AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ನ್ಯೂಯಾರ್ಕ್​ನಲ್ಲಿ ಮಧ್ಯರಾತ್ರಿ ಅಫ್ಘನ್ ಯುವತಿಗೆ ಸಹಾಯ ಮಾಡಿದ ಡ್ರೈವರ್

Help : ಮಧ್ಯರಾತ್ರಿ ಆಕೆ ತಪ್ಪಾದ ಬಸ್​ ಹತ್ತಿದ್ದಾಳೆ. ಮೊಬೈಲ್​ ಕೂಡ ಜೀವ ಕಳೆದುಕೊಂಡಿದೆ. ಬ್ಯಾಗಿನಲ್ಲಿ ಹಣವಿಲ್ಲ, ಯಾವುದೇ ಕಾರ್ಡ್​ಗಳೂ ಇಲ್ಲ. ಆಗ ಡ್ರೈವರ್​ ಬಳಿ ತನ್ನ ಕಷ್ಟ ತೋಡಿಕೊಂಡಿದ್ದಾಳೆ, ಮುಂದೆ?

Viral: ನ್ಯೂಯಾರ್ಕ್​ನಲ್ಲಿ ಮಧ್ಯರಾತ್ರಿ ಅಫ್ಘನ್ ಯುವತಿಗೆ ಸಹಾಯ ಮಾಡಿದ ಡ್ರೈವರ್
ಪ್ರಾತಿನಿಧಿಕ ಚಿತ್ರ, ಸೌಜನ್ಯ : ಅಂತರ್ಜಾಲ
Follow us
TV9 Web
| Updated By: ಶ್ರೀದೇವಿ ಕಳಸದ

Updated on: Jun 21, 2023 | 10:33 AM

New York : ಪರಿಚಿತರಿಗೆ ಸಹಾಯ ಮಾಡುವುದು ಸಹಜ. ಆದರೆ ಅಪರಿಚಿತರಿಗೆ, ಅದರಲ್ಲೂ ಮಧ್ಯರಾತ್ರಿ, ಮತ್ತದರಲ್ಲೂ ಒಬ್ಬ ಪುರುಷ ಮಹಿಳೆಗೆ? ನ್ಯೂಯಾರ್ಕ್​ ವಿಶ್ವವಿದ್ಯಾಲಯದಲ್ಲಿ ಓದುತ್ತಿರುವ ಶಕುಲಾ ಜದ್ರಾನ್​ ಎಂಬ ಅಫ್ಘಾನಿಸ್ತಾನದ (Afghanistan) ವಿದ್ಯಾರ್ಥಿನಿಯ ಟ್ವೀಟ್​ ಇದೀಗ ವೈರಲ್ ಆಗುತ್ತಿದೆ. ನ್ಯೂಯಾರ್ಕ್​ನಲ್ಲಿ ಮಧ್ಯರಾತ್ರಿ ಆಕೆ ತಪ್ಪಾದ ಬಸ್​ ಹತ್ತಿದಾಗ ಅಪರಿಚಿತನಾದ ಡ್ರೈವರ್ ತನಗೆ ಹೇಗೆ ಸಹಾಯ ಮಾಡಿದ ಎಂಬುದನ್ನು ಆಕೆ ಟ್ವೀಟ್​ ಮೂಲಕ ಹಂಚಿಕೊಂಡಿದ್ದಾಳೆ.

ಮಧ್ಯರಾತ್ರಿ ನ್ಯೂಯಾರ್ಕ್​ನಲ್ಲಿ ಪ್ರಯಾಣಿಸುತ್ತಿದ್ದಾಗ ಆಕೆಯ ಅರಿವಿಗೆ ಬಂದಿದ್ದು ಮೊಬೈಲ್​ನಲ್ಲಿ ಚಾರ್ಜಿಲ್ಲ ಜೊತೆಗೆ ಜೇಬಿನಲ್ಲಿ ಹಣವೂ ಇಲ್ಲ, ಯಾವುದೇ ಥರದ ಕಾರ್ಡ್​ ಕೂಡ ಇಲ್ಲ. ಇದೆಲ್ಲದಕ್ಕಿಂತ ಹೆಚ್ಚಾಗಿ ಆಕೆ ಹತ್ತಿದ್ದು ತಪ್ಪಾದ ಬಸ್​! ಮುಂದೇನು ಮಾಡುವುದು ಎಂದು ಆಕೆ ಕಳವಳಕ್ಕೀಡಾದಳು. ​ಬಸ್​ ಡ್ರೈವರ್ ನೋಯಲ್​ ಬಳಿ ಆಕೆ ತನ್ನ ಸಂಕಷ್ಟವನ್ನು ತೋಡಿಕೊಂಡಳು. ಆಕೆಯನ್ನು ಈ ಒತ್ತಡದಿಂದ ಪಾರು ಮಾಡಲೇಬೇಕೆಂದು ನಿರ್ಧರಿಸಿ ಆಕೆ ವಾಸವಾಗಿದ್ದ ಪ್ರದೇಶದೆಡೆ ಬಸ್​ ತಿರುಗಿಸಿದ.

ಇದನ್ನೂ ಓದಿ : Viral: 34 ವರ್ಷಗಳ ಹಿಂದಿನ ಸಂದೇಶವೊಂದು ಸಮುದ್ರ ದಂಡೆಯ ಮೇಲೆ ಸಿಕ್ಕಾಗ 

ನಂತರ ಮನೆಯನ್ನು ತಲುಪಿದ ಮೇಲೆ ಡ್ರೈವರ್​ಗೆ ಸ್ವಲ್ಪ ಹಣ ಕೊಡಲು ಮುಂದಾದಳು. ಆದರೆ ಆತ ನಿರಾಕರಿಸಿದನು. ಮತ್ತೆ ಆತ ಕೆಲ ದಿನಗಳಲ್ಲೇ ತನ್ನ ವೃತ್ತಿಯಿಂದ ನಿವೃತ್ತನೂ ಆಗುವವನಿದ್ಧಾನೆ ಎಂಬ ವಿಷಯವೂ ಆಕೆಗೆ ತಿಳಿಯಿತು. ಸಾರ್ವಜನಿಕ ಸೇವಾಕ್ಷೇತ್ರದಲ್ಲಿರುವವರು ನಿಮಗೆ ಸಹಾಯ ಮಾಡಿದಾಗ ತಪ್ಪದೇ ಧನ್ಯವಾದ ತಿಳಿಸಿ ಎಂದು ಆಕೆ ನೆಟ್ಟಿಗರಲ್ಲಿ ಮನವಿ ಮಾಡಿಕೊಂಡಿದ್ದಾಳೆ.

ಇದನ್ನೂ ಓದಿ : Viral: ವೃಂದಾವನದ ಹೋಳಿ ಸಂಭ್ರಮದಲ್ಲಿ ಮುಕೇಶ್ ಅಂಬಾನಿ, ಎಲಾನ್​, ಝುಕರ್​ಬರ್ಗ್​?

ದಯಾಮಯಿಯಾದ ಡ್ರೈವರ್​ನನ್ನು ನೆಟ್ಟಿಗರು ಶ್ಲಾಘಿಸುತ್ತಿದ್ದಾರೆ. ನಿಜ, ಸಹಾಯ ಹಸ್ತ ಚಾಚುವಂಥ ಜನ ಯಾವಾಗಲೂ ಎಲ್ಲೆಡೆಯೂ ಇದ್ದೇ ಇರುತ್ತಾರೆ ಎಂದು ಒಬ್ಬರು ಹೇಳಿದ್ದಾರೆ. ಅವನು ನಿಜವಾದ ಮನುಷ್ಯ, ಅಂಥವರು ಈ ಜಗತ್ತಿಗೆ ಬೇಕು ಎಂದು ಮತ್ತೊಬ್ಬರು ಹೇಳಿದ್ದಾರೆ. ಕರುಣೆ ದಯೆವುಳ್ಳ ಈತನಿಗೆ ದೀರ್ಘಾಯಸ್ಸು ದೊರೆಯಲಿ ಎಂದು ಮತ್ತೊಬ್ಬರು ಹಾರೈಸಿದ್ದಾರೆ. ಇದನ್ನು ಓದಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ  

ಭಾರತದ ಯುದ್ಧ ತಯಾರಿ ಕಂಡು ಪತರುಗುಟ್ಟಿದೆ ಪಾಕಿಸ್ತಾನ
ಭಾರತದ ಯುದ್ಧ ತಯಾರಿ ಕಂಡು ಪತರುಗುಟ್ಟಿದೆ ಪಾಕಿಸ್ತಾನ
ಹೇಗಿರಲಿದೆ ಯುದ್ಧದ ಅಣಕು ಕಾರ್ಯಾಚರಣೆ? ಸಾರ್ವಜನಿಕರ ಜವಾಬ್ದಾರಿ ಏನು?
ಹೇಗಿರಲಿದೆ ಯುದ್ಧದ ಅಣಕು ಕಾರ್ಯಾಚರಣೆ? ಸಾರ್ವಜನಿಕರ ಜವಾಬ್ದಾರಿ ಏನು?
ಡ್ರೋನ್ ಪ್ರತಾಪ್ ಸಹಾಯ ಮನೋಭಾವ ಎಂಥದ್ದು ನೋಡಿ; ಒಂದು ಚಪ್ಪಾಳೆ ಬರಲೇಬೇಕು
ಡ್ರೋನ್ ಪ್ರತಾಪ್ ಸಹಾಯ ಮನೋಭಾವ ಎಂಥದ್ದು ನೋಡಿ; ಒಂದು ಚಪ್ಪಾಳೆ ಬರಲೇಬೇಕು
ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು
ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು
ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ
ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ
ದಂಪತಿಗೆ ಮದುವೆಯಾಗಿ ಕೇವಲ ಎರಡು ವರ್ಷವಾಗಿತ್ತು
ದಂಪತಿಗೆ ಮದುವೆಯಾಗಿ ಕೇವಲ ಎರಡು ವರ್ಷವಾಗಿತ್ತು
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?