ಇಂಥ ಹುಚ್ಚುಸಾಹಸವನ್ನು ಯಾರೂ ಪ್ರಯತ್ನಿಸಬೇಡಿ ಎನ್ನುತ್ತಿದ್ದಾರೆ ನೆಟ್ಟಿಗರು

Viral Video : ಈಗ ಕರೆಂಟ್ ಹೋದರೆ ಎಂಥ ಅವಸ್ಥೆ ಇವರದು, ತುಂಡರಿಸಿ ಬಿದ್ದರೆ ಏನಾಗಬೇಡ? ಇಂಥವರಿಗೆ ಶಿಕ್ಷೆ ಆಗಬೇಕು, ಯಾರು ಇಂಥ ಅನಾಹುತ ಐಡಿಯಾ ಮಾಡಿದ ವೆಡ್ಡಿಂಗ್​ ಪ್ಲ್ಯಾನರ್​? ಹೀಗೆಲ್ಲ ಚರ್ಚೆ ನಡೆಯುತ್ತಿದೆ ಟ್ವಿಟರ್​ನಲ್ಲಿ.

ಇಂಥ ಹುಚ್ಚುಸಾಹಸವನ್ನು ಯಾರೂ ಪ್ರಯತ್ನಿಸಬೇಡಿ ಎನ್ನುತ್ತಿದ್ದಾರೆ ನೆಟ್ಟಿಗರು
ಅಪ್ಪನೊಂದಿಗೆ ವಧುವಿನ ಪ್ರವೇಶ
Follow us
| Updated By: ಶ್ರೀದೇವಿ ಕಳಸದ

Updated on:Dec 10, 2022 | 10:20 AM

Viral Video : ತಮ್ಮ ಮದುವೆ ಎಲ್ಲರಿಗಿಂತ ವಿಭಿನ್ನವಾಗಿರಬೇಕು ಎಂದು ಬಯಸದವರು ಯಾರಿದ್ದಾರೆ? ಅದಕ್ಕಾಗಿ ಎಷ್ಟೇ ಖರ್ಚಾದರೂ ಸರಿ, ಅಂದುಕೊಂಡಿದ್ದು ಈಡೇರಿದರೆ ಮುಗಿಯಿತು ಎನ್ನುವ ಕಾಲಮಾನ ಈಗಿನವರದು. ಇದೀಗ ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ಮದುಮಗಳು ತನ್ನ ತಂದೆಯೊಂದಿಗೆ ಕಲ್ಯಾಣಮಂಟಪಕ್ಕೆ ಹೀಗೆ ಕ್ರೇನ್​ ಸಹಾಯದಿಂದ ಬಂದಿಳಿಯುತ್ತಾಳೆ. ಸ್ವರ್ಗದಿಂದ ಧರೆಗಳಿದಂತೆ! ಆದರೆ ನೆಟ್ಟಿಗರು ಈ ವಿಡಿಯೋ ನೋಡಿ ವಿಚಲಿತರಾಗಿದ್ದಾರೆ. ಇಂಥ ಸಾಹಸಗಳನ್ನು ಯಾರೂ ಎಂದೂ ಪ್ರಯತ್ನಿಸಲು ಹೋಗಬೇಡಿ. ಏನಾದರೂ ಅಪಘಾತ ಸಂಭವಿಸಿದರೆ ಏನು ಗತಿ ಎಂದು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಅಪ್ಪನೊಂದಿಗೆ ಹೀಗೆ ಬರುತ್ತಿರುವ ವಧುವನ್ನು ಅಲ್ಲಿರುವ ಎಲ್ಲರೂ ಕುತೂಹಲದಿಂದ ನೋಡುತ್ತಿದ್ದಾರೆ, ಅನೇಕರು ಫೋಟೋ, ವಿಡಿಯೋದಲ್ಲಿ ಮುಳುಗಿದ್ದಾರೆ. ಈಗಾಗಲೇ ಈ ವಿಡಿಯೋ ಅನ್ನು 1.8 ಲಕ್ಷಕ್ಕಿಂತಲೂ ಹೆಚ್ಚು ಜನ ನೋಡಿದ್ದಾರೆ. 2,600ಕ್ಕಿಂತಲೂ ಹೆಚ್ಚು ಜನ ಇಷ್ಟಪಟ್ಟಿದ್ದಾರೆ. ನೂರಾರು ಜನರು ರೀಟ್ವೀಟ್ ಮಾಡಿದ್ದಾರೆ. ದಯವಿಟ್ಟು ಇಂಥದನ್ನೆಲ್ಲ ಅನುಕರಿಸಬೇಡಿ ಎಂದು ಕೇಳಿಕೊಂಡಿದ್ದಾರೆ ನೆಟ್ಟಿಗರು.

ಇದನ್ನೂ ಓದಿ : ಗುರುಗ್ರಾಮ್​ನ ‘ಸ್ವೀಟಿ ಮತ್ತು ಶೇರು’ ಭಾರತೀಯ ವಿವಾಹ ಪದ್ಧತಿಯಲ್ಲಿ ದಾಂಪತ್ಯಜೀವನಕ್ಕೆ

ಬದುಕೆಂದರೆ ಸಿನೆಮಾ ಅಲ್ಲ, ಅಲ್ಲಿ ನಡೆಯುವುದನ್ನೆಲ್ಲ ಇಲ್ಲಿ ಅನುಕರಿಸಬೇಡಿ ಎಂದಿದ್ದಾರೆ ಒಬ್ಬರು. ಇದು ಮಿಷನ್​ ಇಂಪಾಸಿಬಲ್​ ಸಿನೆಮಾದ ಆರಂಭಿಕ ದೃಶ್ಯದಂತೆ ಅನ್ನಿಸುತ್ತಿದೆ ಎಂದಿದ್ದಾರೆ ಮತ್ತೊಬ್ಬರು. ನಡುವೆಯೇ ಅದು  ಮುರಿದು ಬಿದ್ದಿದ್ದರೆ ಏನು ಗತಿ ಎಂದಿದ್ದಾರೆ ಮಗದೊಬ್ಬರು. ಇಂಥ ಶೋಕಿ ಮಾಡುವವರಿಗೆ ನಿಜಕ್ಕೂ ಶಿಕ್ಷೆ ವಿಧಿಸಬೇಕು ಎಂದಿದ್ದಾರೆ ಒಬ್ಬರು. ಕರೆಂಟ್​ ಹೋದರೆ ಇವರ ಅವಸ್ಥೆ ಏನಾಗಬೇಡ? ಎಂದಿದ್ದಾರೆ ಮತ್ತೊಬ್ಬರು. ವೆಡ್ಡಿಂಗ್ ಪ್ಲ್ಯಾನರ್​ ಯಾರೋ ಅವರನ್ನು ಇಲ್ಲಿ ಟ್ಯಾಗ್ ಮಾಡಿ ಎಂದಿದ್ದಾರೆ ಇನ್ನೊಬ್ಬರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:20 am, Sat, 10 December 22

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ