AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಭಾರೀ ಮಳೆ; ವರ್ಕ್​ ಫ್ರಂ ಹೋಮ್​ಗೆ ವಿನಂತಿಸಿಕೊಳ್ಳುತ್ತಿರುವ ನೆಟ್ಟಿಗರು

BengaluruRains : ‘ಬೆಂಗಳೂರಿನಲ್ಲಿ ರಸ್ತೆಗಳು ಮುಳುಗಿವೆ. ಕ್ಯಾಬ್​ಗಳ ಬೆಲೆ ಗಗನಕ್ಕೆ. ಆಟೋಗಳು ದುಪ್ಪಟ್ಟು ಹಣ, ಟ್ರಾಫಿಕ್ ಜಾಮ್​, ದಯವಿಟ್ಟು ಕಂಪೆನಿಗಳು ವರ್ಕ್​ ಫ್ರಂ ಹೋಂಗೆ ಅವಕಾಶ ಕಲ್ಪಿಸಿಕೊಡಬೇಕು’ ಎಂದು ನೆಟ್ಟಿಗರು ಕೇಳಿಕೊಳ್ಳುತ್ತಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಮಳೆ; ವರ್ಕ್​ ಫ್ರಂ ಹೋಮ್​ಗೆ ವಿನಂತಿಸಿಕೊಳ್ಳುತ್ತಿರುವ ನೆಟ್ಟಿಗರು
ಮಳೆ
TV9 Web
| Edited By: ಶ್ರೀದೇವಿ ಕಳಸದ|

Updated on:Oct 21, 2022 | 6:37 PM

Share

Viral Video : ಮಳೆಯ ರೌದ್ರಾವತಾರದಿಂದ ಬೆಂಗಳೂರು ಮುಳುಗೇಳುತ್ತಿದೆ. ಹಾಗಾಗಿ ನೆಟ್ಟಿಗರು ಮನೆಯಿಂದಲೇ ಕೆಲಸ ಮಾಡಲು ಅನುಕೂಲ ಮಾಡಿಕೊಡುವಂತೆ ಕಂಪೆನಿಗಳಿಗೆ ವಿನಂತಿಸಿಕೊಳ್ಳುತ್ತಿದ್ದಾರೆ. ನೀರಿನಿಂದ ಆವೃತಗೊಂಡಿರುವ ಇಲ್ಲಿಯ ಪ್ರದೇಶಗಳು, ರಸ್ತೆಗಳು, ಮನೆಗಳನ್ನು ನೋಡುತ್ತಿದ್ದರೆ ಭಯವಾಗುತ್ತಿದೆ. ಹಾಗಾಗಿ ಕಂಪೆನಿಗಳು ತಮ್ಮ ನೌಕರರಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ಕಲ್ಪಿಸಬೇಕು ಎಂದು ಹೇಳುತ್ತ ಮಳೆಗೆ ಸಂಬಂಧಿಸಿದ ವಿಡಿಯೋ, ಫೋಟೋಗಳೊಂದಿಗೆ #bengalururains ಎಂಬ ಹ್ಯಾಶ್‌ಟ್ಯಾಗಿನಡಿ ಟ್ವೀಟ್​ ಮಾಡಲಾರಂಭಿಸಿದ್ದಾರೆ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಬೆಂಗಳೂರಿನಲ್ಲಿ ಬುಧವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಪ್ರವಾಹದಂಥ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಗಳು ನೀರಿನಲ್ಲಿ ಮುಳುಗಿ ಸಂಚಾರಕ್ಕೆ ಸಮಸ್ಯೆ ಉಂಟಾಗುತ್ತಿದೆ. ಟ್ರಾಫಿಕ್​ ಜಾಮ್​ನಿಂದಾಗಿ ಜನರು ಮನೆ ಮತ್ತು ಆಫೀಸು ತಲುಪಲು ಬಹಳ ತೊಂದರೆ ಅನುಭವಿಸುತ್ತಿದ್ದಾರೆ. ಜೊತೆಗೆ ಕ್ಯಾಬ್​ಗಳ ಬೆಲೆ ಗಗನಕ್ಕೇರುತ್ತಿವೆ. ಕ್ಯಾಬ್​ ಬುಕ್ ಮಾಡುವುದು ಕಷ್ಟವಾಗುತ್ತಿದೆ. ಬುಕ್​ ಮಾಡಿದರೂ ಕ್ಯಾನ್ಸಲ್ ಚಾಲಕರು  ಮಾಡುತ್ತಿದ್ದಾರೆ. ಇನ್ನು ಆಟೋ ಡ್ರೈವರ್​ಗಳು ಮೀಟರ್​ ಹಾಕದೆ ದುಪ್ಪಟ್ಟು ಹಣವನ್ನು ಕೇಳುತ್ತಿದ್ದಾರೆ. ಒಟ್ಟಾರೆಯಾಗಿ ಮಳೆಯಿಂದ ಎಲ್ಲರಿಗೂ ತೊಂದರೆಯಾಗಿ ಪರಿಸ್ಥಿತಿ ಬಿಗಡಾಯಿಸುತ್ತಿದೆ ಎಂಬ ಕಾರಣಗಳನ್ನು ನೆಟ್ಟಿಗರು ವಿವರಿಸಿದ್ದಾರೆ.

ಇನ್ನು ಬೆಂಗಳೂರು ಐಟಿ ರಾಜಧಾನಿ. ಸಾಮಾನ್ಯವಾಗಿ ಎಲ್ಲ ಕಂಪೆನಿಗಳು ಕೊರೊನಾ ಸಂದರ್ಭದಲ್ಲಿಯೇ ವರ್ಕ್​ ಫ್ರಂ ಹೋಂ ಸಂಸ್ಕೃತಿಯನ್ನು ರೂಢಿಸಿಕೊಂಡಾಗಿದೆ. ಹಾಗಾಗಿ ಈಗಲೂ ವರ್ಕ್​ ಫ್ರಂ ಹೋಂ ಮುಂದುವರಿಸಿದರೆ ಸಮಸ್ಯೆ ಉಂಟಾಗಲಾರದು ಎಂದಿದ್ದಾರೆ ಇನ್ನೂ ಕೆಲವರು.

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸೂಚನೆ ಇದೆ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 6:30 pm, Fri, 21 October 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ