AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಅಪ್ರಾಪ್ತ ಬಾಲಕನ ಜತೆ ಲೈಂಗಿಕ ಸಂಬಂಧ, ಪೊಲೀಸರ ಅತಿಥಿಯಾದ ಶಿಕ್ಷಕಿ

ಪುರುಷ ಶಿಕ್ಷಕರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಹಲವು ಪ್ರಕರಣಗಳು ಈ ಹಿಂದೆಯೂ ನಡೆದಿದೆ. ಅಂತಹದೇ ಆಘಾತಕಾರಿ ಘಟನೆಯೊಂದು ಇದೀಗ ನಡೆದಿದ್ದು, ಮಹಿಳಾ ಶಿಕ್ಷಕಿಯೊಬ್ಬರು ತನ್ನ ಕರ್ತವ್ಯವನ್ನೇ ಮರೆತು ಶಾಲೆಯ ಅಪ್ರಾಪ್ತ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌಜರ್ನ್ಯವೆಸಗಿದ್ದಾರೆ. ಲೈಂಗಿಕ ಕಿರುಕುಳದ ಆರೋಪದಡಿ ಶಿಕ್ಷಕಿಯನ್ನು ಬಂಧಿಸಲಾಗಿದ್ದು, ಈ ಆಘಾತಕಾರಿ ಸುದ್ದಿ ಇದೀಗ ವೈರಲ್‌ ಆಗುತ್ತಿದೆ.

Viral: ಅಪ್ರಾಪ್ತ ಬಾಲಕನ ಜತೆ ಲೈಂಗಿಕ ಸಂಬಂಧ, ಪೊಲೀಸರ ಅತಿಥಿಯಾದ ಶಿಕ್ಷಕಿ
ವೈರಲ್​​ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Jul 03, 2024 | 10:13 AM

Share

ಪ್ರತಿಯೊಬ್ಬ ವಿದ್ಯಾರ್ಥಿಗಳ ಜೀವನದಲ್ಲೂ ಶಿಕ್ಷಕರ ಪಾತ್ರ ಅಪಾರವಾದದ್ದು. ಅವರು ನಡೆಯುವ ದಾರಿ ಸಾವಿರಾರು ಮಕ್ಕಳಿಗೆ ದಾರಿದೀಪ. ಹೀಗೆ ತಮ್ಮ ಶಿಷ್ಯರನ್ನು ತಿದ್ದಿ ತೀಡಿ ಅವರಿಗೆ ಉತ್ತಮ ಸಂಸ್ಕಾರ, ವಿದ್ಯೆಯನ್ನು ಧಾರೆಯೆರೆಯುವ ಗುರುಗಳಿಗೆ ದೇವರ ಸ್ಥಾನವನ್ನು ನೀಡಲಾಗಿದೆ. ಆದ್ರೆ ಇಲ್ಲೊಬ್ಬ ಶಿಕ್ಷಕಿ ವೃತ್ತಿ ಮೌಲ್ಯ, ತನ್ನ ಕರ್ತವ್ಯವನ್ನೇ ಮರೆತು ಶಾಲೆಯ ಅಪ್ರಾಪ್ತ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಇದೀಗ ಲೈಂಗಿಕ ಕಿರುಕುಳದ ಆರೋಪದಡಿ ಶಿಕ್ಷಕಿಯನ್ನು ಬಂಧಿಸಲಾಗಿದೆ.

ಈ ಆಘಾತಕಾರಿ ಘಟನೆ ಅಮೇರಿಕಾದ ನ್ಯೂಜೆರ್ಸಿಯಲ್ಲಿ ನಡೆದಿದ್ದು, ಅಪ್ರಾಪ್ತ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಇಲ್ಲಿನ ಫ್ರೀಹೋಲ್ಡ್‌ ಇಂಟರ್‌ ಮೀಡಿಯೇಟ್‌ ಶಾಲೆಯ ಶಿಕ್ಷಕಿ ಅಲಿಸನ್‌ ಹ್ಯಾವ್‌ಮೆನ್‌ (43) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ಅಮೇರಿಕಾದ ನ್ಯೂಯಾರ್ಕ್‌ ನಗರದಲ್ಲಿನ ಪ್ರತಿಷ್ಠಿತ ಶಾಲೆಯೊಂದರಲ್ಲಿ ಇದೇ ರೀತಿಯ ಪ್ರಕರಣವೊಂದು ಬೆಳಕಿಗೆ ಬಂದಿತ್ತು. ಇದೀಗ ನ್ಯೂಜೆರ್ಸಿಯ ಶಾಲೆಯೊಂದರಲ್ಲಿಯೂ ಇಂತಹದೇ ಪ್ರಕರಣ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಈ ಚಿಂಪಾಂಜಿಗೂ ಇನ್‌ಸ್ಟಾಗ್ರಾಮ್‌ ಹುಚ್ಚು, ಇದು ಫೋನ್‌ ನೋಡ್ತಾ ಕೂತ್ರೆ ಏಳೋದೇ ಇಲ್ಲ

ಈ ವರ್ಷದ ಆರಂಭದಲ್ಲಿಯೇ ಅಲಿಸನ್‌ ವಿದ್ಯಾರ್ಥಿಯೊಬ್ಬನಿಗೆ ಲೈಂಗಿಕ ಕಿರುಕುಳವನ್ನು ನೀಡಲು ಪ್ರಾರಂಭಿಸಿದ್ದು, ಈ ವಿಷಯ ಹೊರ ಬೀಳುತ್ತಿದ್ದಂತೆ ಪೊಲೀಸರು ಶಿಕ್ಷಕಿಯ ವಿರುದ್ಧ ಪ್ರಕರಣವನ್ನು ದಾಖಲಿಸಿ, ಆಕೆಯನ್ನು ಬಂಧಿಸಿದ್ದಾರೆ. ಪ್ರಸ್ತುತ ಈ ಶಿಕ್ಷಕಿಯನ್ನು ಹೆಚ್ಚಿನ ವಿಚಾರಣೆಗಾಗಿ ಮಾನ್‌ಮೌತ್‌ ಕೌಂಟಿಯ ಜೈಲಿನಲ್ಲಿ ಇರಿಸಲಾಗಿದೆ ಎಂದು ನ್ಯೂಯಾರ್ಕ್‌ ಪೋಸ್ಟ್‌ ವರದಿ ಮಾಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ