AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ಹೋಮ್‌ವರ್ಕ್ ಮಾಡಲಿಲ್ಲ ಎಂಬ ಕಾರಣಕ್ಕೆ ಉರಿ ಬಿಸಿಲಿನಲ್ಲಿ ಮಗಳ ಕೈಕಾಲು ಕಟ್ಟಿಹಾಕಿದ ತಾಯಿ

ತಾಯಂದಿರು ತಮ್ಮ ಮಕ್ಕಳನ್ನು ಎಷ್ಟು ಮುದ್ದು ಮಾಡುತ್ತಾರೊ, ಮಕ್ಕಳು ಏನಾದರೂ ತಪ್ಪು ಮಾಡಿದಾಗ ಅಷ್ಟೇ ಶಿಕ್ಷಿಸುತ್ತಾರೆ. ಸದ್ಯ ಹೋಮ್​ ವರ್ಕ್ ಮಾಡಿಲ್ಲವೆಂಬ ಕಾರಣಕ್ಕೆ ತಾಯಿ ತನ್ನ ಮಗಳನ್ನು ಉರಿ ಬಿಸಿಲಿನಲ್ಲಿ ಕೈಕಾಲು ಕಟ್ಟಿ ಹಾಕಿರುವ ವಿಡಿಯೋ ವೈರಲ್ ಆಗಿದೆ.

ದೆಹಲಿ: ಹೋಮ್‌ವರ್ಕ್ ಮಾಡಲಿಲ್ಲ ಎಂಬ ಕಾರಣಕ್ಕೆ ಉರಿ ಬಿಸಿಲಿನಲ್ಲಿ ಮಗಳ ಕೈಕಾಲು ಕಟ್ಟಿಹಾಕಿದ ತಾಯಿ
ಉರಿ ಬಿಸಿಲಿನಲ್ಲಿ ನರಳಾಡುತ್ತಿರುವ ಬಾಲಕಿ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Jun 09, 2022 | 7:09 AM

Share

ದೆಹಲಿಯ ಮನೆಯೊಂದರ ಮೇಲೆ ಐದು ವರ್ಷದ ಬಾಲಕಿ ಕೈಕಾಲುಗಳನ್ನು ಕಟ್ಟಿಕೊಂಡು ಸುಡುವ ಬಿಸಿಲಿನಲ್ಲಿ ಕಷ್ಟಪಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದೆಹಲಿ ಪೊಲೀಸರು ನಡೆಸಿದ ಆರಂಭಿಕ ತನಿಖೆಯಲ್ಲಿ ಬಾಲಕಿಯ  ತಾಯಿ ತನ್ನ ಶಾಲೆಯ ಹೋಮ್​ ವರ್ಕ್​ ಮಾಡಿಲ್ಲ ಎನ್ನುವ ಕಾರಣಕ್ಕೆ ಶಿಕ್ಷೆ ವಿಧಿಸಿದ್ದಾಳೆ ಎಂದು ತಿಳಿದುಬಂದಿದೆ. ಮೊದಲಿಗೆ, ವಿಡಿಯೋ ಕರವಾಲ್ ನಗರ ಪ್ರದೇಶದಿಂದ ಹರಿ ಬಿಡಲಾಗಿದೆ ಎಂದು ಪೊಲೀಸರಿಗೆ ಮಾಹಿತಿ ಸಿಕ್ಕಿತು. ಆದರೆ ಅಲ್ಲಿ ಘಟನೆಗೆ ಸಂಬಂಧಿಸಿದ ಯಾವುದನ್ನೂ ಪೊಲೀಸರು ಪತ್ತೆ ಮಾಡಲಿಲ್ಲ. ನಂತರ, ವಿಡಿಯೋ ತುಕ್ಮೀರ್‌ಪುರದ ಖಜೂರಿ ಖಾಸ್ ಪ್ರದೇಶದು ಎಂದು ತಿಳಿದು ಬಂದಿದ್ದು, ಮನೆಯನ್ನು ಪತ್ತೆಹಚ್ಚಲಾಯಿತು.

ಇದನ್ನೂ ಓದಿ: Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಈ ದಿನ ದೇವರ ಕೃಪೆಯಿಂದ ಅನೇಕ ಕಾರ್ಯಗಳು ನಡೆಯುತ್ತವೆ

ವಿಡಿಯೋದಲ್ಲಿ, ಬಾಲಕಿಯನ್ನು ಮನೆಯ ಛಾವಣಿಯ ಮೇಲೆ ಹಗ್ಗದಿಂದ ಕಟ್ಟಲಾಗಿದ್ದು, ಬಿಸಿಲಿನ ನಡುವೆ ತನ್ನನ್ನು ಬಿಡಿಸಿಕೊಳ್ಳಲು ಹೆಣಗಾಡುತ್ತಿರುವುದನ್ನು ಕಾಣಬಹುದು. ಸುಡುವ ಬಿಸಿಲಿನ ಶಾಖದಿಂದ ಆಕೆಯ ಚರ್ಮವು ಸುಡುತ್ತಿದ್ದು, ಬಾಲಕಿಯು ನೋವಿನಿಂದ ಕಿರುಚುವುದು ಕೇಳಿಸುತ್ತದೆ. ಹೋಮ್​ ವರ್ಕ್ ಮಾಡದ ಮಗಳನ್ನು ಐದರಿಂದ ಏಳು ನಿಮಿಷಗಳ ಕಾಲ ಶಿಕ್ಷಿಸಿ ನಂತರ ಬಾಲಕಿಯನ್ನು ಕೆಳಗಿಳಿಸಿರುವುದಾಗಿ ಮಗುವಿನ ತಾಯಿ ಪೊಲೀಸರಿಗೆ ತಿಳಿಸಿದ್ದಾರೆ.

ದೆಹಲಿ ಪೊಲೀಸರ ತನಿಖೆ 

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ದೆಹಲಿ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ತನಿಖೆಯ ನಂತರ, ಪೊಲೀಸರು ವಿಳಾಸ ಮತ್ತು ಕುಟುಂಬವನ್ನು ಪತ್ತೆಹಚ್ಚಿದ್ದಾರೆ. ದೆಹಲಿ ಪೊಲೀಸರು ತನ್ನ ಟ್ವಿಟರ್‌ನಲ್ಲಿ ಈ ಕುರಿತಾಗಿ ಬರೆದುಕೊಂಡಿದ್ದು, ಒಂದು ಹೆಣ್ಣು ಮಗುವನ್ನು ಮನೆಯ ಛಾವಣಿಯ ಮೇಲೆ ಕಟ್ಟಿಹಾಕಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ, ಆಕೆಯನ್ನು ಗುರುತಿಸಿ ಖಚಿತಪಡಿಸಿಕೊಳ್ಳಲು ದೆಹಲಿ ಪೊಲೀಸರು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಿದ್ದಾರೆ. ಬಾಲಕಿಯ ಕುಟುಂಬ ಗುರುತಿಸಲಾಗಿದ್ದು, ಮತ್ತು ಸೂಕ್ತ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಬರೆದುಕೊಂಡಿದ್ದಾರೆ.

ಇನ್ನಷ್ಟು ಟ್ರೆಂಡಿಂಗ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 7:09 am, Thu, 9 June 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!