AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೈಲಾಸ ಪರ್ವತದಲ್ಲಿ ಶಿವ; ‘ಈಕೆ ಪಾರ್ವತಿಯ ಅವತಾರ, ಗಾಢನಿದ್ರೆಯಿಂದ ನಮ್ಮೆಲ್ಲರನ್ನು ಎಚ್ಚರಿಸುತ್ತಿದ್ದಾರೆ’

India : 'ದೇಶದ ಭವಿಷ್ಯ ಉಜ್ವಲವಾಗಿದೆ! ಈ ಉಪನ್ಯಾಸದ ಹಕ್ಕುಗಳನ್ನು NASA ಉಪಗ್ರಹದಿಂದ ಪ್ರಮಾಣೀಕರಿಸಲಾಗಿದೆ. ನೆಹರೂ ಭಾರತವನ್ನು ಮುನ್ನಡೆಸಿದರು, ಮೋದಿ ಮತ್ತೆ ಕತ್ತಲೆಯೆಡೆ ಕೊಂಡೊಯ್ಯುತ್ತಿದ್ದಾರೆ' ಎಂದೆನ್ನುತ್ತಿದ್ದಾರೆ ನೆಟ್ಟಿಗರು.

Viral Video: ಕೈಲಾಸ ಪರ್ವತದಲ್ಲಿ ಶಿವ; 'ಈಕೆ ಪಾರ್ವತಿಯ ಅವತಾರ, ಗಾಢನಿದ್ರೆಯಿಂದ ನಮ್ಮೆಲ್ಲರನ್ನು ಎಚ್ಚರಿಸುತ್ತಿದ್ದಾರೆ'
ಕೈಲಾಸ ಪರ್ವತದ ಮೇಲೆ ಶಿವನ ವದನ ಮೂಡಿರುವುದು!?
ಶ್ರೀದೇವಿ ಕಳಸದ
|

Updated on: Jul 27, 2023 | 12:45 PM

Share

Kailash Parvat: ‘ಕಳೆದ 21,000 ವರ್ಷಗಳಿಂದ ಕೈಲಾಸ ಪರ್ವತದಲ್ಲಿ ಶಿವನು ಪಾರ್ವತಿಯೊಂದಿಗೆ ಧ್ಯಾನಮಗ್ನನಾಗಿದ್ದಾನೆ. 2016ರಲ್ಲಿ ನಾಸಾ ಉಪಗ್ರಹದ (Nasa) ಮೂಲಕ ಆ ಪರ್ವತದ ಫೋಟೋ ತೆಗೆದಾಗ ಶಿವನ ಮುಖಮುದ್ರೆಯು ಮೂಡಿಬಂದಿದೆ. ಇಡೀ ಜಗತ್ತಿನ ಅಧ್ಯಾತ್ಮ ಕೇಂದ್ರವೆನ್ನಿಸಿರುವ ಈ ಪರ್ವತದಿಂದ ಉತ್ತರ ಧೃವವು 6,666 ಕಿ.ಮೀ ದೂರದಲ್ಲಿದೆ. ಅಂದರೆ ಇದು ದಕ್ಷಿಣ ಧೃವದಿಂದ ಎರಡು ಪಟ್ಟು, 13, 332 ಕಿ.ಮೀ. ದೂರದಲ್ಲಿದೆ. ಈ ಪರ್ವತದಲ್ಲಿ ಅಧ್ಯಾತ್ಮಿಕ ಸಾಕ್ಷಾತ್ಕಾರವಾಗುವ ಜಾಗವನ್ನು ಮುಂಡಿ ಎನ್ನುತ್ತಾರೆ. ರಾಮಾಯಣದಲ್ಲಿಯೂ ಈ ಜಾಗದ ಬಗ್ಗೆ ಇದೇ ರೀತಿ ಅತ್ಯಂತ ನಿಖರವಾಗಿ ಉಲ್ಲೇಖಿಸಲಾಗಿದೆ.’ ಹೀಗೆಂದು ಈ ವಿಡಿಯೋದಲ್ಲಿರುವ ಯುವತಿ ಪಾಠ ಒಪ್ಪಿಸುತ್ತಿದ್ದಾರೆ. ನೆಟ್ಟಿಗರ ಕಥೆ ಕೇಳಬೇಕೆ!?

NASA satellite confirms Shiv ji and Parvati meditating on mount Kailash pic.twitter.com/1l5PLCNmRg

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಈ ವಿಡಿಯೋದಲ್ಲಿರುವ ಬುದ್ಧಿವಂತೆ ನಾನಲ್ಲ, ಈಕೆಯ ಪುರಾಣ ವಿಜ್ಞಾನವನ್ನು ನಾನು ಬೆಂಬಲಿಸುವುದಿಲ್ಲ ಎಂದಿದ್ದಾರೆ ಒಬ್ಬರು. ಅಬ್ಬಾ ಇಂಥ ಸುಂದರವಾದ ಮೀಮ್​ ಈತನಕ ನೋಡಿರಲೇ ಇಲ್ಲ ಎಂದಿದ್ದಾರೆ ಇನ್ನೊಬ್ಬರು. ಹಿಂದೂ ದೇವತೆಗಳು ಧ್ಯಾನಕ್ಕೆ ಕುಳಿತಿರುವುದನ್ನು ಸಾಬೀತುಗೊಳಿಸುವ ದಿಕ್ಕಿನಲ್ಲಿ ನಾಸಾ ಗಂಭೀರವಾಗಿ ತೊಡಗಿಕೊಂಡಿದೆ. ಮುಂದಿನ ದಿನಗಳಲ್ಲಿ ಉತ್ತರ ಧೃವದಲ್ಲಿ ಸಾಂತಾಕ್ಲಾಸ್ ಸಾಕ್ಷಾತ್ಕಾರಗೊಳ್ಳುತ್ತಾನೆ ಎಂಬುದನ್ನು ನಾಸಾ ದೃಢೀಕರಿಸಲೂಬಹುದು. ನೋಡೋಣ ನನ್ನ ಈ ಊಹೆ ನಿಜವಾಗುವುದೋ ಏನೋ ಎಂದಿದ್ದಾರೆ ಮತ್ತೊಬ್ಬರು.

ಇದನ್ನೂ ಓದಿ : Viral: ‘ಮಾಂಸಾಹಾರ ಸಸ್ಯಾಹಾರಕ್ಕೆ ಒಂದೇ ಚಮಚ ಬಳಸಿದ್ದರೆ!’ ಸುಧಾ ಮೂರ್ತಿಯ ಮೇಲೆ ಮತ್ತೆ ಮುಗಿಬಿದ್ದ ನೆಟ್ಟಿಗರು

ಇತ್ತೀಚಿನ ದಿನಮಾನಗಳಲ್ಲಿ ಇಂಗ್ಲಿಷ್​ನಲ್ಲಿ ಏನನ್ನಾದರೂ ಹೇಳಿದರೆ ಭಾರತೀಯರು ಅದನ್ನು ಹೆಚ್ಚು ನಂಬುತ್ತಾರೆ ಎನ್ನುವುದು ಇಂಥವರಿಗೆ ತಿಳಿದಿದೆ ಎಂದಿದ್ದಾರೆ ಒಬ್ಬರು. ಹೌದು, ಇದು ಆಲ್ಬರ್ಟ್​ ಐನ್​ಸ್ಟಿನ್​​​ನ ಪುನರ್ಜನ್ಮ ಎಂದು ನನ್ನ ಟೋಸ್ಟರ್​ ದೃಢಪಡಿಸಿದೆ ಹಾಗಾಗಿ ಸತ್ಯಸಂಗತಿಗಳನ್ನು ಇವರಿಂದ ನೇರವಾಗಿ ಪಡೆಯಿರಿ ಎಂದಿದ್ದಾರೆ ಮತ್ತೊಬ್ಬರು.

ಇದನ್ನೂ ಓದಿ : Viral: ನಿಮಗೆ ಬಾಯ್​ಫ್ರೆಂಡ್​ ಇದ್ದಾರಾ? ಡೆಲಿವರಿ ಏಜೆಂಟ್ ಗ್ರಾಹಕಿಯನ್ನು ಕೇಳಿದಾಗ

ಮೇಡಮ್​, ಈ ವಿಷಯದ ಬಗ್ಗೆ ನಿಖರತೆ ಮತ್ತು ಆತ್ಮವಿಶ್ವಾಸವನ್ನು ಹೊಂದಿಲ್ಲ. ಹಾಗಾಗಿ ನಾಸಾದ ಹೆಸರನ್ನು ಬಳಸಿಕೊಂಡು ವಿಶ್ವಾಸಾರ್ಹತೆ ಗಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎನ್ನುವುದು ನಿಮಗಿನ್ನೂ ಅರ್ಥವಾಗಿಲ್ಲವೆ? ಎಂದು ಕೇಳಿದ್ದಾರೆ ಒಬ್ಬರು. ಗಣಿತ ವೆಕೇಷನ್​ಗೆ ಹೋಗಿದೆಯೇ? ಎಂದು ಮಗದೊಬ್ಬರು ಕೇಳಿದ್ದಾರೆ. ಏನೇ ಆಗಲಿ ಇಂಗ್ಲಿಷ್​ನಲ್ಲಿ ಹೇಳುತ್ತಿದ್ದಾರೆಂದ ಮೇಲೆ ಇದು ನಿಜಕ್ಕೂ ಸತ್ಯವೇ! ಎಂದು ಮಗದೊಬ್ಬರು ಕಾಲೆಳೆದಿದ್ದಾರೆ.

ಇದನ್ನು ಓದಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​​ಗಾಗಿ ಕ್ಲಿಕ್ ಮಾಡಿ

Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು