AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: “ದುಯಿ ಭಾಯೀ” ಮತೀಯತೆಯ ವಿಷದಿಂದ ಕಲುಷಿತವಾದ ಭಾರತೀಯರ ಹೃದಯಗಳನ್ನೂ ಸರಿಪಡಿಸಲಿ

Fraternity : 'ಇಬ್ಬರು ಸೋದರರು'; ಚಪ್ಪಲಿ, ಚರ್ಮದ ಚೀಲಗಳನ್ನು ರಿಪೇರಿ ಮಾಡುವ ಈ ಅಂಗಡಿಯ ವಿಶೇಷವೆಂದರೆ ಆ ಇಬ್ಬರಲ್ಲಿ ಒಬ್ಬ ಭಾಯಿ ಹಿಂದೂ ಹಾಗೂ ಇನ್ನೊಬ್ಬ ಮುಸಲ್ಮಾನ. ಇದು ನಿಜವಾದ ಭಾರತ ಎನ್ನುತ್ತಿರುವ ನೆಟ್ಟಿಗರು.

Viral Video: “ದುಯಿ ಭಾಯೀ” ಮತೀಯತೆಯ ವಿಷದಿಂದ ಕಲುಷಿತವಾದ ಭಾರತೀಯರ ಹೃದಯಗಳನ್ನೂ ಸರಿಪಡಿಸಲಿ
ಕೊಲ್ಕತ್ತೆಯಲ್ಲಿರುವ ''ದುಯೀ ಭಾಯೀ'' ಚಪ್ಪಲಿ ಅಂಗಡಿ
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on:Jun 07, 2023 | 4:35 PM

Share

Viral Video : “ಇದು ನನ್ನ ಭಾರತ”, “ಇದು ನಿಜವಾದ ಭಾರತ”, “ಹಳೆಯ ಭಾರತದ ಸಣ್ಣ ಕುರುಹು” ಎಂಬಿತ್ಯಾದಿ ವಿಶೇಷಣಗಳೊಂದಿಗೆ ಟ್ವಿಟರ್​ನಲ್ಲಿ ಜನರು ಪ್ರತಿಕ್ರಿಯಿಸುತ್ತಿರುವ ಒಂದು ಅಪೂರ್ವ ಚಿತ್ರ ಮತ್ತು ಸುದ್ದಿ ಇಲ್ಲಿದೆ. ಕೊಲ್ಕತ್ತೆಯ ಕೂಡ್‌ಘಾಟ್ (Kudghat) ಪ್ರದೇಶದಲ್ಲಿ ಒಂದು ಗೂಡಂಗಡಿಯಿದೆ. “ದುಯಿ ಭಾಯೀ” (ಇಬ್ಬರು ಸೋದರರು) ಎಂಬ ಹೆಸರಿನ ಚಪ್ಪಲಿ ಹಾಗೂ ಚರ್ಮದ ಚೀಲಗಳನ್ನು ರಿಪೇರಿ ಮಾಡುವ ಈ ಅಂಗಡಿಯ ವಿಶೇಷವೆಂದರೆ ಆ ಇಬ್ಬರಲ್ಲಿ ಒಬ್ಬ ಭಾಯಿ ಹಿಂದೂ ಹಾಗೂ ಇನ್ನೊಬ್ಬ ಮುಸಲ್ಮಾನ.

“ನಾನು ಈ ಅಂಗಡಿಯಿಂದ ಐದು ನಿಮಿಷದಷ್ಟು ದೂರದಲ್ಲಿದ್ದ ಮನೆಯಲ್ಲಿ ಹುಟ್ಟಿ ಬೆಳೆದಿದ್ದೆ. ಈ ಅಂಗಡಿ ಇನ್ನೂ ಇದೆ ಎಂದು ತಿಳಿದು ಹರ್ಷವಾಗುತ್ತಿದೆ!,” “ನಾನು ಹತ್ತಿರದಲ್ಲಿಯೇ ಕೆಲಸ ಮಾಡುತ್ತೇನೆ. ಶೂ ರಿಪೇರಿಗೆ ನಾನು ಯಾವಾಗಲೂ ಇಲ್ಲಿಯೇ ಹೋಗುವುದು,” ಎಂದು ಈ ಅಂಗಡಿಯ ಪರಿಚಯವಿರುವವರು ಪ್ರತಿಕ್ರಿಯಿಸಿದ್ದಾರೆ. “ಇದೆಷ್ಟು ಸುಂದರ ಸಂಬಂಧ! ಇವರ ಸಂತತಿ ಸಾವಿರವಾಗಲಿ,” “ಸಾಮರಸ್ಯದ ಸಹಿಷ್ಣುತೆಯ ಧರ್ಮನಿರಪೇಕ್ಷತೆಯ ಈ ಭಾರತಕ್ಕೆ ಮತ್ತೆ ಮರಳೋಣ,” ಮೊದಲಾಗಿ ನೂರಾರು ಜನ ಆಶಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : Viral Video: ಭಜ್ಜಿಯ ಅಜ್ಜನಲ್ಲರಳಿರುವ ನಗುವಿಗೆ ಬೆಲೆ ಎಷ್ಟೆಂದು ತಿಳಿದಿದೆಯೇ?; ಕಲಾವಿದನಿಗೆ ಶಭಾಷ್​ ಎಂದ ನೆಟ್ಟಿಗರು

ಈ ಇಬ್ಬರಂತೆ ಸೋದರರು, ಸೋದರಿಯರು ಹತ್ತಿರ ಬಂದು ಒಟ್ಟಿಗೆ ಕೆಲಸ ಮಾಡತೊಡಗಿದರೆ ಎಲ್ಲರಿಗೂ ಒಳ್ಳೆಯದಲ್ಲವೇ? ಮೇಲಿನ ಚಿತ್ರಕ್ಕೆ ಒಬ್ಬರು ಪ್ರತಿಕ್ರಿಯಿಸಿದಂತೆ, “ಚಪ್ಪಲಿ ಬ್ಯಾಗಳನ್ನು ರಿಪೇರಿ ಮಾಡಿದಂತೆ ಈ ಇಬ್ಬರು ಸೋದರರು ಮತೀಯತೆಯ ವಿಷದಿಂದ ಕಲುಷಿತವಾದ ಭಾರತೀಯರ ಹೃದಯಗಳನ್ನೂ ತಿದ್ದಿ ಸರಿಪಡಿಸಲಿ.”

ಇದನ್ನೂ ಓದಿ : Viral Video: ಬನ್ನೇರುಘಟ್ಟದಲ್ಲಿ ಚಿರತೆಮರಿಗಳಿಗೆ ಮರುಜೀವ ಕೊಡುತ್ತಿರುವ ಸಾವಿತ್ರಮ್ಮ

ಅತಿಯಾದ ಮತೀಯ ಭಾವನೆಗಳ ಪ್ರದರ್ಶನದ, ನಕಾರಾತ್ಮಕತೆಯ, ಸುಳ್ಳು ಸುದ್ದಿಗಳು ವ್ಯಾಪಕವಾಗಿ ಹಬ್ಬುತ್ತಿರುವ ಈ ಕಾಲದಲ್ಲಿ ಸಹಬಾಳ್ವೆಯನ್ನು ಸಾರುವ ಇಂಥ ನಿದರ್ಶನಗಳು ಹೆಚ್ಚಾಗಬೇಕು. ನಿಮ್ಮ ದೃಷ್ಟಿಗೂ ಇಂಥ ಸಾಮರಸ್ಯದ ಉದಾಹರಣೆಗಳು ಬಿದ್ದಿದ್ದಲ್ಲಿ ಅವನ್ನು ಹಂಚಿಕೊಳ್ಳಿ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 4:31 pm, Wed, 7 June 23

Follow Us
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ