Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಥ ಹುಚ್ಚುಸಾಹಸವನ್ನು ಯಾರೂ ಪ್ರಯತ್ನಿಸಬೇಡಿ ಎನ್ನುತ್ತಿದ್ದಾರೆ ನೆಟ್ಟಿಗರು

Viral Video : ಈಗ ಕರೆಂಟ್ ಹೋದರೆ ಎಂಥ ಅವಸ್ಥೆ ಇವರದು, ತುಂಡರಿಸಿ ಬಿದ್ದರೆ ಏನಾಗಬೇಡ? ಇಂಥವರಿಗೆ ಶಿಕ್ಷೆ ಆಗಬೇಕು, ಯಾರು ಇಂಥ ಅನಾಹುತ ಐಡಿಯಾ ಮಾಡಿದ ವೆಡ್ಡಿಂಗ್​ ಪ್ಲ್ಯಾನರ್​? ಹೀಗೆಲ್ಲ ಚರ್ಚೆ ನಡೆಯುತ್ತಿದೆ ಟ್ವಿಟರ್​ನಲ್ಲಿ.

ಇಂಥ ಹುಚ್ಚುಸಾಹಸವನ್ನು ಯಾರೂ ಪ್ರಯತ್ನಿಸಬೇಡಿ ಎನ್ನುತ್ತಿದ್ದಾರೆ ನೆಟ್ಟಿಗರು
ಅಪ್ಪನೊಂದಿಗೆ ವಧುವಿನ ಪ್ರವೇಶ
Follow us
TV9 Web
| Updated By: ಶ್ರೀದೇವಿ ಕಳಸದ

Updated on:Dec 10, 2022 | 10:20 AM

Viral Video : ತಮ್ಮ ಮದುವೆ ಎಲ್ಲರಿಗಿಂತ ವಿಭಿನ್ನವಾಗಿರಬೇಕು ಎಂದು ಬಯಸದವರು ಯಾರಿದ್ದಾರೆ? ಅದಕ್ಕಾಗಿ ಎಷ್ಟೇ ಖರ್ಚಾದರೂ ಸರಿ, ಅಂದುಕೊಂಡಿದ್ದು ಈಡೇರಿದರೆ ಮುಗಿಯಿತು ಎನ್ನುವ ಕಾಲಮಾನ ಈಗಿನವರದು. ಇದೀಗ ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ಮದುಮಗಳು ತನ್ನ ತಂದೆಯೊಂದಿಗೆ ಕಲ್ಯಾಣಮಂಟಪಕ್ಕೆ ಹೀಗೆ ಕ್ರೇನ್​ ಸಹಾಯದಿಂದ ಬಂದಿಳಿಯುತ್ತಾಳೆ. ಸ್ವರ್ಗದಿಂದ ಧರೆಗಳಿದಂತೆ! ಆದರೆ ನೆಟ್ಟಿಗರು ಈ ವಿಡಿಯೋ ನೋಡಿ ವಿಚಲಿತರಾಗಿದ್ದಾರೆ. ಇಂಥ ಸಾಹಸಗಳನ್ನು ಯಾರೂ ಎಂದೂ ಪ್ರಯತ್ನಿಸಲು ಹೋಗಬೇಡಿ. ಏನಾದರೂ ಅಪಘಾತ ಸಂಭವಿಸಿದರೆ ಏನು ಗತಿ ಎಂದು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಅಪ್ಪನೊಂದಿಗೆ ಹೀಗೆ ಬರುತ್ತಿರುವ ವಧುವನ್ನು ಅಲ್ಲಿರುವ ಎಲ್ಲರೂ ಕುತೂಹಲದಿಂದ ನೋಡುತ್ತಿದ್ದಾರೆ, ಅನೇಕರು ಫೋಟೋ, ವಿಡಿಯೋದಲ್ಲಿ ಮುಳುಗಿದ್ದಾರೆ. ಈಗಾಗಲೇ ಈ ವಿಡಿಯೋ ಅನ್ನು 1.8 ಲಕ್ಷಕ್ಕಿಂತಲೂ ಹೆಚ್ಚು ಜನ ನೋಡಿದ್ದಾರೆ. 2,600ಕ್ಕಿಂತಲೂ ಹೆಚ್ಚು ಜನ ಇಷ್ಟಪಟ್ಟಿದ್ದಾರೆ. ನೂರಾರು ಜನರು ರೀಟ್ವೀಟ್ ಮಾಡಿದ್ದಾರೆ. ದಯವಿಟ್ಟು ಇಂಥದನ್ನೆಲ್ಲ ಅನುಕರಿಸಬೇಡಿ ಎಂದು ಕೇಳಿಕೊಂಡಿದ್ದಾರೆ ನೆಟ್ಟಿಗರು.

ಇದನ್ನೂ ಓದಿ : ಗುರುಗ್ರಾಮ್​ನ ‘ಸ್ವೀಟಿ ಮತ್ತು ಶೇರು’ ಭಾರತೀಯ ವಿವಾಹ ಪದ್ಧತಿಯಲ್ಲಿ ದಾಂಪತ್ಯಜೀವನಕ್ಕೆ

ಬದುಕೆಂದರೆ ಸಿನೆಮಾ ಅಲ್ಲ, ಅಲ್ಲಿ ನಡೆಯುವುದನ್ನೆಲ್ಲ ಇಲ್ಲಿ ಅನುಕರಿಸಬೇಡಿ ಎಂದಿದ್ದಾರೆ ಒಬ್ಬರು. ಇದು ಮಿಷನ್​ ಇಂಪಾಸಿಬಲ್​ ಸಿನೆಮಾದ ಆರಂಭಿಕ ದೃಶ್ಯದಂತೆ ಅನ್ನಿಸುತ್ತಿದೆ ಎಂದಿದ್ದಾರೆ ಮತ್ತೊಬ್ಬರು. ನಡುವೆಯೇ ಅದು  ಮುರಿದು ಬಿದ್ದಿದ್ದರೆ ಏನು ಗತಿ ಎಂದಿದ್ದಾರೆ ಮಗದೊಬ್ಬರು. ಇಂಥ ಶೋಕಿ ಮಾಡುವವರಿಗೆ ನಿಜಕ್ಕೂ ಶಿಕ್ಷೆ ವಿಧಿಸಬೇಕು ಎಂದಿದ್ದಾರೆ ಒಬ್ಬರು. ಕರೆಂಟ್​ ಹೋದರೆ ಇವರ ಅವಸ್ಥೆ ಏನಾಗಬೇಡ? ಎಂದಿದ್ದಾರೆ ಮತ್ತೊಬ್ಬರು. ವೆಡ್ಡಿಂಗ್ ಪ್ಲ್ಯಾನರ್​ ಯಾರೋ ಅವರನ್ನು ಇಲ್ಲಿ ಟ್ಯಾಗ್ ಮಾಡಿ ಎಂದಿದ್ದಾರೆ ಇನ್ನೊಬ್ಬರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:20 am, Sat, 10 December 22

ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ