AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಥ ಹುಚ್ಚುಸಾಹಸವನ್ನು ಯಾರೂ ಪ್ರಯತ್ನಿಸಬೇಡಿ ಎನ್ನುತ್ತಿದ್ದಾರೆ ನೆಟ್ಟಿಗರು

Viral Video : ಈಗ ಕರೆಂಟ್ ಹೋದರೆ ಎಂಥ ಅವಸ್ಥೆ ಇವರದು, ತುಂಡರಿಸಿ ಬಿದ್ದರೆ ಏನಾಗಬೇಡ? ಇಂಥವರಿಗೆ ಶಿಕ್ಷೆ ಆಗಬೇಕು, ಯಾರು ಇಂಥ ಅನಾಹುತ ಐಡಿಯಾ ಮಾಡಿದ ವೆಡ್ಡಿಂಗ್​ ಪ್ಲ್ಯಾನರ್​? ಹೀಗೆಲ್ಲ ಚರ್ಚೆ ನಡೆಯುತ್ತಿದೆ ಟ್ವಿಟರ್​ನಲ್ಲಿ.

ಇಂಥ ಹುಚ್ಚುಸಾಹಸವನ್ನು ಯಾರೂ ಪ್ರಯತ್ನಿಸಬೇಡಿ ಎನ್ನುತ್ತಿದ್ದಾರೆ ನೆಟ್ಟಿಗರು
ಅಪ್ಪನೊಂದಿಗೆ ವಧುವಿನ ಪ್ರವೇಶ
TV9 Web
| Edited By: |

Updated on:Dec 10, 2022 | 10:20 AM

Share

Viral Video : ತಮ್ಮ ಮದುವೆ ಎಲ್ಲರಿಗಿಂತ ವಿಭಿನ್ನವಾಗಿರಬೇಕು ಎಂದು ಬಯಸದವರು ಯಾರಿದ್ದಾರೆ? ಅದಕ್ಕಾಗಿ ಎಷ್ಟೇ ಖರ್ಚಾದರೂ ಸರಿ, ಅಂದುಕೊಂಡಿದ್ದು ಈಡೇರಿದರೆ ಮುಗಿಯಿತು ಎನ್ನುವ ಕಾಲಮಾನ ಈಗಿನವರದು. ಇದೀಗ ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ಮದುಮಗಳು ತನ್ನ ತಂದೆಯೊಂದಿಗೆ ಕಲ್ಯಾಣಮಂಟಪಕ್ಕೆ ಹೀಗೆ ಕ್ರೇನ್​ ಸಹಾಯದಿಂದ ಬಂದಿಳಿಯುತ್ತಾಳೆ. ಸ್ವರ್ಗದಿಂದ ಧರೆಗಳಿದಂತೆ! ಆದರೆ ನೆಟ್ಟಿಗರು ಈ ವಿಡಿಯೋ ನೋಡಿ ವಿಚಲಿತರಾಗಿದ್ದಾರೆ. ಇಂಥ ಸಾಹಸಗಳನ್ನು ಯಾರೂ ಎಂದೂ ಪ್ರಯತ್ನಿಸಲು ಹೋಗಬೇಡಿ. ಏನಾದರೂ ಅಪಘಾತ ಸಂಭವಿಸಿದರೆ ಏನು ಗತಿ ಎಂದು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಅಪ್ಪನೊಂದಿಗೆ ಹೀಗೆ ಬರುತ್ತಿರುವ ವಧುವನ್ನು ಅಲ್ಲಿರುವ ಎಲ್ಲರೂ ಕುತೂಹಲದಿಂದ ನೋಡುತ್ತಿದ್ದಾರೆ, ಅನೇಕರು ಫೋಟೋ, ವಿಡಿಯೋದಲ್ಲಿ ಮುಳುಗಿದ್ದಾರೆ. ಈಗಾಗಲೇ ಈ ವಿಡಿಯೋ ಅನ್ನು 1.8 ಲಕ್ಷಕ್ಕಿಂತಲೂ ಹೆಚ್ಚು ಜನ ನೋಡಿದ್ದಾರೆ. 2,600ಕ್ಕಿಂತಲೂ ಹೆಚ್ಚು ಜನ ಇಷ್ಟಪಟ್ಟಿದ್ದಾರೆ. ನೂರಾರು ಜನರು ರೀಟ್ವೀಟ್ ಮಾಡಿದ್ದಾರೆ. ದಯವಿಟ್ಟು ಇಂಥದನ್ನೆಲ್ಲ ಅನುಕರಿಸಬೇಡಿ ಎಂದು ಕೇಳಿಕೊಂಡಿದ್ದಾರೆ ನೆಟ್ಟಿಗರು.

ಇದನ್ನೂ ಓದಿ : ಗುರುಗ್ರಾಮ್​ನ ‘ಸ್ವೀಟಿ ಮತ್ತು ಶೇರು’ ಭಾರತೀಯ ವಿವಾಹ ಪದ್ಧತಿಯಲ್ಲಿ ದಾಂಪತ್ಯಜೀವನಕ್ಕೆ

ಬದುಕೆಂದರೆ ಸಿನೆಮಾ ಅಲ್ಲ, ಅಲ್ಲಿ ನಡೆಯುವುದನ್ನೆಲ್ಲ ಇಲ್ಲಿ ಅನುಕರಿಸಬೇಡಿ ಎಂದಿದ್ದಾರೆ ಒಬ್ಬರು. ಇದು ಮಿಷನ್​ ಇಂಪಾಸಿಬಲ್​ ಸಿನೆಮಾದ ಆರಂಭಿಕ ದೃಶ್ಯದಂತೆ ಅನ್ನಿಸುತ್ತಿದೆ ಎಂದಿದ್ದಾರೆ ಮತ್ತೊಬ್ಬರು. ನಡುವೆಯೇ ಅದು  ಮುರಿದು ಬಿದ್ದಿದ್ದರೆ ಏನು ಗತಿ ಎಂದಿದ್ದಾರೆ ಮಗದೊಬ್ಬರು. ಇಂಥ ಶೋಕಿ ಮಾಡುವವರಿಗೆ ನಿಜಕ್ಕೂ ಶಿಕ್ಷೆ ವಿಧಿಸಬೇಕು ಎಂದಿದ್ದಾರೆ ಒಬ್ಬರು. ಕರೆಂಟ್​ ಹೋದರೆ ಇವರ ಅವಸ್ಥೆ ಏನಾಗಬೇಡ? ಎಂದಿದ್ದಾರೆ ಮತ್ತೊಬ್ಬರು. ವೆಡ್ಡಿಂಗ್ ಪ್ಲ್ಯಾನರ್​ ಯಾರೋ ಅವರನ್ನು ಇಲ್ಲಿ ಟ್ಯಾಗ್ ಮಾಡಿ ಎಂದಿದ್ದಾರೆ ಇನ್ನೊಬ್ಬರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:20 am, Sat, 10 December 22

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ