AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪ್ರವಾಹದಿಂದಾಗಿ ಈಜುಗೊಳವಾದ ಮುಂಬೈವೊಂದರ ರೈಲುನಿಲ್ದಾಣ

Mumbai Rains : ಇನ್ನೂ ನಿರ್ಮಾಣ ಹಂತದಲ್ಲಿರುವ ನವೀ ಮುಂಬೈನ ಉರಾನ್​ ರೈಲು ನಿಲ್ದಾಣದ ಕಟ್ಟಡದ ಈ ದುರವಸ್ಥೆಯನ್ನು ಕಂಡು ನೆಟ್ಟಿಗರು ಬೇಸರಿಸುತ್ತಿದ್ದಾರೆ.

Viral Video: ಪ್ರವಾಹದಿಂದಾಗಿ ಈಜುಗೊಳವಾದ ಮುಂಬೈವೊಂದರ ರೈಲುನಿಲ್ದಾಣ
ಪ್ರವಾಹದಿಂದಾಗಿ ಮುಂಬೈನ್​ ಉರಾನ್​ನ ರೈಲುನಿಲ್ದಾಣವು ಸ್ಥಳೀಯರಿಗೆ ಈಜುಗೊಳದಂತೆ ಮಾರ್ಪಟ್ಟಿದೆ.
ಶ್ರೀದೇವಿ ಕಳಸದ
|

Updated on: Jul 07, 2023 | 7:11 PM

Share

Navi Mumbai : ಮುಂಬೈನಲ್ಲಿ ಭಾರೀ ಮಳೆಯಿಂದಾಗಿ ಅನೇಕ ಪ್ರದೇಶಗಳು ಪ್ರವಾಹಕ್ಕೆ ಸಿಲುಕಿಕೊಳ್ಳುತ್ತಿವೆ. ಇನ್ನೂ ನಿರ್ಮಾಣ ಹಂತದಲ್ಲಿರುವ ನವೀ ಮುಂಬೈನ ಉರಾನ್​ ರೈಲು ನಿಲ್ದಾಣದೊಳಗೆ ಮಳೆನೀರು ನುಗ್ಗಿದ ಪರಿಣಾಮ, ಸ್ಥಳೀಯರು ಇದನ್ನು ಈಜುಗೊಳವನ್ನಾಗಿ ಮಾರ್ಪಡಿಸಿಕೊಂಡಿದ್ದಾರೆ. ಅಂತರ್ಜಾಲದಲ್ಲಿ ಹರಿದಾಡುತ್ತಿರುವ ಮಳೆ ವಿಡಿಯೋಗಳ ಪೈಕಿ ಈ  ವಿಡಿಯೋ ಇದೀಗ ಬಹುವಾಗಿ ಗಮನ ಸೆಳೆದಿದ್ದು ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಕೆಲ ಯುವಕರು ಥೇಟ್​ ಈಜುಗೊಳಕ್ಕೆ ಧುಮುಕಿದಂತೆ ಈ ಮಳೆನೀರಿನಲ್ಲಿ ಧುಮುಕಿ ಈಜಾಡುತ್ತಿದ್ದಾರೆ. ನೆಟ್ಟಿಗರು ಈ ಅವಸ್ಥೆಯನ್ನು ನೋಡಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ನಿರ್ಮಾಣ ಹಂತದಲ್ಲಿರುವ ಉರಾನ್​ ರೈಲು ನಿಲ್ದಾಣ ಕಟ್ಟಡವೊಂದರಲ್ಲಿ ಭಾಗಶಃ ನೀರು ನುಗ್ಗಿ ಒಂದು ಸಣ್ಣ ಕೊಳದಂತೆ ಮಾರ್ಪಟ್ಟಿದೆ. ಸ್ಥಳೀಯ ಯುವಕರೇನೋ ಲೀಲಾಜಾಲವಾಗಿ ಈಜಾಡುತ್ತ ತಮಾಷೆ ಮಾಡುತ್ತಿದ್ದಾರೆ. ಆದರೆ ನೆಟ್ಟಿಗರು, ಕಳಪೆ ಒಳಚರಂಡಿ ವ್ಯವಸ್ಥೆಯ ಬಗ್ಗೆ ಚಿಂತಿಸುತ್ತಿದ್ದಾರೆ. ಈ ಬಗ್ಗೆ ಸ್ಥಳೀಯರಿಗೆ ಅರಿವೇ ಇಲ್ಲವಲ್ಲ ಎಂದು ಬೇಸರಿಸುತ್ತಿದ್ದಾರೆ.

ಇದನ್ನೂ ಓದಿ : Viral Video: ಆಕೆಯ ನಮ್ರತೆ, ಅಧಿಕಾರಯುತ ನಡೆಯಿಂದಾಗಿ ಆತ ಇಟ್ಟ ಹೆಜ್ಜೆಯನ್ನು ಹಿಂತೆಗೆದ

ಈ ವಿಡಿಯೋ ಅನ್ನು ಟ್ವೀಟ್ ಮಾಡಿದ ಜಿತೇಂದ್ರ ಥಾಲೆ ಪ್ರಧಾನಿ ಮೋದಿ ಮತ್ತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್​ ಅವರಿಗೆ ಟ್ಯಾಗ್ ಮಾಡಿ ಗಮನ ಸೆಳೆದಿದ್ದಾರೆ. ಈತನಕ ಈ ವಿಡಿಯೋ ಅನ್ನು 213 ಜನ ನೋಡಿದ್ದಾರೆ. 3 ಜನ ರೀಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ : Viral Video: ದೆಹಲಿ ಮೆಟ್ರೋದಲ್ಲಿ ಮತ್ತೆ ರೀಲಿಗರ ಹಾವಳಿ; ನಗಬೇಕೋ ಅಳಬೇಕೋ

ಮಕ್ಕಳಿಗಾದರೆ ಬೈದು ಹೇಳಬಹುದು. ಆದರೆ ಬೆಳೆದ ಈ ಯುವಕರಿಗೆ ಏನು ಹೇಳುವುದು? ಸ್ಥಳೀಯ ಪ್ರತಿನಿಧಿಗಳು ಈ ಬಗ್ಗೆ ಕೂಡಲೇ ಕ್ರಮ ಕೈಗೊಂಡಲ್ಲಿ ಉತ್ತಮ. ಈ ವಿಡಿಯೋ ನೋಡಿದ ನೀವು ಏನಂತೀರಿ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್