AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB Fans: ನಾಮಕರಣ ಕಾರ್ಯಕ್ರಮದಲ್ಲೂ ಆರ್​ಸಿಬಿ ಹವಾ!;ವಿಡಿಯೋ ವೈರಲ್​​

ವಿಡಿಯೋದಲ್ಲಿ ನಾಮಕರಣ ಕಾರ್ಯಕ್ರಮವನ್ನು ಕಾಣಬಹುದು. ಈ ವೇಳೆ ಮಗುವಿನ ಹೆಸರನ್ನು ಆರ್​ಸಿಬಿ ಜೆರ್ಸಿ ಮೂಲಕ ಅನಾವರಣಗೊಳಿಸಲಾಗಿದೆ. ಆರ್​ಸಿಬಿ ಜೆರ್ಸಿ ಬಳಸಿ ಅದರ ಮೇಲೆ ಮಗುವಿನ ಹೆಸರು ಪ್ರಿಂಟ್​​​ ಮಾಡಲಾಗಿದೆ.

RCB Fans: ನಾಮಕರಣ ಕಾರ್ಯಕ್ರಮದಲ್ಲೂ ಆರ್​ಸಿಬಿ ಹವಾ!;ವಿಡಿಯೋ ವೈರಲ್​​
ನಾಮಕರಣ ಕಾರ್ಯಕ್ರಮದಲ್ಲೂ ಆರ್​ಸಿಬಿ ಹವಾ
ಅಕ್ಷತಾ ವರ್ಕಾಡಿ
|

Updated on: Apr 16, 2024 | 6:42 PM

Share

ಈ ಸಲ ಕಪ್ ನಮ್ದೇ ಎಂದು ಕಪ್‌ಗಾಗಿ ಕಾಯುತ್ತಿರುವ, ಅಪಾರ ಅಭಿಮಾನಿಗಳನ್ನು ಹೊಂದಿರುವ ಆರ್‌ಸಿಬಿ ತಂಡದ ಕ್ರೇಜ್ ಯಾವತ್ತೂ ಕಡಿಮೆಯಾಗಲ್ಲ. ರಾಯಲ್ ಚಾಲೇಂಜರ್ಸ್ ಬೆಂಗಳೂರು ಗೆದ್ದರೂ ಸೋತರೂ ಕೂಡ ಈತಂಡಕ್ಕೆ ಭಾರತದಲ್ಲಿ ಮಾತ್ರವಲ್ಲದೇ ವಿಶ್ವದಾದ್ಯಂತ ಲಕ್ಷಾಂತರ ಅಭಿಮಾನಿಗಳಿದ್ದಾರೆ. ಆರ್‌ಸಿಬಿ ತಂಡ ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ ಜನಪ್ರಿಯ ತಂಡ ಎಂದೇ ಹೇಳಬಹುದು. ಸದ್ಯ ಇದೀಗ ವಿಡಿಯೋವೊಂದು ವೈರಲ್​​ ಆಗಿದ್ದು, ಆರ್​ಸಿಬಿ ಅಭಿಮಾನಿಗಳ ಕ್ರೇಜ್​​ ಯಾವ ರೀತಿಯಲ್ಲಿ ಇದೆ ಎಂಬುದನ್ನು ಕಾಣಬಹುದು. ಮಗುವಿನ ನಾಮಕರಣ ಕಾರ್ಯಕ್ರಮದಲ್ಲೂ ಆರ್​​ ಸಿ ಬಿ ಕ್ರೇಜ್​​ ಕಂಡು ಅಭಿಮಾನಿಗಳು ಫುಲ್​​ ಖುಷಿಯಾಗಿದ್ದಾರೆ. ಸದ್ಯ ವಿಡಿಯೋವೊಂದು ವೈರಲ್​​ ಆಗಿದ್ದು, ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗಿದೆ.

@7eventzz ಎಂಬ ಇನ್ಟ್ಸಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡಿರುವ ವಿಡಿಯೋವೊಂದು ಸದ್ಯ ಎಲ್ಲೆಡೆ ವೈರಲ್​​ ಆಗುತ್ತಿದೆ. ವಿಡಿಯೋದಲ್ಲಿ ನಾಮಕರಣ ಕಾರ್ಯಕ್ರಮವನ್ನು ಕಾಣಬಹುದು. ಈ ವೇಳೆ ಮಗುವಿನ ಹೆಸರನ್ನು ಆರ್​ಸಿಬಿ ಜೆರ್ಸಿ ಮೂಲಕ ಅನಾವರಣಗೊಳಿಸಲಾಗಿದೆ. ಆರ್​ಸಿಬಿ ಜೆರ್ಸಿ ಬಳಸಿ ಅದರ ಮೇಲೆ ಮಗುವಿನ ಹೆಸರು ಪ್ರಿಂಟ್​​​ ಮಾಡಲಾಗಿದೆ. ಮಗುವಿನ ಹೆಸರು ಶರ್ವಿಲ್​​ ಮತ್ತು ನಂಬರ್​​ 21 ಎಂದು ಕೂಡ ಜೆರ್ಸಿಯಲ್ಲಿ ಬರೆಸಲಾಗಿದೆ.

View this post on Instagram

A post shared by 7eventzz.com (@7eventzz.co)

ಇದನ್ನೂ ಓದಿ: ನಿಮ್ಮ ಸಂಗಾತಿಯೊಂದಿಗೆ ಸ್ನಾನ ಮಾಡಿ ನೀರು ಉಳಿಸಿ; ಸರ್ಕಾರ ಘೋಷಣೆ

ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್​ಟಿಗರು ಬಗೆಬಗೆಯಾಗಿ ಕಾಮೆಂಟ್​ ಮಾಡಿದ್ದಾರೆ. “ಆರ್​​ಸಿಬಿ ಗತ್ತು ಎಲ್ಲರಿಗೂ ಗೊತ್ತು” ಎಂದು ನೆಟ್ಟಿಗರೊಬ್ಬರು ಕಾಮೆಂಟ್​ ಮಾಡಿದರೆ ಮತ್ತೊಬ್ಬರು “ಈ ಸಲ ಕಪ್​ ನಮ್ದೇ” ಎಂದು ಕಾಮೆಂಟ್​ ಮಾಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ