AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಲೇ ಬಾಹುಬಲಿ​: ತಲೆಯ ಮೇಲೆ ಬೈಕ್​ ಹೊತ್ತು ಸಾಗಿಸುತ್ತಿರುವ ಈ ವ್ಯಕ್ತಿಯ ವಿಡಿಯೋ ವೈರಲ್

Superman : ಈ ಮನುಷ್ಯನನ್ನು ನೆಟ್ಟಿಗರು ಇವನೇ ನಿಜವಾದ ಬಾಹುಬಲಿ, ಸೂಪರ್​ಮ್ಯಾನ್​ ಎಂದು ಹೇಳುತ್ತಿದ್ಧಾರೆ. ಎಲ್ಲರೂ ಸ್ಟಂಟ್​ಗಾಗಿ, ರೀಲ್​ಗಾಗಿ ಸಾಹಸ ಮಾಡುತ್ತಾರೆ. ಆದರೆ ಈತ ಮಾಡುವುದು ಗೇಣುಹೊಟ್ಟೆಗಾಗಿ, ಮನೆಯವರಿಗಾಗಿ.

ಭಲೇ ಬಾಹುಬಲಿ​: ತಲೆಯ ಮೇಲೆ ಬೈಕ್​ ಹೊತ್ತು ಸಾಗಿಸುತ್ತಿರುವ ಈ ವ್ಯಕ್ತಿಯ ವಿಡಿಯೋ ವೈರಲ್
Superman : Coolie Climbing a bus ladder with a Bike on his head.
TV9 Web
| Edited By: ಶ್ರೀದೇವಿ ಕಳಸದ|

Updated on:Nov 26, 2022 | 1:05 PM

Share

Viral Video : ಇಂದು ಸಾಮಾಜಿಕ ಜಾಲತಾಣದಲ್ಲಿ ಪ್ರಸಿದ್ಧಿ ಹೊಂದಲು ಏನೆಲ್ಲ ಸ್ಟಂಟ್​ಗಳನ್ನು ಮಾಡುತ್ತಿದ್ದಾರೆ ಜನರು. ಸ್ಟಂಟ್ ಮಾಡಲು ಹೋಗಿ ಅವಘಡಕ್ಕೂ ಈಡಾಗುತ್ತಿದ್ದಾರೆ. ಆದರೆ ನಿಜ ಜೀವನದಲ್ಲಿ ಹೊಟ್ಟೆಪಾಡಿಗಾಗಿ ಹೀಗೆ ಬದುಕುವವರು ಕಣ್ಣಿಗೆ ಬೀಳುವುದು ಅಪರೂಪ. ಗುಲ್ಜಾರ್ ಸಹಾಬ್​ ಎಂಬ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡ ಈ ವಿಡಿಯೋ ವೈರಲ್ ಆಗಿದೆ. 88,800 ಜನರು ಈ ವಿಡಿಯೋ ವೀಕ್ಷಿಸಿದ್ದಾರೆ. 5,000ಕ್ಕಿಂತಲೂ ಹೆಚ್ಚು ಜನ ಈ ವಿಡಿಯೋ ಇಷ್ಟಪಟ್ಟಿದ್ದಾರೆ. ನೆಟ್ಟಿಗರಂತೂ ಇವನೇ ನಿಜವಾದ ಬಾಹುಬಲಿ ಎಂದು ಕೊಂಡಾಡುತ್ತಿದ್ದಾರೆ.

ಬೈಕ್​ ಓಡಿಸುವುದನ್ನ ಕಲಿಯುವುದು ಒಂದು ಸಾಹಸವಾದರೆ ಹೀಗೆ ಇಷ್ಟು ಭಾರದ ಬೈಕ್​ ಅನ್ನು ತಲೆಯಮೇಲೆ ಹೊತ್ತು ಏಣಿ ಏರುವ ಸಾಹಸ ಇದೆಯಲ್ಲ ಇದು ಸಾಮಾನ್ಯರಿಗೆ ಒದಗುವಂಥದ್ದಲ್ಲ. ಏಣಿಗೆ ಕೈಮುಗಿದು ಒಂದೊಂದು ಮೆಟ್ಟಿಲುಗಳನ್ನು ಅವ ಏರುವ ಕ್ರಮ ಅಪರೂಪದಲ್ಲಿ ಅಪರೂಪ.

ನೆಟ್ಟಿಗರನ್ನಂತೂ ಈ ವಿಡಿಯೋ ಕಣ್ಣುಕಣ್ಣು ಬಿಟ್ಟು ನೋಡುವಂತೆ ಮಾಡುತ್ತಿದೆ. ಅವನ ಕುತ್ತಿಗೆಯಲ್ಲಿರುವ ತ್ರಾಣ ನನಗೆ ಬೇಕು ಎನ್ನುತ್ತಿದ್ದಾರೆ ನೆಟ್ಟಿಗರು. ನಿಜವಾದ ಬಾಹುಬಲಿಯಪ್ಪಾ ನೀನು ಎನ್ನುತ್ತಿದ್ದಾರೆ ಹಲವರು. ಇವನು ಯಾವ ಸಾಹಸ ಪ್ರದರ್ಶನಕ್ಕಾಗಿ ಮಾಡುತ್ತಿಲ್ಲ. ತನ್ನ ಕುಟುಂಬದ ಹೊಟ್ಟೆಬಟ್ಟೆನೆತ್ತಿ ಕಾಯಲು ಅನಿವಾರ್ಯವಾಗಿ ಈ ಕೆಲಸ ಮಾಡುತ್ತಿದ್ದಾನೆ ಎಂದಿದ್ದಾರೆ ಮತ್ತೂ ಕೆಲವರು. ಆದರೆ ಈ ವಿಡಿಯೋ ಎಲ್ಲಿ ಚಿತ್ರೀಕರಿಸಲಾಗಿದೆ ಎಂದು ತಿಳಿದು ಬಂದಿಲ್ಲ.

ಇವನ ಆತ್ಮವಿಶ್ವಾಸವನ್ನು ಯಾರೂ ಮೆಚ್ಚತಕ್ಕಂಥದ್ದು. ಅಪಾಯಕ್ಕೆ ತೆರೆದುಕೊಂಡು ನಿತ್ಯವೂ ಹೀಗೆ ಹೊಟ್ಟೆ ಹೊರೆಯುವವರ ಬಗ್ಗೆ ಸಹಾನುಭೂತಿ ಇರಲಿ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 1:03 pm, Sat, 26 November 22

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ