬರ್ತ್‌ಡೇ ಸೆಲೆಬ್ರೇಟ್‌ ಮಾಡಿಲ್ಲವೆಂದು ಕೋಪದಲ್ಲಿ ಮನೆಬಿಟ್ಟು ಹೋಗಿದ್ದಾನೆ. ಮನೆಯವರು ಈ ಬಗ್ಗೆ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದು, ಹಲವು ಹೊತ್ತಿನ ಹುಡುಕಾಟದ ಬಳಿಕ ಸಿಕ್ಕ ಆ ಬಾಲಕನಿಗೆ ಗದರದೇ, ಪೊಲೀಸರು ಆತನ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ್ದಾರೆ. ಹೌದು ಕೇಕ್‌ ಕಟ್‌ ಮಾಡಿಸಿ ಬಾಲಕನ ಹುಟ್ಟುಹಬ್ಬವನ್ನು ವಿಶೇಷಗೊಳಿಸಿದ್ದು, ಪೊಲೀಸರ ಈ ಮಾನವೀಯ ಕಾರ್ಯಕ್ಕೆ ಭಾರೀ ಶ್ಲಾಘನೆ ವ್ಯಕ್ತವಾಗಿದೆ.

ಈ ಘಟನೆ ನಾಗ್ಪರದ ವಾಠೋಡ ಎಂಬಲ್ಲಿ ನಡೆದಿದ್ದು, ಮನೆಯವರು ತನ್ನ ಬರ್ತ್‌ಡೇ ಸೆಲೆಬ್ರೇಟ್‌ ಮಾಡಿಲ್ಲವೆಂದು 10 ವರ್ಷದ ಬಾಲಕನೊಬ್ಬ ಮನೆಬಿಟ್ಟು ಹೋಗಿದ್ದಾನೆ. ನಂತರ ಪೊಲೀಸರೇ ಆತನ ಹುಟ್ಟುಹಬ್ಬವನ್ನು ಆಚರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಜನವರಿ 30 ರಂದು ಸಂಚಿತ್‌ ಅರವಿಂದ್‌ ಎಂಬ ಹುಡುಗನ ಹುಟ್ಟುಹಬ್ಬವಿತ್ತು. ಆದರೆ ಕಾರಣಾಂತರಗಳಿಂದ ಆತನ ಮನೆಯವರು ಬರ್ತ್‌ಡೇ ಸೆಲೆಬ್ರೇಟ್‌ ಮಾಡಿಲ್ಲ. ಇದರಿಂದ ಬೇಸರಗೊಂಡ ಸಂಚಿತ್‌ ಬೆಳಗ್ಗೆ 11 ಗಂಟೆಯ ಸುಮಾರಿಗೆ ಮನೆ ಬಿಟ್ಟು ಹೋಗಿದ್ದಾನೆ. ಅಕ್ಕಪಕ್ಕ ಹುಡುಕಿದರೂ ಸಂಚಿತ್‌ ಎಲ್ಲೂ ಕಾಣಿಸಿದೇ ಇದ್ದ ಕಾರಣ ಆತನ ಪೋಷಕರು ಪೊಲೀಸರಿಗೆ ದೂರನ್ನು ನೀಡಿದ್ದಾರೆ. ತಕ್ಷಣ ಪೊಲೀಸರು ಬಾಲಕನಿಗಾಗಿ ಹುಡುಕಾಟ ನಡೆಸಲಾರಂಭಿಸಿದರು. ಹೀಗೆ ಸಂಜೆಯ ವೇಳೆ ಗಸ್ತು ತಿರುಗುತ್ತಿದ್ದ ಕಾನ್‌ಸ್ಟೇಬಲ್‌ ಸ್ವಾಮಿನಾರಾಯಣ ದೇವಸ್ಥಾನದ ಬಳಿ ಸಂಚಿತ್‌ ಇರುವುದು ಪತ್ತೆ ಹಚ್ಚಿ ಠಾಣೆಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ಬಾಲಕನೊಂದಿಗೆ ಮಾತನಾಡಿ, ಆತನನ್ನು ಮನೆಗೆ ಕರೆದುಕೊಂಡು ಹೋಗಿ ಕೇಕ್‌ ಕಟ್‌ ಮಾಡಿಸಿ ಆತನ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ್ದಾರೆ. ಹೀಗೆ ಬಾಲಕನ ಹುಟ್ಟುಹಬ್ಬವನ್ನು ಸ್ಮರಣೀಯವಾಗಿ ಆಚರಿಸುವ ಮೂಲಕ ಮಾನವೀಯತೆಯನ್ನು ಮರೆದಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ