ಗಂಡ ಹೆಂಡತಿ ಜಗಳ 3 ವರ್ಷದ ಮಗುವಿನ ಕೊಲೆಯಲ್ಲಿ ಅಂತ್ಯ

ಗಂಡ- ಹೆಂಡತಿಯ ತೀವ್ರ ವಾಗ್ವಾದದ ಸಮಯದಲ್ಲಿ, ಅವರ ಮೂರು ವರ್ಷದ ಮಗು ಅಳಲು ಪ್ರಾರಂಭಿಸಿದ್ದು,ಕೋಪದ ಭರದಲ್ಲಿ ಮಹಿಳೆ ತನ್ನ ಮಗುವನ್ನು ಹೊರಗೆ ಕರೆದೊಯ್ದು ಮರದ ಕೆಳಗೆ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ.

ಗಂಡ ಹೆಂಡತಿ ಜಗಳ 3 ವರ್ಷದ ಮಗುವಿನ ಕೊಲೆಯಲ್ಲಿ ಅಂತ್ಯ
ಗಂಡ ಹೆಂಡತಿ ಜಗಳ 3 ವರ್ಷದ ಮಗುವಿನ ಕೊಲೆಯಲ್ಲಿ ಅಂತ್ಯ (ಸಾಂದರ್ಭಿಕ ಚಿತ್ರ)
Follow us
|

Updated on:May 22, 2024 | 6:04 PM

ಮಹಾರಾಷ್ಟ್ರ: ಗಂಡ ಹೆಂಡತಿ ಜಗಳ 3 ವರ್ಷದ ಮಗುವಿನ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಪತಿಯೊಂದಿಗೆ ಜಗಳವಾಡಿದ ಮಹಿಳೆ ತನ್ನ ಕೋಪವನ್ನು ಮಗುವಿನ ಮೇಲೆ ತೋರಿಸಿ ಕೊಂದೇ ಬಿಟ್ಟಿದ್ದಾಳೆ. ಬಳಿಕ ಮಗುವಿನ ಶವದೊಂದಿಗೆ 4 ಕಿಲೋಮೀಟರ್‌ಗಳವರೆಗೆ ಬೀದಿಯಲ್ಲಿ ಓಡಾಡಿದ್ದಾಳೆ.

ಪೊಲೀಸ್ ಅಧಿಕಾರಿಗಳ ಪ್ರಕಾರ, ಘಟನೆ ಸೋಮವಾರ ಸಂಜೆ ಎಂಐಡಿಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಯನ್ನು ಟ್ವಿಂಕಲ್ ರಾವುತ್ (23) ಎಂದು ಗುರುತಿಸಲಾಗಿದೆ. ನಾಲ್ಕು ವರ್ಷಗಳ ಹಿಂದೆ ಉದ್ಯೋಗದಕ್ಕಾಗಿ ತನ್ನ ಪತಿ ರಾಮ ಲಕ್ಷ್ಮಣ್ ರಾವುತ್ (24) ಜೊತೆಗೆ ನಾಗ್ಪುರಕ್ಕೆ ಬಂದಿದ್ದರು ಎಂದು ಪಿಟಿಐ ವರದಿ ಮಾಡಿದೆ.

ದಂಪತಿಗಳು ಪೇಪರ್ ಉತ್ಪನ್ನಗಳ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಎಂಐಡಿಸಿ ಪ್ರದೇಶದ ಹಿಂಗ್ನಾ ರಸ್ತೆಯಲ್ಲಿರುವ ಸಂಸ್ಥೆಯ ಆವರಣದಲ್ಲಿದ್ದ ಕೋಣೆಯಲ್ಲಿ ವಾಸಿಸುತ್ತಿದ್ದರು. ಸೋಮವಾರ ಸಂಜೆ 4 ಗಂಟೆ ಸುಮಾರಿಗೆ ಇಬ್ಬರೂ ಜಗಳವಾಡಿದ್ದಾರೆ ಎಂದು ಎಂಐಡಿಸಿ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ. ತೀವ್ರ ವಾಗ್ವಾದದ ಸಮಯದಲ್ಲಿ, ಅವರ ಮೂರು ವರ್ಷದ ಮಗು ಅಳಲು ಪ್ರಾರಂಭಿಸಿದ್ದು,ಕೋಪದ ಭರದಲ್ಲಿ ಮಹಿಳೆ ತನ್ನ ಮಗುವನ್ನು ಹೊರಗೆ ಕರೆದೊಯ್ದು ಮರದ ಕೆಳಗೆ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ.

ಇದನ್ನೂ ಓದಿ: ಓಂಕಾರದ ಮಹಿಮೆ; ತಾಯಿ ಓಂಕಾರವನ್ನು ಪಠಿಸುತ್ತಿದ್ದಂತೆ ಅಳುವುದನ್ನು ನಿಲ್ಲಿಸಿದ ಮಗು

ನಂತರ ದೇಹದೊಂದಿಗೆ ಸುಮಾರು ನಾಲ್ಕು ಕಿಲೋಮೀಟರ್ ಸುತ್ತಾಡಿದಳು. ರಾತ್ರಿ 8 ಗಂಟೆ ಸುಮಾರಿಗೆ ಪೊಲೀಸ್ ಗಸ್ತು ವಾಹನವನ್ನು ನೋಡಿದ ಆಕೆ ನಡೆದ ಘಟನೆಯನ್ನು ಅಧಿಕಾರಿಗಳಿಗೆ ತಿಳಿಸಿದ್ದಾಳೆ. ಪೊಲೀಸರು ಮಗುವನ್ನು ಆಸ್ಪತ್ರೆಗೆ ಕರೆದೊಯ್ದರು, ಆದರೆ ಮಗು ಅದಾಗಲೇ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಎಂಐಡಿಸಿ ಪೊಲೀಸರು ನಂತರ ಮಹಿಳೆಯನ್ನು ಬಂಧಿಸಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಕೇಸು ದಾಖಲಿಸಿದ್ದು, ಆಕೆಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಮೇ 24 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗುವುದು ಎಂದು ಅಧಿಕಾರಿ ತಿಳಿಸಿರುವುದು ವರದಿಯಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 6:00 pm, Wed, 22 May 24

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ