AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೊನೆಗೂ ಮೌನ ಮುರಿದ ನತಾಶ; ವಿಚ್ಛೇದನ ವದಂತಿ ಬಗ್ಗೆ ಹಾರ್ದಿಕ್‌ ಪಾಂಡ್ಯ ಪತ್ನಿ ಏನಂದ್ರು ನೋಡಿ

ಹಾರ್ದಿಕ್‌ ಪಾಂಡ್ಯ ಜೊತೆಗಿನ ವಿಚ್ಛೇದನ ವದಂತಿ ಬೆನ್ನಲ್ಲೇ ನಟಿ ನತಾಶಾ ದಿಶಾ ಪಠಾಣಿ ಗೆಳೆಯ ಎನ್ನಲಾದ ವ್ಯಕ್ತಿ ಜೊತೆ ಕಾಣಿಸಿಕೊಂಡಿದ್ದು, ಡಿವೋರ್ಸ್‌ ಪಕ್ಕಾ ಎಂದು ನೆಟ್ಟಿಗರು ಮಾತನಾಡಿಕೊಳ್ಳುತ್ತಿದ್ದಾರೆ. ಇದೀಗ ರಿಪೋರ್ಟರ್‌ ಒಬ್ಬರು ವಿಚ್ಛೇದನ ವದಂತಿ ಬಗ್ಗೆ ನತಾಶ ಅವರ ಬಳಿ ಪ್ರಶ್ನೆಯನ್ನು ಕೇಳಿದ್ದು, ಈ ಬಗ್ಗೆ ನತಾಶ ಏನು ಹೇಳಿದ್ದಾರೆ ಎಂಬುದನ್ನು ನೋಡಿ...

Viral Video: ಕೊನೆಗೂ ಮೌನ ಮುರಿದ ನತಾಶ; ವಿಚ್ಛೇದನ ವದಂತಿ ಬಗ್ಗೆ ಹಾರ್ದಿಕ್‌ ಪಾಂಡ್ಯ ಪತ್ನಿ ಏನಂದ್ರು ನೋಡಿ
ಮಾಲಾಶ್ರೀ ಅಂಚನ್​
| Edited By: |

Updated on: May 26, 2024 | 5:01 PM

Share

ಕ್ರಿಕೆಟಿಗ ಹಾರ್ದಿಕ್‌ ಪಾಂಡ್ಯ ದಾಂಪತ್ಯ ಜೀವನದಲ್ಲಿ ಬಿರುಗಾಳಿ ಎದ್ದಿದ್ದು, ಪತ್ನಿ ನತಾಶ ಸ್ಟಾನ್ಕೊವಿಕ್‌ ಹಾರ್ದಿಕ್‌ ಪಾಂಡ್ಯ ಅವರಿಗೆ ವಿಚ್ಛೇದನ ನೀಡಲಿದ್ದಾರೆ ಎಂಬ ವದಂತಿ ಜೋರಾಗಿ ಹರಿದಾಡುತ್ತಿದೆ. ಈ ಸುದ್ದಿಯನ್ನು ಪುಷ್ಠಿಕರಿಸುವಂತೆ ನತಾಶ ಅವರು ಶನಿವಾರ ಮುಂಬೈನ ಬಾಂದ್ರಾದ ಕೆಫೆ ಒಂದರಲ್ಲಿ ನಟಿ ದಿಶಾ ಪಠಾಣಿ ಗೆಳೆಯ ಎನ್ನಲಾದ ಅಲೆಕ್ಸ್‌ ಅಲೆಕ್ಸಾಂಡರ್‌ ಎಂಬವರ ಜೊತೆ ಕಾಣಿಸಿಕೊಂಡಿದ್ದು, ಡಿವೋರ್ಸ್‌ ಪಕ್ಕಾ ಎಂದು ನೆಟ್ಟಿಗರು ಮಾತನಾಡಿಕೊಳ್ಳುತ್ತಿದ್ದಾರೆ. ಕೆಫೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಡಿವೋರ್ಸ್‌ ವದಂತಿಯ ಬಗ್ಗೆ ನತಾಶ ಬಳಿ ರಿಪೋರ್ಟರ್‌ ಒಬ್ಬರು ಪ್ರಶ್ನೆಯನ್ನು ಕೇಳಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ.

ಬಾಂದ್ರಾದ ಕೆಫೆಯೊಂದಕ್ಕೆ ದಿಶಾ ಪಠಾಣಿ ಬಾಯ್‌ಫ್ರೆಂಡ್‌ ಜೊತೆ ನತಾಶ ಭೇಟಿ ನೀಡಿದ ಸಂದರ್ಭದಲ್ಲಿ ರಿಪೋರ್ಟರ್‌ ಒಬ್ಬರು ನತಾಶ ಬಳಿ ಡಿವೋರ್ಸ್‌ ವದಂತಿಯ ಬಗ್ಗೆ ಪ್ರಶ್ನೆಯನ್ನು ಕೇಳಿದ್ದಾರೆ. ಈ ಕುರಿತ ವಿಡಿಯೋವನ್ನು @instantbollywood ಎಂಬ ಇನ್‌ಸ್ಟಾಗ್ರಾಮ್‌ ಪೇಜ್‌ ಒಂದರಲ್ಲಿ ಹಂಚಿಕೊಳ್ಳಲಾಗಿದ್ದು, ಈ ವಿಡಿಯೋ ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಇದನ್ನೂ ಓದಿ: ಡಿವೋರ್ಸ್ ರೂಮರ್ಸ್ ಬೆನ್ನಲ್ಲೇ ಖ್ಯಾತ ನಟನ ಜೊತೆ ಹಾರ್ದಿಕ್ ಪಾಂಡ್ಯ ಪತ್ನಿ ಸುತ್ತಾಟ!

ವೈರಲ್‌ ವಿಡಿಯೋದಲ್ಲಿ ರಿಪೋರ್ಟರ್‌ ಒಬ್ಬರು “ನತಾಶ ಅವರೇ ಡಿವೋರ್ಸ್‌ ವದಂತಿಗಳ ಬಗ್ಗೆ ನೀವೇನಾದ್ರೂ ಹೇಳೋಕೆ ಇಷ್ಟಪಡ್ತಿರಾ” ಎಂಬ ಪ್ರಶ್ನೆಯನ್ನು ಕೇಳುತ್ತಾರೆ. ಆ ಸಂದರ್ಭದಲ್ಲಿ ಡಿವೋರ್ಸ್‌ ವದಂತಿಯ ಬಗ್ಗೆ ಏನನ್ನೂ ಹೇಳದೆ ಥ್ಯಾಂಕ್ಯೂ ಸೋ ಮಚ್ ಎಂದು ಹೇಳುತ್ತಾ ಅಲ್ಲಿಂದ ಕಾಲ್ಕಿತ್ತಿದ್ದಾರೆ. ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 40.7 ಮಿಲಿಯನ್‌ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಡಿವೋರ್ಸ್‌ ವದಂತಿಯ ಬಳಿಕ ನತಾಶರನ್ನು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ‌

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ