AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: “ನಮಾಜ್” ಸಂಸ್ಕೃತ ಪದ; ವೈರಲ್ ಆಗುತ್ತಿದೆ ಮುಸ್ಲಿಂ ಧರ್ಮಗುರು ಹೇಳಿಕೆ

ನಮಾಜ್ ಎನ್ನುವುದು ಸಂಸ್ಕೃತ ಪದವಂತೆ. ಈ ಕುರಿತ ಅರ್ಥಪೂರ್ಣ ಮಾಹಿತಿಯೊಂದನ್ನು ಮುಸ್ಲಿಂ ಧರ್ಮ ಗುರುಗಳೊಬ್ಬರು ಸಂದರ್ಶನವೊಂದರಲ್ಲಿ ಹಂಚಿಕೊಂಡಿದ್ದು, ಈ ಕುರಿತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

Video: ನಮಾಜ್ ಸಂಸ್ಕೃತ ಪದ; ವೈರಲ್ ಆಗುತ್ತಿದೆ ಮುಸ್ಲಿಂ ಧರ್ಮಗುರು ಹೇಳಿಕೆ
ವೈರಲ್​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Jul 23, 2024 | 5:54 PM

Share

ಆಧ್ಯಾತ್ಮ ಭಾವವನ್ನು ವೃದ್ಧಿಗೊಳಿಸಿ ಆತ್ಮಶುದ್ಧಿಗಾಗಿ ಮುಸ್ಲಿಮರು ಪ್ರತಿದಿನ 5 ಬಾರಿ ನಮಾಜ್ ಮಾಡುತ್ತಾರೆ. ಹೆಚ್ಚಿನವರು ಈ ನಮಾಜ್ ಎಂಬ ಪದ ಉರ್ದು ಭಾಷೆಯಿಂದ ಬಂದಿರಬಹುದು ಅಂತ ಭಾವಿಸಿರುತ್ತಾರೆ. ಆದ್ರೆ ನಿಮ್ಗೊತ್ತಾ ನಮಾಜ್ ಎಂಬುದು ಸಂಸ್ಕೃತ ಪದ. ಈ ಕುರಿತ ಮಾಹಿತಿಯನ್ನು ಮುಸ್ಲಿಂ ಧರ್ಮ ಗುರುಗಳೊಬ್ಬರು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಸಂದರ್ಶನವೊಂದರಲ್ಲಿ ಅಖಿಲ ಭಾರತ ಇಮಾಮ್ ಸಂಘದ ಮುಖ್ಯಸ್ಥ ಡಾ. ಇಮಾಮ್ ಉಮರ್ ಇಲ್ಯಾಸಿ ಅವರು ನಮಾಜ್ ಎಂಬುದು ಸಂಸ್ಕೃತ ಪದ ಎಂಬ ವಿಚಾರವನ್ನು ಹಂಚಿಕೊಂಡಿದ್ದಾರೆ. ಅವರು ಹೇಳುತ್ತಾರೆ, ನಮಾಜ್ ಎಂಬ ಪದದ ಮೂಲ ಭಾರತದ್ದು, ಅದು ಸಂಸ್ಕೃತ ಪದವಾದ ನಮಃ ದಿಂದ ಬಂದಿದೆ. ಅದರ ಅರ್ಥ ಈಶ್ವರನಿಗೆ ತಲೆ ಬಾಗಿ ನಮಸ್ಕರಿಸುವುದು ಅಂತಾ. ಅರಬ್ ದೇಶದವರಿಗೆ ನಮಾಜ್ ಎಂಬ ಪದದ ಬಗ್ಗೆ ಗೊತ್ತಿಲ್ಲ. ಅವರು ಪ್ರಾರ್ಥನೆಗೆ ಸಲಾಹ್ ಎಂದು ಹೇಳುತ್ತಾರೆ ಎಂಬುದನ್ನು ವಿವರಿಸಿದ್ದಾರೆ.

ಇದನ್ನೂ ಓದಿ: ಗಂಗಾ ನದಿಯಲ್ಲಿ ಮುಳುಗುತ್ತಿದ್ದ ಶಿವಭಕ್ತನ ಪ್ರಾಣ ಉಳಿಸಿದ ಮುಸ್ಲಿಂ ಯೋಧ; ಇದು ಭಾರತೀಯ ಸಂಸ್ಕೃತಿ ಎಂದ ನೆಟ್ಟಿಗರು

ಈ ಕುರಿತ ಇಂಟೆರೆಸ್ಟಿಂಗ್ ವಿಡಿಯೋವನ್ನು religionworld ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ಜುಲೈ 9 ರಂದು ಹಂಚಿಕೊಳ್ಳಲಾದ ಈ ವಿಡಿಯೋ 5 ಮಿಲಿಯನ್ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ‘ಈ ವಿಚಾರ ನಮಗೆ ಗೊತ್ತೇ ಇರ್ಲಿಲ್ಲ, ಇಂತಹ ಅದ್ಭುತ ಮಾಹಿತಿ ತಿಳಿಸಿಕೊಟ್ಟಿದ್ದಕ್ಕೆ ನಿಮಗೆ ಧನ್ಯವಾದಗಳು’ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ‘ಒಳ್ಳೆಯ ಮಾಹಿತಿ’ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು