AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಭಾರೀ ಮಳೆ; ವರ್ಕ್​ ಫ್ರಂ ಹೋಮ್​ಗೆ ವಿನಂತಿಸಿಕೊಳ್ಳುತ್ತಿರುವ ನೆಟ್ಟಿಗರು

BengaluruRains : ‘ಬೆಂಗಳೂರಿನಲ್ಲಿ ರಸ್ತೆಗಳು ಮುಳುಗಿವೆ. ಕ್ಯಾಬ್​ಗಳ ಬೆಲೆ ಗಗನಕ್ಕೆ. ಆಟೋಗಳು ದುಪ್ಪಟ್ಟು ಹಣ, ಟ್ರಾಫಿಕ್ ಜಾಮ್​, ದಯವಿಟ್ಟು ಕಂಪೆನಿಗಳು ವರ್ಕ್​ ಫ್ರಂ ಹೋಂಗೆ ಅವಕಾಶ ಕಲ್ಪಿಸಿಕೊಡಬೇಕು’ ಎಂದು ನೆಟ್ಟಿಗರು ಕೇಳಿಕೊಳ್ಳುತ್ತಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಮಳೆ; ವರ್ಕ್​ ಫ್ರಂ ಹೋಮ್​ಗೆ ವಿನಂತಿಸಿಕೊಳ್ಳುತ್ತಿರುವ ನೆಟ್ಟಿಗರು
ಮಳೆ
TV9 Web
| Edited By: |

Updated on:Oct 21, 2022 | 6:37 PM

Share

Viral Video : ಮಳೆಯ ರೌದ್ರಾವತಾರದಿಂದ ಬೆಂಗಳೂರು ಮುಳುಗೇಳುತ್ತಿದೆ. ಹಾಗಾಗಿ ನೆಟ್ಟಿಗರು ಮನೆಯಿಂದಲೇ ಕೆಲಸ ಮಾಡಲು ಅನುಕೂಲ ಮಾಡಿಕೊಡುವಂತೆ ಕಂಪೆನಿಗಳಿಗೆ ವಿನಂತಿಸಿಕೊಳ್ಳುತ್ತಿದ್ದಾರೆ. ನೀರಿನಿಂದ ಆವೃತಗೊಂಡಿರುವ ಇಲ್ಲಿಯ ಪ್ರದೇಶಗಳು, ರಸ್ತೆಗಳು, ಮನೆಗಳನ್ನು ನೋಡುತ್ತಿದ್ದರೆ ಭಯವಾಗುತ್ತಿದೆ. ಹಾಗಾಗಿ ಕಂಪೆನಿಗಳು ತಮ್ಮ ನೌಕರರಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ಕಲ್ಪಿಸಬೇಕು ಎಂದು ಹೇಳುತ್ತ ಮಳೆಗೆ ಸಂಬಂಧಿಸಿದ ವಿಡಿಯೋ, ಫೋಟೋಗಳೊಂದಿಗೆ #bengalururains ಎಂಬ ಹ್ಯಾಶ್‌ಟ್ಯಾಗಿನಡಿ ಟ್ವೀಟ್​ ಮಾಡಲಾರಂಭಿಸಿದ್ದಾರೆ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಬೆಂಗಳೂರಿನಲ್ಲಿ ಬುಧವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಪ್ರವಾಹದಂಥ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಗಳು ನೀರಿನಲ್ಲಿ ಮುಳುಗಿ ಸಂಚಾರಕ್ಕೆ ಸಮಸ್ಯೆ ಉಂಟಾಗುತ್ತಿದೆ. ಟ್ರಾಫಿಕ್​ ಜಾಮ್​ನಿಂದಾಗಿ ಜನರು ಮನೆ ಮತ್ತು ಆಫೀಸು ತಲುಪಲು ಬಹಳ ತೊಂದರೆ ಅನುಭವಿಸುತ್ತಿದ್ದಾರೆ. ಜೊತೆಗೆ ಕ್ಯಾಬ್​ಗಳ ಬೆಲೆ ಗಗನಕ್ಕೇರುತ್ತಿವೆ. ಕ್ಯಾಬ್​ ಬುಕ್ ಮಾಡುವುದು ಕಷ್ಟವಾಗುತ್ತಿದೆ. ಬುಕ್​ ಮಾಡಿದರೂ ಕ್ಯಾನ್ಸಲ್ ಚಾಲಕರು  ಮಾಡುತ್ತಿದ್ದಾರೆ. ಇನ್ನು ಆಟೋ ಡ್ರೈವರ್​ಗಳು ಮೀಟರ್​ ಹಾಕದೆ ದುಪ್ಪಟ್ಟು ಹಣವನ್ನು ಕೇಳುತ್ತಿದ್ದಾರೆ. ಒಟ್ಟಾರೆಯಾಗಿ ಮಳೆಯಿಂದ ಎಲ್ಲರಿಗೂ ತೊಂದರೆಯಾಗಿ ಪರಿಸ್ಥಿತಿ ಬಿಗಡಾಯಿಸುತ್ತಿದೆ ಎಂಬ ಕಾರಣಗಳನ್ನು ನೆಟ್ಟಿಗರು ವಿವರಿಸಿದ್ದಾರೆ.

ಇನ್ನು ಬೆಂಗಳೂರು ಐಟಿ ರಾಜಧಾನಿ. ಸಾಮಾನ್ಯವಾಗಿ ಎಲ್ಲ ಕಂಪೆನಿಗಳು ಕೊರೊನಾ ಸಂದರ್ಭದಲ್ಲಿಯೇ ವರ್ಕ್​ ಫ್ರಂ ಹೋಂ ಸಂಸ್ಕೃತಿಯನ್ನು ರೂಢಿಸಿಕೊಂಡಾಗಿದೆ. ಹಾಗಾಗಿ ಈಗಲೂ ವರ್ಕ್​ ಫ್ರಂ ಹೋಂ ಮುಂದುವರಿಸಿದರೆ ಸಮಸ್ಯೆ ಉಂಟಾಗಲಾರದು ಎಂದಿದ್ದಾರೆ ಇನ್ನೂ ಕೆಲವರು.

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸೂಚನೆ ಇದೆ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 6:30 pm, Fri, 21 October 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್