AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಹಕ್ಕೆ ಹೆದರಿ ಒದ್ದಾಡುತ್ತಿದ್ದ ಶ್ವಾನವನ್ನು ರಕ್ಷಿಸಿದ ರಕ್ಷಣಾ ಸಿಬ್ಬಂದಿ; ನೆಟ್ಟಿಗರಿಂದ ಶ್ಲಾಘನೆ

ಪ್ರವಾಹಕ್ಕೆ ಹೆದರಿ ಹೋಟೆಲ್ ಛಾವಣಿಯ ಮೇಲೆ ನಡುಗುತ್ತ ಕುಳಿತ ಶ್ವಾನವನ್ನು ರಕ್ಷಣಾ ಸಿಬ್ಬಂದಿ ರಕ್ಷಿಸಿದ್ದಾರೆ.

ಪ್ರವಾಹಕ್ಕೆ ಹೆದರಿ ಒದ್ದಾಡುತ್ತಿದ್ದ ಶ್ವಾನವನ್ನು ರಕ್ಷಿಸಿದ ರಕ್ಷಣಾ ಸಿಬ್ಬಂದಿ; ನೆಟ್ಟಿಗರಿಂದ ಶ್ಲಾಘನೆ
ಪ್ರವಾಹಕ್ಕೆ ಹೆದರಿ ಒದ್ದಾಡುತ್ತಿದ್ದ ನಾಯಿಯನ್ನು ರಕ್ಷಿಸಿದ ರಕ್ಷಣಾ ಸಿಬ್ಬಂದಿ
TV9 Web
| Updated By: shruti hegde|

Updated on:Jul 28, 2021 | 10:44 AM

Share

ಭಾರೀ ಮಳೆ ತಂದಿರುವ ಅವಾಂತರ ಒಂದಲ್ಲ.. ಎರಡಲ್ಲ. ಅದೆಷ್ಟೋ ಜನ ಮನೆ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಇನ್ನೆಷ್ಟೋ ಜನ ಕಾಣೆಯಾಗಿದ್ದಾರೆ. ಬೆಳೆದ ಬೆಳೆಗಳೆಲ್ಲ ನಾಶವಾಗಿದೆ ಎಂದು ಜನರು ಬೇಸರಗೊಂಡಿದ್ದಾರೆ. ಈ ಎಲ್ಲದರ ನಡುವೆ ಮೂಕ ಪ್ರಾಣಿಗಳ ಒದ್ದಾಟ ನೋಡಲೇ ಸಾಧ್ಯವಿಲ್ಲ. ಪ್ರವಾಹಕ್ಕೆ ಸಿಲುಕಿ ಅದೆಷ್ಟೋ ಮುಗ್ಧ ಪ್ರಾಣಿಗಳು ಬಲಿಯಾದವು. ಈ ನಡುವೆ ಪ್ರಾಣ ಉಳಿಸುವ ಸಲುವಾಗಿ ರಕ್ಷಾಣಾ ಸಿಬ್ಬಂದಿ ಹಗಲಿರುಳು ಸೇವೆ ಸಲ್ಲಿಸುತ್ತಿದ್ದಾರೆ. ಈ ಘಟನೆಯೂ ಅಂಥದ್ದೇ. ಪ್ರವಾಹಕ್ಕೆ ಹೆದರಿ ಹೋಟೆಲ್ ಮೇಲ್ಛಾವಣಿಯ ಮೇಲೆ ನಡುಗುತ್ತ ಕುಳಿತ ಶ್ವಾನವನ್ನು ರಾಷ್ಟ್ರೀಯ ವಿಪತ್ತು ರಕ್ಷಣಾ ಪಡೆ(NDRF) ರಕ್ಷಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ನೆಟ್ಟಿಗರಿಂದ ಶ್ಲಾಘನೆ ವ್ಯಕ್ತವಾಗಿದೆ.

ವಿಪರೀತ ಮಳೆಯಿಂದಾಗಿ ಕೊಲ್ಹಾಪುರದ ಶಿರೋಲಿಯ ಹೋಟೆಲ್ ಒಳಗೆಲ್ಲಾ ನೀರು ತುಂಬಿದೆ. ನಾಯಿಯೊಂದು ಹೋಟೆಲ್ ಮೇಲ್ಛಾವಣಿಯ ಮೇಲೆ ಹತ್ತಿ ನಡುಗುತ್ತಾ ಕುಳಿತಿತ್ತು. ಇದನ್ನು ಗಮನಿಸಿದ ರಕ್ಷಣಾ ಪಡೆ ದೋಣಿಯ ಮೂಲಕ ಸಾಗಿ ನಾಯಿಯ ರಕ್ಷಣೆಗೆ ಮುಂದಾಗಿದೆ.

ಹೋಟೆಲ್ ಮೇಲ್ಛಾವಣಿಯ ಮೇಲೆ ಹತ್ತಿ ಕುಳಿತ ನಾಯಿಯನ್ನು ರಕ್ಷಣಾ ಸಿಬ್ಬಂದಿ ರಕ್ಷಿಸುವ ದೃಶ್ಯವನ್ನು ವಿಡಿಯೋ ತೋರಿಸುತ್ತದೆ. ಉಳಿದವರು ದೋಣಿಯಲ್ಲೊಯೇ ಕುಳಿತಿದ್ದು ಓರ್ವ ಸಿಬ್ಬಂದಿ ಹೋಟೆಲ್ ಮೇಲಕ್ಕೆ ಹತ್ತಿ ನಾಯಿಯನ್ನು ಹಿಡಿದು ತಂದಿದ್ದಾರೆ. ಸುರಕ್ಷಿತವಾಗಿ ದಡ ತಲುಪಿದ್ದಾರೆ.

ಏತನ್ಮಧ್ಯೆ ಮಹಾರಾಷ್ಟ್ರದಲ್ಲಿ ವಿಪರೀತ ಮಳೆಯ ಪರಿಣಾಮ ಸಾವಿಗೀಡಾದವರ ಸಂಖ್ಯೆ 207ಕ್ಕೆ ಏರಿಕೆಯಾಗಿದೆ. ರಾಯಗಢ ಜಿಲ್ಲೆಯಲ್ಲಿ 100ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ, 11 ಜನ ಕಾಣೆಯಾಗಿದ್ದಾರೆ. ಕಳೆದ ವಾರ ಭಾರೀ ಮಳೆಯಿಂದಾಗಿ ಪಶ್ಚಿಮ ಮಹಾರಾಷ್ಟ್ರ ಭಾಗದಲ್ಲಿ ಪ್ರವಾಹ ಹಾಗೂ ಭೂಕುಸಿಯತ ಉಂಟಾಗಿದೆ.

ಇಂಥಹ ಕಷ್ಟದ ಸಂದರ್ಭದಲ್ಲಿ ಸ್ಥಳೀಯ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸಲು ಹೆಣಗಾಡುತ್ತಿದ್ದಾರೆ ಎಂದು ವಿಪತ್ತು ನಿರ್ವಹಣಾ ವಿಭಾಗದ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ:

Viral Video: ವಧು-ವರರಂತೆ ಸೀರೆ, ಪಂಚೆ ತೊಟ್ಟು ಸಿಂಗಾರಗೊಂಡ ಶ್ವಾನಗಳು! ವಿಡಿಯೋ ವೈರಲ್

Viral Video: ಯುವತಿಯೊಂದಿಗೆ ಶಾಸ್ತ್ರೀಯ ಸಂಗೀತಕ್ಕೆ ಸ್ಟೆಪ್​ ಹಾಕಿದ ಶ್ವಾನ! ಕ್ಯೂಟ್​ ವಿಡಿಯೋ ನೀವೂ ನೋಡಿ

Published On - 10:42 am, Wed, 28 July 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ