AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್​ ಸಂಪರ್ಕವೇ ಇಲ್ಲದ ಮನೆಗೆ 1.80 ಲಕ್ಷ ರೂ. ಕರೆಂಟ್ ಬಿಲ್

ವಿದ್ಯುತ್ ಸಂಪರ್ಕವೇ ಇಲ್ಲದ ಮನೆಗೆ ಬರೋಬ್ಬರಿ 1.80 ಲಕ್ಷ ಕರೆಂಟ್​ ಬಿಲ್​ ಬಂದಿದ್ದು, ಅಚ್ಚರಿ ಮೂಡಿಸಿದೆ. ಮನೆ ಮಾಲೀಕ ದಿವ್ಯಾಂಗರಾಗಿದ್ದು, ಈಗ ದೂರು ನೀಡಲು ಕಚೇರಿಯಿಂದ ಕಚೇರಿಗೆ ಅಲಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ವಿದ್ಯುತ್​ ಸಂಪರ್ಕವೇ ಇಲ್ಲದ ಮನೆಗೆ 1.80 ಲಕ್ಷ ರೂ. ಕರೆಂಟ್ ಬಿಲ್
ಎಳಕುImage Credit source: Paytm
ನಯನಾ ರಾಜೀವ್
|

Updated on: Sep 11, 2024 | 11:48 AM

Share

ವಿದ್ಯುತ್ ಸಂಪರ್ಕವೇ ಇಲ್ಲದ ಮನೆಗೆ ಬರೋಬ್ಬರಿ 1.80 ಲಕ್ಷ ಕರೆಂಟ್​ ಬಿಲ್​ ಬಂದಿದ್ದು, ಅಚ್ಚರಿ ಮೂಡಿಸಿದೆ. ಮನೆ ಮಾಲೀಕ ದಿವ್ಯಾಂಗರಾಗಿದ್ದು, ಈಗ ದೂರು ನೀಡಲು ಕಚೇರಿಯಿಂದ ಕಚೇರಿಗೆ ಅಲಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಉತ್ತರ ಪ್ರದೇಶದ  ಬಸ್ತಿಯಲ್ಲಿರುವ ರಾಂಫರ್ ಗ್ರಾಮದಲ್ಲಿರುವ ಸಿಸಾಯಿ ಬಾಬು ಎಂಬುವವರಿಗೆ 1.80 ಲಕ್ಷ ರೂ. ವಿದ್ಯುತ್ ಬಿಲ್ ಬಂದಿದೆ. ಬಿಲ್​ ನೋಡಿ ಅವರು ಬೆಚ್ಚಿಬಿದ್ದಿದ್ದಾರೆ. ಇಲ್ಲಿಯವರೆಗೆ ಮನೆಗೆ ವಿದ್ಯುತ್ ಸಂಪರ್ಕವಿಲ್ಲ, ಮನೆಯಲ್ಲಿ ಒಂದು ಬಲ್ಬ್​ ಕೂಡ ಇಲ್ಲ ಆದರೂ ನನ್ನ ಹೆಸರಿಗೆ ಹೇಗೆ ವಿದ್ಯುತ್ ಬಿಲ್ ಬಂದಿದೆ ಎಂದು ತಿಳಿದಿಲ್ಲ ಎಂದು ತಿಳಿಸಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ವಿದ್ಯುತ್ ಇಲಾಖೆಯು ಹಸ್ನರ್ಜಾ ಎಂಬ ವ್ಯಕ್ತಿಗೆ 82 ಸಾವಿರ ರೂ. ಬಿಲ್ ಅನ್ನು ನೀಡಿದ್ದು, ನಂತರ ಗ್ರಾಹಕರು ಆಘಾತಕ್ಕೊಳಗಾಗಿದ್ದಾರೆ. ಮೂರು ತಿಂಗಳ ಹಿಂದೆ ಗ್ರಾಹಕರು ಮೀಟರ್ ರೀಡರ್ ಜೊತೆ ವಾಗ್ವಾದಕ್ಕಿಳಿದಿದ್ದರು, ಆಗ 799 ರೂ.ಬಾಕಿ ಇತ್ತು, ಏಪ್ರಿಲ್ ತಿಂಗಳಲ್ಲಿ ಬಿಲ್ ಜಮೆಯಾಗಿದೆ.

ಮತ್ತಷ್ಟು ಓದಿ: Shocking News: ತಿಂಗಳಿಗೆ 52 ಲಕ್ಷ ರೂ. ಕರೆಂಟ್ ಬಿಲ್; ಶಾಕ್ ಆದ ಮಾಲೀಕ

ನಂತರ ವಿದ್ಯುತ್ ಬಿಲ್ 00 ಆಯಿತು. ಮೀಟರ್ ರೀಡರ್ ಜತೆ ವಾಗ್ವಾದಕ್ಕಿಳಿದ ಬಳಿಕ ಏಪ್ರಿಲ್ ನಿಂದ ಆಗಸ್ಟ್ ವರೆಗೆ ಗ್ರಾಹಕರ ವಿದ್ಯುತ್ ಬಿಲ್ 82 ಸಾವಿರ ರೂ.ಗೆ ಏರಿಕೆಯಾಗಿದೆ. ಸಂತ್ರಸ್ತೆ ಸೂಪರಿಂಟೆಂಡೆಂಟ್ ಎಂಜಿನಿಯರ್ ಕಚೇರಿಯಲ್ಲಿ ದೂರು ದಾಖಲಿಸಿದ್ದಾರೆ.

ಮುಖ್ಯ ಎಂಜಿನಿಯರ್ ಹೇಳಿದ್ದೇನು? ಮೊದಲ ಪ್ರಕರಣದಲ್ಲಿ ಸಿಸಾಯಿ ಅವರ ಮನೆಗೆ 1994ರಲ್ಲೇ ವಿದ್ಯುತ್ ಸಂಪರ್ಕ ನೀಡಲಾಗಿದೆ ಎಂದು ದಾಖಲೆಯಲ್ಲಿದೆ. 2016ರಲ್ಲಿ 75 ಸಾವಿರ ಬಿಲ್​ ಬಾಕಿ ಇದ್ದು, 1.80 ಲಕ್ಷಕ್ಕೆ ಅದು ಏರಿಕೆಯಾಗಿದೆ ಎಂದು ಹೇಳಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!