AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪ್ರವಾಹದಿಂದಾಗಿ ಈಜುಗೊಳವಾದ ಮುಂಬೈವೊಂದರ ರೈಲುನಿಲ್ದಾಣ

Mumbai Rains : ಇನ್ನೂ ನಿರ್ಮಾಣ ಹಂತದಲ್ಲಿರುವ ನವೀ ಮುಂಬೈನ ಉರಾನ್​ ರೈಲು ನಿಲ್ದಾಣದ ಕಟ್ಟಡದ ಈ ದುರವಸ್ಥೆಯನ್ನು ಕಂಡು ನೆಟ್ಟಿಗರು ಬೇಸರಿಸುತ್ತಿದ್ದಾರೆ.

Viral Video: ಪ್ರವಾಹದಿಂದಾಗಿ ಈಜುಗೊಳವಾದ ಮುಂಬೈವೊಂದರ ರೈಲುನಿಲ್ದಾಣ
ಪ್ರವಾಹದಿಂದಾಗಿ ಮುಂಬೈನ್​ ಉರಾನ್​ನ ರೈಲುನಿಲ್ದಾಣವು ಸ್ಥಳೀಯರಿಗೆ ಈಜುಗೊಳದಂತೆ ಮಾರ್ಪಟ್ಟಿದೆ.
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on: Jul 07, 2023 | 7:11 PM

Share

Navi Mumbai : ಮುಂಬೈನಲ್ಲಿ ಭಾರೀ ಮಳೆಯಿಂದಾಗಿ ಅನೇಕ ಪ್ರದೇಶಗಳು ಪ್ರವಾಹಕ್ಕೆ ಸಿಲುಕಿಕೊಳ್ಳುತ್ತಿವೆ. ಇನ್ನೂ ನಿರ್ಮಾಣ ಹಂತದಲ್ಲಿರುವ ನವೀ ಮುಂಬೈನ ಉರಾನ್​ ರೈಲು ನಿಲ್ದಾಣದೊಳಗೆ ಮಳೆನೀರು ನುಗ್ಗಿದ ಪರಿಣಾಮ, ಸ್ಥಳೀಯರು ಇದನ್ನು ಈಜುಗೊಳವನ್ನಾಗಿ ಮಾರ್ಪಡಿಸಿಕೊಂಡಿದ್ದಾರೆ. ಅಂತರ್ಜಾಲದಲ್ಲಿ ಹರಿದಾಡುತ್ತಿರುವ ಮಳೆ ವಿಡಿಯೋಗಳ ಪೈಕಿ ಈ  ವಿಡಿಯೋ ಇದೀಗ ಬಹುವಾಗಿ ಗಮನ ಸೆಳೆದಿದ್ದು ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಕೆಲ ಯುವಕರು ಥೇಟ್​ ಈಜುಗೊಳಕ್ಕೆ ಧುಮುಕಿದಂತೆ ಈ ಮಳೆನೀರಿನಲ್ಲಿ ಧುಮುಕಿ ಈಜಾಡುತ್ತಿದ್ದಾರೆ. ನೆಟ್ಟಿಗರು ಈ ಅವಸ್ಥೆಯನ್ನು ನೋಡಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ನಿರ್ಮಾಣ ಹಂತದಲ್ಲಿರುವ ಉರಾನ್​ ರೈಲು ನಿಲ್ದಾಣ ಕಟ್ಟಡವೊಂದರಲ್ಲಿ ಭಾಗಶಃ ನೀರು ನುಗ್ಗಿ ಒಂದು ಸಣ್ಣ ಕೊಳದಂತೆ ಮಾರ್ಪಟ್ಟಿದೆ. ಸ್ಥಳೀಯ ಯುವಕರೇನೋ ಲೀಲಾಜಾಲವಾಗಿ ಈಜಾಡುತ್ತ ತಮಾಷೆ ಮಾಡುತ್ತಿದ್ದಾರೆ. ಆದರೆ ನೆಟ್ಟಿಗರು, ಕಳಪೆ ಒಳಚರಂಡಿ ವ್ಯವಸ್ಥೆಯ ಬಗ್ಗೆ ಚಿಂತಿಸುತ್ತಿದ್ದಾರೆ. ಈ ಬಗ್ಗೆ ಸ್ಥಳೀಯರಿಗೆ ಅರಿವೇ ಇಲ್ಲವಲ್ಲ ಎಂದು ಬೇಸರಿಸುತ್ತಿದ್ದಾರೆ.

ಇದನ್ನೂ ಓದಿ : Viral Video: ಆಕೆಯ ನಮ್ರತೆ, ಅಧಿಕಾರಯುತ ನಡೆಯಿಂದಾಗಿ ಆತ ಇಟ್ಟ ಹೆಜ್ಜೆಯನ್ನು ಹಿಂತೆಗೆದ

ಈ ವಿಡಿಯೋ ಅನ್ನು ಟ್ವೀಟ್ ಮಾಡಿದ ಜಿತೇಂದ್ರ ಥಾಲೆ ಪ್ರಧಾನಿ ಮೋದಿ ಮತ್ತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್​ ಅವರಿಗೆ ಟ್ಯಾಗ್ ಮಾಡಿ ಗಮನ ಸೆಳೆದಿದ್ದಾರೆ. ಈತನಕ ಈ ವಿಡಿಯೋ ಅನ್ನು 213 ಜನ ನೋಡಿದ್ದಾರೆ. 3 ಜನ ರೀಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ : Viral Video: ದೆಹಲಿ ಮೆಟ್ರೋದಲ್ಲಿ ಮತ್ತೆ ರೀಲಿಗರ ಹಾವಳಿ; ನಗಬೇಕೋ ಅಳಬೇಕೋ

ಮಕ್ಕಳಿಗಾದರೆ ಬೈದು ಹೇಳಬಹುದು. ಆದರೆ ಬೆಳೆದ ಈ ಯುವಕರಿಗೆ ಏನು ಹೇಳುವುದು? ಸ್ಥಳೀಯ ಪ್ರತಿನಿಧಿಗಳು ಈ ಬಗ್ಗೆ ಕೂಡಲೇ ಕ್ರಮ ಕೈಗೊಂಡಲ್ಲಿ ಉತ್ತಮ. ಈ ವಿಡಿಯೋ ನೋಡಿದ ನೀವು ಏನಂತೀರಿ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು