AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಟ್ಟ ಮಗಳ ಕೈಯಲ್ಲಿ ರೋಗಿಯ ತಲೆಬುರುಡೆಯಲ್ಲಿ ರಂಧ್ರ ಮಾಡಿಸಿದ ಸರ್ಜನ್!

ಆಸ್ಟ್ರಿಯಾದಲ್ಲಿ ವೈದ್ಯಕೀಯ ನೀತಿ ನಿಯಮಗಳನ್ನು ಉಲ್ಲಂಘಿಸಿ, ಮೆದುಳಿನ ಶಸ್ತ್ರಚಿಕಿತ್ಸೆ ವೇಳೆ ವೈದ್ಯರೊಬ್ಬರು ತಮ್ಮ 12 ವರ್ಷದ ಮಗಳಿಗೆ ರೋಗಿಯ ತಲೆಬುರುಡೆಯಲ್ಲಿ ರಂಧ್ರ ಮಾಡಲು ಅವಕಾಶ ನೀಡಿದ್ದಾರೆ. ಇದೀಗ ಈ ಕೃತ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ. ವೈದ್ಯರನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಯುತ್ತಿದೆ.

ಪುಟ್ಟ ಮಗಳ ಕೈಯಲ್ಲಿ ರೋಗಿಯ ತಲೆಬುರುಡೆಯಲ್ಲಿ ರಂಧ್ರ ಮಾಡಿಸಿದ ಸರ್ಜನ್!
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Oct 16, 2025 | 1:58 PM

Share

“ವೈದ್ಯೋ ಹರಿ ನಾರಾಯಣ” ಈ ಮಾತಿಗೆ ಕೆಲವೊಂದು ವೈದ್ಯರು ವಿರುದ್ಧವಾಗಿ ಕೆಲಸ ಮಾಡುತ್ತಾರೆ. ವೈದ್ಯ ವೃತ್ತಿಗೆ ಬಹುದೊಡ್ಡ ಮಹತ್ವ ಇದೆ. ಆ ವೃತ್ತಿಯನ್ನು ನಿಭಾಯಿಸಲು ಆಟವಾಡುವ ಮಕ್ಕಳಿಗೆ ನೀಡಿದ್ರೆ ಹೇಗಿರಬಹುದು, ಹೌದು ಇಲ್ಲೊಂದು ಅಂತಹದೇ ಘಟನೆ ನಡೆದಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದ ಭಾರೀ ವೈರಲ್ ಆಗಿದೆ. ಹಾಗೂ ಈ ವಿಚಾರವಾಗಿ ಚರ್ಚೆಗಳು ಕೂಡ ನಡೆಯುತ್ತಿದೆ. ಮೆದುಳಿನ ಶಸ್ತ್ರಚಿಕಿತ್ಸೆ ಮಾಡುವ ವೈದ್ಯರು ರೋಗಿಯೊಬ್ಬರ ತಲೆಬುರುಡೆಯಲ್ಲಿ ಚಿಕ್ಕ ರಂಧ್ರ (patient skull drilled) ಮಾಡಲು ತನ್ನ 12 ವರ್ಷದ ಮಗಳಿಗೆ ಅವಕಾಶ ನೀಡಿದ್ದಾರೆ. ಇದೀಗ ಈ ವೈದ್ಯರನ್ನು ಬಂಧಿಸಲಾಗಿದ್ದು, ವಿಚಾರಣೆ ಕೂಡ ನಡೆಸಲಾಗುತ್ತಿದೆ.

ಜನವರಿಯಲ್ಲಿ ಈ ಘಟನೆ ನಡೆದಿದೆ. ಆದರೆ ಪಕ್ರರಣ ತಡವಾಗಿ ಬೆಳಕಿಗೆ ಬಂದಿದೆ. ಆಸ್ಟ್ರಿಯಾದಲ್ಲಿ ಮೆದುಳಿನ ಶಸ್ತ್ರಚಿಕಿತ್ಸಕಿರೊಬ್ಬರು ತನ್ನ 12 ವರ್ಷದ ಮಗಳಿಗೆ ಆಪರೇಷನ್ ಥಿಯೇಟರ್‌ಗೆ ಪ್ರವೇಶಿಸಲು ಅವಕಾಶ ನೀಡಿದ್ದಾರೆ. ನಂತರ ರೋಗಿಯ ತಲೆಬುರುಡೆಯಲ್ಲಿ ರಂಧ್ರ ಮಾಡಲು ಅವಕಾಶ ನೀಡಿದ್ದಾರೆ ಎಂದು ಹೇಳಲಾಗಿದೆ. ಕುರಿಯರ್ ವರದಿಯ ಪ್ರಕಾರ, ಆಸ್ಟ್ರಿಯಾದ ಗ್ರಾಜ್‌ನಲ್ಲಿರುವ ಗ್ರಾಜ್ ಪ್ರಾದೇಶಿಕ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ಈ ಘಟನೆ ನಡೆದಿದೆ .

ಇದನ್ನೂ ಓದಿ: ಫೋರ್ಕ್ ಸ್ಪೂನ್ , ಚಾಕುವಿನಿಂದ ಸಮೋಸಾ ತಿನ್ನುವುದು ಹೇಗೆಂದು ಕಲಿಸಿದ ತರಬೇತುದಾರ

33 ವರ್ಷದ ಕೃಷಿಕರೊಬ್ಬರು ಮೆದುಳಿನ ಶಸ್ತ್ರಚಿಕಿತ್ಸೆಗಾಗಿ ಈ ಆಸ್ಪತ್ರೆಗೆ ದಾಖಲಾಗಿದ್ದರು, ಗಂಭೀರ ಅಪಘಾತದಿಂದ ಅವರ ಮೆದುಳಿಗೆ ಪೆಟ್ಟಾಗಿತ್ತು. ಇವರಿಗೆ ಇಬ್ಬರು ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದರು, ಇದರಲ್ಲಿ ಒಬ್ಬರು ಇನ್ನೂ ತರಬೇತಿಯಲ್ಲಿರುವ ನರಶಸ್ತ್ರಚಿಕಿತ್ಸಕರಾಗಿದ್ದರು. ಈ ವೇಳೆ ಹಿರಿಯ ವೈದ್ಯರು ತಮ್ಮ 12 ವರ್ಷದ ಮಗಳನ್ನು ಆಪರೇಷನ್ ಥಿಯೇಟರ್‌ಗೆ ಕರೆದುಕೊಂಡು ಹೋಗಿದ್ದಾರೆ. ಶಸ್ತ್ರಚಿಕಿತ್ಸೆ ಬಹುತೇಕ ಪೂರ್ಣಗೊಂಡ ನಂತರ ಮಗಳಿಗೆ ರೋಗಿಯ ತಲೆಬುರುಡೆಯಲ್ಲಿ ಚಿಕ್ಕ ರಂಧ್ರ ಮಾಡಲು ಅವಕಾಶ ನೀಡಿದ್ದಾರೆ. ಆಪರೇಷನ್ ಥಿಯೇಟರ್​​ನಿಂದ ಹೊರ ಬಂದ ಮೇಲೆ ಆಸ್ಪತ್ರೆಗಳ ನರ್ಸ್​​ಗಳಲ್ಲಿ ನನ್ನ ಮಗಳು ಒಂದು ಆಪರೇಷನ್ ಮಾಡಿದ್ದಾಳೆ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ಇದೀಗ ಈ ಹೆಮ್ಮೆ ಪಡುವ ಕೆಲಸವೇ ಆ ವೈದ್ಯರಿಗೆ ಜೈಲು ಸೇರುವ ಸ್ಥಿತಿಯನ್ನು ತಂದಿದೆ. ಇಲ್ಲಿ ವೈದ್ಯರ ಹೆಸರನ್ನು ಎಲ್ಲೂ ಉಲ್ಲೇಖ ಮಾಡಿಲ್ಲ. ಇನ್ನು ವೈದ್ಯರು ಈ ಆರೋಪವನ್ನು ನಿರಾಕರಿಸಿದ್ದಾರೆ.

ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:57 pm, Thu, 16 October 25

Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು