AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡ ಹೆಂಡತಿ ಜಗಳ 3 ವರ್ಷದ ಮಗುವಿನ ಕೊಲೆಯಲ್ಲಿ ಅಂತ್ಯ

ಗಂಡ- ಹೆಂಡತಿಯ ತೀವ್ರ ವಾಗ್ವಾದದ ಸಮಯದಲ್ಲಿ, ಅವರ ಮೂರು ವರ್ಷದ ಮಗು ಅಳಲು ಪ್ರಾರಂಭಿಸಿದ್ದು,ಕೋಪದ ಭರದಲ್ಲಿ ಮಹಿಳೆ ತನ್ನ ಮಗುವನ್ನು ಹೊರಗೆ ಕರೆದೊಯ್ದು ಮರದ ಕೆಳಗೆ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ.

ಗಂಡ ಹೆಂಡತಿ ಜಗಳ 3 ವರ್ಷದ ಮಗುವಿನ ಕೊಲೆಯಲ್ಲಿ ಅಂತ್ಯ
ಗಂಡ ಹೆಂಡತಿ ಜಗಳ 3 ವರ್ಷದ ಮಗುವಿನ ಕೊಲೆಯಲ್ಲಿ ಅಂತ್ಯ (ಸಾಂದರ್ಭಿಕ ಚಿತ್ರ)
ಅಕ್ಷತಾ ವರ್ಕಾಡಿ
|

Updated on:May 22, 2024 | 6:04 PM

Share

ಮಹಾರಾಷ್ಟ್ರ: ಗಂಡ ಹೆಂಡತಿ ಜಗಳ 3 ವರ್ಷದ ಮಗುವಿನ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಪತಿಯೊಂದಿಗೆ ಜಗಳವಾಡಿದ ಮಹಿಳೆ ತನ್ನ ಕೋಪವನ್ನು ಮಗುವಿನ ಮೇಲೆ ತೋರಿಸಿ ಕೊಂದೇ ಬಿಟ್ಟಿದ್ದಾಳೆ. ಬಳಿಕ ಮಗುವಿನ ಶವದೊಂದಿಗೆ 4 ಕಿಲೋಮೀಟರ್‌ಗಳವರೆಗೆ ಬೀದಿಯಲ್ಲಿ ಓಡಾಡಿದ್ದಾಳೆ.

ಪೊಲೀಸ್ ಅಧಿಕಾರಿಗಳ ಪ್ರಕಾರ, ಘಟನೆ ಸೋಮವಾರ ಸಂಜೆ ಎಂಐಡಿಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಯನ್ನು ಟ್ವಿಂಕಲ್ ರಾವುತ್ (23) ಎಂದು ಗುರುತಿಸಲಾಗಿದೆ. ನಾಲ್ಕು ವರ್ಷಗಳ ಹಿಂದೆ ಉದ್ಯೋಗದಕ್ಕಾಗಿ ತನ್ನ ಪತಿ ರಾಮ ಲಕ್ಷ್ಮಣ್ ರಾವುತ್ (24) ಜೊತೆಗೆ ನಾಗ್ಪುರಕ್ಕೆ ಬಂದಿದ್ದರು ಎಂದು ಪಿಟಿಐ ವರದಿ ಮಾಡಿದೆ.

ದಂಪತಿಗಳು ಪೇಪರ್ ಉತ್ಪನ್ನಗಳ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಎಂಐಡಿಸಿ ಪ್ರದೇಶದ ಹಿಂಗ್ನಾ ರಸ್ತೆಯಲ್ಲಿರುವ ಸಂಸ್ಥೆಯ ಆವರಣದಲ್ಲಿದ್ದ ಕೋಣೆಯಲ್ಲಿ ವಾಸಿಸುತ್ತಿದ್ದರು. ಸೋಮವಾರ ಸಂಜೆ 4 ಗಂಟೆ ಸುಮಾರಿಗೆ ಇಬ್ಬರೂ ಜಗಳವಾಡಿದ್ದಾರೆ ಎಂದು ಎಂಐಡಿಸಿ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ. ತೀವ್ರ ವಾಗ್ವಾದದ ಸಮಯದಲ್ಲಿ, ಅವರ ಮೂರು ವರ್ಷದ ಮಗು ಅಳಲು ಪ್ರಾರಂಭಿಸಿದ್ದು,ಕೋಪದ ಭರದಲ್ಲಿ ಮಹಿಳೆ ತನ್ನ ಮಗುವನ್ನು ಹೊರಗೆ ಕರೆದೊಯ್ದು ಮರದ ಕೆಳಗೆ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ.

ಇದನ್ನೂ ಓದಿ: ಓಂಕಾರದ ಮಹಿಮೆ; ತಾಯಿ ಓಂಕಾರವನ್ನು ಪಠಿಸುತ್ತಿದ್ದಂತೆ ಅಳುವುದನ್ನು ನಿಲ್ಲಿಸಿದ ಮಗು

ನಂತರ ದೇಹದೊಂದಿಗೆ ಸುಮಾರು ನಾಲ್ಕು ಕಿಲೋಮೀಟರ್ ಸುತ್ತಾಡಿದಳು. ರಾತ್ರಿ 8 ಗಂಟೆ ಸುಮಾರಿಗೆ ಪೊಲೀಸ್ ಗಸ್ತು ವಾಹನವನ್ನು ನೋಡಿದ ಆಕೆ ನಡೆದ ಘಟನೆಯನ್ನು ಅಧಿಕಾರಿಗಳಿಗೆ ತಿಳಿಸಿದ್ದಾಳೆ. ಪೊಲೀಸರು ಮಗುವನ್ನು ಆಸ್ಪತ್ರೆಗೆ ಕರೆದೊಯ್ದರು, ಆದರೆ ಮಗು ಅದಾಗಲೇ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಎಂಐಡಿಸಿ ಪೊಲೀಸರು ನಂತರ ಮಹಿಳೆಯನ್ನು ಬಂಧಿಸಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಕೇಸು ದಾಖಲಿಸಿದ್ದು, ಆಕೆಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಮೇ 24 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗುವುದು ಎಂದು ಅಧಿಕಾರಿ ತಿಳಿಸಿರುವುದು ವರದಿಯಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 6:00 pm, Wed, 22 May 24

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ