AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಥ ಹುಚ್ಚುಸಾಹಸವನ್ನು ಯಾರೂ ಪ್ರಯತ್ನಿಸಬೇಡಿ ಎನ್ನುತ್ತಿದ್ದಾರೆ ನೆಟ್ಟಿಗರು

Viral Video : ಈಗ ಕರೆಂಟ್ ಹೋದರೆ ಎಂಥ ಅವಸ್ಥೆ ಇವರದು, ತುಂಡರಿಸಿ ಬಿದ್ದರೆ ಏನಾಗಬೇಡ? ಇಂಥವರಿಗೆ ಶಿಕ್ಷೆ ಆಗಬೇಕು, ಯಾರು ಇಂಥ ಅನಾಹುತ ಐಡಿಯಾ ಮಾಡಿದ ವೆಡ್ಡಿಂಗ್​ ಪ್ಲ್ಯಾನರ್​? ಹೀಗೆಲ್ಲ ಚರ್ಚೆ ನಡೆಯುತ್ತಿದೆ ಟ್ವಿಟರ್​ನಲ್ಲಿ.

ಇಂಥ ಹುಚ್ಚುಸಾಹಸವನ್ನು ಯಾರೂ ಪ್ರಯತ್ನಿಸಬೇಡಿ ಎನ್ನುತ್ತಿದ್ದಾರೆ ನೆಟ್ಟಿಗರು
ಅಪ್ಪನೊಂದಿಗೆ ವಧುವಿನ ಪ್ರವೇಶ
TV9 Web
| Edited By: |

Updated on:Dec 10, 2022 | 10:20 AM

Share

Viral Video : ತಮ್ಮ ಮದುವೆ ಎಲ್ಲರಿಗಿಂತ ವಿಭಿನ್ನವಾಗಿರಬೇಕು ಎಂದು ಬಯಸದವರು ಯಾರಿದ್ದಾರೆ? ಅದಕ್ಕಾಗಿ ಎಷ್ಟೇ ಖರ್ಚಾದರೂ ಸರಿ, ಅಂದುಕೊಂಡಿದ್ದು ಈಡೇರಿದರೆ ಮುಗಿಯಿತು ಎನ್ನುವ ಕಾಲಮಾನ ಈಗಿನವರದು. ಇದೀಗ ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ಮದುಮಗಳು ತನ್ನ ತಂದೆಯೊಂದಿಗೆ ಕಲ್ಯಾಣಮಂಟಪಕ್ಕೆ ಹೀಗೆ ಕ್ರೇನ್​ ಸಹಾಯದಿಂದ ಬಂದಿಳಿಯುತ್ತಾಳೆ. ಸ್ವರ್ಗದಿಂದ ಧರೆಗಳಿದಂತೆ! ಆದರೆ ನೆಟ್ಟಿಗರು ಈ ವಿಡಿಯೋ ನೋಡಿ ವಿಚಲಿತರಾಗಿದ್ದಾರೆ. ಇಂಥ ಸಾಹಸಗಳನ್ನು ಯಾರೂ ಎಂದೂ ಪ್ರಯತ್ನಿಸಲು ಹೋಗಬೇಡಿ. ಏನಾದರೂ ಅಪಘಾತ ಸಂಭವಿಸಿದರೆ ಏನು ಗತಿ ಎಂದು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಅಪ್ಪನೊಂದಿಗೆ ಹೀಗೆ ಬರುತ್ತಿರುವ ವಧುವನ್ನು ಅಲ್ಲಿರುವ ಎಲ್ಲರೂ ಕುತೂಹಲದಿಂದ ನೋಡುತ್ತಿದ್ದಾರೆ, ಅನೇಕರು ಫೋಟೋ, ವಿಡಿಯೋದಲ್ಲಿ ಮುಳುಗಿದ್ದಾರೆ. ಈಗಾಗಲೇ ಈ ವಿಡಿಯೋ ಅನ್ನು 1.8 ಲಕ್ಷಕ್ಕಿಂತಲೂ ಹೆಚ್ಚು ಜನ ನೋಡಿದ್ದಾರೆ. 2,600ಕ್ಕಿಂತಲೂ ಹೆಚ್ಚು ಜನ ಇಷ್ಟಪಟ್ಟಿದ್ದಾರೆ. ನೂರಾರು ಜನರು ರೀಟ್ವೀಟ್ ಮಾಡಿದ್ದಾರೆ. ದಯವಿಟ್ಟು ಇಂಥದನ್ನೆಲ್ಲ ಅನುಕರಿಸಬೇಡಿ ಎಂದು ಕೇಳಿಕೊಂಡಿದ್ದಾರೆ ನೆಟ್ಟಿಗರು.

ಇದನ್ನೂ ಓದಿ : ಗುರುಗ್ರಾಮ್​ನ ‘ಸ್ವೀಟಿ ಮತ್ತು ಶೇರು’ ಭಾರತೀಯ ವಿವಾಹ ಪದ್ಧತಿಯಲ್ಲಿ ದಾಂಪತ್ಯಜೀವನಕ್ಕೆ

ಬದುಕೆಂದರೆ ಸಿನೆಮಾ ಅಲ್ಲ, ಅಲ್ಲಿ ನಡೆಯುವುದನ್ನೆಲ್ಲ ಇಲ್ಲಿ ಅನುಕರಿಸಬೇಡಿ ಎಂದಿದ್ದಾರೆ ಒಬ್ಬರು. ಇದು ಮಿಷನ್​ ಇಂಪಾಸಿಬಲ್​ ಸಿನೆಮಾದ ಆರಂಭಿಕ ದೃಶ್ಯದಂತೆ ಅನ್ನಿಸುತ್ತಿದೆ ಎಂದಿದ್ದಾರೆ ಮತ್ತೊಬ್ಬರು. ನಡುವೆಯೇ ಅದು  ಮುರಿದು ಬಿದ್ದಿದ್ದರೆ ಏನು ಗತಿ ಎಂದಿದ್ದಾರೆ ಮಗದೊಬ್ಬರು. ಇಂಥ ಶೋಕಿ ಮಾಡುವವರಿಗೆ ನಿಜಕ್ಕೂ ಶಿಕ್ಷೆ ವಿಧಿಸಬೇಕು ಎಂದಿದ್ದಾರೆ ಒಬ್ಬರು. ಕರೆಂಟ್​ ಹೋದರೆ ಇವರ ಅವಸ್ಥೆ ಏನಾಗಬೇಡ? ಎಂದಿದ್ದಾರೆ ಮತ್ತೊಬ್ಬರು. ವೆಡ್ಡಿಂಗ್ ಪ್ಲ್ಯಾನರ್​ ಯಾರೋ ಅವರನ್ನು ಇಲ್ಲಿ ಟ್ಯಾಗ್ ಮಾಡಿ ಎಂದಿದ್ದಾರೆ ಇನ್ನೊಬ್ಬರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:20 am, Sat, 10 December 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ