AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗು ಹುಟ್ಟಿದ ತಕ್ಷಣ ಜೀವಂತ ಸಮಾಧಿ ಮಾಡಿದ ತಾಯಿ, ಮುಂದೇನಾಯ್ತು?

ಮಗುವನ್ನು ಇಷ್ಟಪಡದಿರುವ ತಾಯಿ ತುಂಬಾ ವಿರಳ, 9 ತಿಂಗಳು ತನ್ನ ಹೊಟ್ಟೆಯಲ್ಲಿ ಜೋಪಾನ ಮಾಡಿ ಹೊರಗೆ ಬರುವುದನ್ನೇ ಕಾಯುತ್ತಿರುವ ತಾಯಂದಿರು ಒಂದು ಕಡೆಯಾದರೆ ಮಗುವನ್ನು ಹೆತ್ತ ತಕ್ಷಣ ಮಗುವನ್ನು ಜೀವಂತ ಸಮಾಧಿ ಮಾಡಿದ ತಾಯಿ ಇನ್ನೊಂದು ಕಡೆ.

ಮಗು ಹುಟ್ಟಿದ ತಕ್ಷಣ ಜೀವಂತ ಸಮಾಧಿ ಮಾಡಿದ ತಾಯಿ, ಮುಂದೇನಾಯ್ತು?
ಮಗು
ನಯನಾ ರಾಜೀವ್
|

Updated on: Apr 05, 2024 | 2:20 PM

Share

ಮಗುವನ್ನು ಇಷ್ಟಪಡದಿರುವ ತಾಯಿ ತುಂಬಾ ವಿರಳ, 9 ತಿಂಗಳು ತನ್ನ ಹೊಟ್ಟೆಯಲ್ಲಿ ಜೋಪಾನ ಮಾಡಿ ಹೊರಗೆ ಬರುವುದನ್ನೇ ಕಾಯುತ್ತಿರುವ ತಾಯಂದಿರು ಒಂದು ಕಡೆಯಾದರೆ ಮಗುವನ್ನು ಹೆತ್ತ ತಕ್ಷಣ ಮಗುವನ್ನು ಜೀವಂತ ಸಮಾಧಿ ಮಾಡಿದ ತಾಯಿ ಇನ್ನೊಂದು ಕಡೆ.

ಆದರೆ 6 ಗಂಟೆಗಳ ಕಾಲ ಮಣ್ಣಿನಡಿ ಇದ್ದರೂ ಮಗು ಬದುಕಿಬಂದಿದೆ. ತಕ್ಷಣವೇ ಕುಟುಂಬದ ಅನೇಕರು ವಿಚಾರ ತಿಳಿದು ಮಗುವನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಈ ಘಟನೆ ನಡೆದಿರುವುದು ಉಗಾಂಡದಲ್ಲಿ, 23 ವರ್ಷದ ಮಹಿಳೆ ಗರ್ಭಿಣಿಯಾಗಿದ್ದಳು, ಆಕೆಗೆ ಈಗಾಗಲೇ ಒಂದು ಮಗು ಇತ್ತು, ಆಕೆಗೆ ಇನ್ನೊಂದು ಮಗು ಆಗುವುದು ಇಷ್ಟವಿರಲಿಲ್ಲ. ಹಾಗಾಗಿ ತಾನು ಗರ್ಭಿಣಿ ಎಂದು ಮನೆಯಲ್ಲಿ ಹೇಳಿರಲಿಲ್ಲ. ಒಂದು ದಿನ ಮಧ್ಯರಾತ್ರಿ ಆಕೆಗೆ ಹೆರಿಗೆ ನೋವು ಶುರುವಾಗಿತ್ತು, ಕುಟುಂಬದವರಿಗೆ ಹೇಳದೇ, ವೈದ್ಯರ ಸಹಾಯ ಪಡೆಯದೇ ಮಗುವಿಗೆ ಜನ್ಮ ನೀಡಿದ್ದಾಳೆ. ಬಳಿಕ ಮನೆಯವರಿಗೆ ತಿಳಿಯದಂತೆ ತೋಟದಲ್ಲಿ ಹೂತಿದ್ದಳು.

ಬೆಳಗ್ಗೆ ಮನೆಯವರು ಎದ್ದು ನೋಡಿದಾಗ ತೋಟದಲ್ಲಿ ರಕ್ತದ ಕುರುಹು ಇತ್ತು. ಅಗೆದಾಗ ಮಗು ಕಾಣಿಸಿದೆ. ಇಷ್ಟು ಗಂಟೆಗಳ ಕಾಲ ಮಣ್ಣಿನಡಿ ಹೂತಿದ್ದರೂ ಜೀವಂತವಾಗಿರುವುದನ್ನು ಕಂಡು ಆಶ್ಚರ್ಯಪಟ್ಟರು.

ಮತ್ತಷ್ಟು ಓದಿ: ಚಿಕ್ಕಬಳ್ಳಾಫುರ: ತಂಗಿ ಮೇಲಿನ ಕೋಪಕ್ಕೆ ಆಕೆಯ ಆರು ವರ್ಷದ ಮಗನನ್ನು ಕೊಲೆ ಮಾಡಿ ಹೂತು ಹಾಕಿದ ಅಕ್ಕ

ಮಣ್ಣಿನಡಿ ಹೂತಿದ್ದರಿಂದ ದೇಹದ ಅಲ್ಲಲ್ಲಿ ಗಾಯಗಳಾಗಿವೆ. ಹೊಕ್ಕುಳಬಳ್ಳಿಗೆ ಅಂಟಿಕೊಂಡಿದ್ದವು. ಚರ್ಮವು ನೀಲಿ ಬಣ್ಣಕ್ಕೆ ತಿರುಗಿತ್ತು.

ಕೂಡಲೇ ಮಣ್ಣನ್ನು ಸ್ವಚ್ಛಗೊಳಿಸಿ ಹೊಕ್ಕುಳಬಳ್ಳಿಯನ್ನು ಕತ್ತರಿಸಿ ಮಗುವನ್ನು ಹೊರತೆಗೆದಿದ್ದಾರೆ. ತಕ್ಷಣವೇ ವೈದ್ಯರು ಗಾಯವೆಲ್ಲಾ ಸ್ವಚ್ಛಗೊಳಿಸಿ ಇನ್ಕ್ಯುಬೇಟರ್​ನಲ್ಲಿ ಇರಿಸಿದ್ದಾರೆ. ಹೃದಯ, ಹೊಟ್ಟೆ ಅಥವಾ ಇನ್ಯಾವುದೇ ಅಂಗಗಳಲ್ಲಿ ಯಾವುದೇ ಗಾಯಗಳಾಗಿಲ್ಲ ಎಂಬುದು ತಿಳಿದುಬಂದಿದೆ. ಆರು ದಿನಗಳ ಚಿಕಿತ್ಸೆ ಬಳಿಕ ಡಿಸ್ಚಾರ್ಜ್​ ಮಾಡಲಾಗಿದೆ.

ವರದಿಯನ್ನು ಇಂಟರ್ ನ್ಯಾಷನಲ್ ಮೆಡಿಕಲ್ ಕೇಸ್ ರಿಪೋರ್ಟ್ಸ್ ಜರ್ನಲ್ ನಲ್ಲಿ ಪ್ರಕಟಿಸಲಾಗಿದೆ. ಇದನ್ನು ಪವಾಡ ಎಂದು ಕರೆಯಲಾಯಿತು. ಮಗುವನ್ನು ಈಗ ಅಜ್ಜಿ ನೋಡಿಕೊಳ್ಳುತ್ತಿದ್ದಾರೆ, ಮಗುವಿನ ಹತ್ಯೆಗೆ ಯತ್ನಿಸಿದ ತಾಯಿಯನ್ನು ಬಂಧಿಸಲಾಗಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ