AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗು ಹುಟ್ಟಿದ ತಕ್ಷಣ ಜೀವಂತ ಸಮಾಧಿ ಮಾಡಿದ ತಾಯಿ, ಮುಂದೇನಾಯ್ತು?

ಮಗುವನ್ನು ಇಷ್ಟಪಡದಿರುವ ತಾಯಿ ತುಂಬಾ ವಿರಳ, 9 ತಿಂಗಳು ತನ್ನ ಹೊಟ್ಟೆಯಲ್ಲಿ ಜೋಪಾನ ಮಾಡಿ ಹೊರಗೆ ಬರುವುದನ್ನೇ ಕಾಯುತ್ತಿರುವ ತಾಯಂದಿರು ಒಂದು ಕಡೆಯಾದರೆ ಮಗುವನ್ನು ಹೆತ್ತ ತಕ್ಷಣ ಮಗುವನ್ನು ಜೀವಂತ ಸಮಾಧಿ ಮಾಡಿದ ತಾಯಿ ಇನ್ನೊಂದು ಕಡೆ.

ಮಗು ಹುಟ್ಟಿದ ತಕ್ಷಣ ಜೀವಂತ ಸಮಾಧಿ ಮಾಡಿದ ತಾಯಿ, ಮುಂದೇನಾಯ್ತು?
ಮಗು
ನಯನಾ ರಾಜೀವ್
|

Updated on: Apr 05, 2024 | 2:20 PM

Share

ಮಗುವನ್ನು ಇಷ್ಟಪಡದಿರುವ ತಾಯಿ ತುಂಬಾ ವಿರಳ, 9 ತಿಂಗಳು ತನ್ನ ಹೊಟ್ಟೆಯಲ್ಲಿ ಜೋಪಾನ ಮಾಡಿ ಹೊರಗೆ ಬರುವುದನ್ನೇ ಕಾಯುತ್ತಿರುವ ತಾಯಂದಿರು ಒಂದು ಕಡೆಯಾದರೆ ಮಗುವನ್ನು ಹೆತ್ತ ತಕ್ಷಣ ಮಗುವನ್ನು ಜೀವಂತ ಸಮಾಧಿ ಮಾಡಿದ ತಾಯಿ ಇನ್ನೊಂದು ಕಡೆ.

ಆದರೆ 6 ಗಂಟೆಗಳ ಕಾಲ ಮಣ್ಣಿನಡಿ ಇದ್ದರೂ ಮಗು ಬದುಕಿಬಂದಿದೆ. ತಕ್ಷಣವೇ ಕುಟುಂಬದ ಅನೇಕರು ವಿಚಾರ ತಿಳಿದು ಮಗುವನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಈ ಘಟನೆ ನಡೆದಿರುವುದು ಉಗಾಂಡದಲ್ಲಿ, 23 ವರ್ಷದ ಮಹಿಳೆ ಗರ್ಭಿಣಿಯಾಗಿದ್ದಳು, ಆಕೆಗೆ ಈಗಾಗಲೇ ಒಂದು ಮಗು ಇತ್ತು, ಆಕೆಗೆ ಇನ್ನೊಂದು ಮಗು ಆಗುವುದು ಇಷ್ಟವಿರಲಿಲ್ಲ. ಹಾಗಾಗಿ ತಾನು ಗರ್ಭಿಣಿ ಎಂದು ಮನೆಯಲ್ಲಿ ಹೇಳಿರಲಿಲ್ಲ. ಒಂದು ದಿನ ಮಧ್ಯರಾತ್ರಿ ಆಕೆಗೆ ಹೆರಿಗೆ ನೋವು ಶುರುವಾಗಿತ್ತು, ಕುಟುಂಬದವರಿಗೆ ಹೇಳದೇ, ವೈದ್ಯರ ಸಹಾಯ ಪಡೆಯದೇ ಮಗುವಿಗೆ ಜನ್ಮ ನೀಡಿದ್ದಾಳೆ. ಬಳಿಕ ಮನೆಯವರಿಗೆ ತಿಳಿಯದಂತೆ ತೋಟದಲ್ಲಿ ಹೂತಿದ್ದಳು.

ಬೆಳಗ್ಗೆ ಮನೆಯವರು ಎದ್ದು ನೋಡಿದಾಗ ತೋಟದಲ್ಲಿ ರಕ್ತದ ಕುರುಹು ಇತ್ತು. ಅಗೆದಾಗ ಮಗು ಕಾಣಿಸಿದೆ. ಇಷ್ಟು ಗಂಟೆಗಳ ಕಾಲ ಮಣ್ಣಿನಡಿ ಹೂತಿದ್ದರೂ ಜೀವಂತವಾಗಿರುವುದನ್ನು ಕಂಡು ಆಶ್ಚರ್ಯಪಟ್ಟರು.

ಮತ್ತಷ್ಟು ಓದಿ: ಚಿಕ್ಕಬಳ್ಳಾಫುರ: ತಂಗಿ ಮೇಲಿನ ಕೋಪಕ್ಕೆ ಆಕೆಯ ಆರು ವರ್ಷದ ಮಗನನ್ನು ಕೊಲೆ ಮಾಡಿ ಹೂತು ಹಾಕಿದ ಅಕ್ಕ

ಮಣ್ಣಿನಡಿ ಹೂತಿದ್ದರಿಂದ ದೇಹದ ಅಲ್ಲಲ್ಲಿ ಗಾಯಗಳಾಗಿವೆ. ಹೊಕ್ಕುಳಬಳ್ಳಿಗೆ ಅಂಟಿಕೊಂಡಿದ್ದವು. ಚರ್ಮವು ನೀಲಿ ಬಣ್ಣಕ್ಕೆ ತಿರುಗಿತ್ತು.

ಕೂಡಲೇ ಮಣ್ಣನ್ನು ಸ್ವಚ್ಛಗೊಳಿಸಿ ಹೊಕ್ಕುಳಬಳ್ಳಿಯನ್ನು ಕತ್ತರಿಸಿ ಮಗುವನ್ನು ಹೊರತೆಗೆದಿದ್ದಾರೆ. ತಕ್ಷಣವೇ ವೈದ್ಯರು ಗಾಯವೆಲ್ಲಾ ಸ್ವಚ್ಛಗೊಳಿಸಿ ಇನ್ಕ್ಯುಬೇಟರ್​ನಲ್ಲಿ ಇರಿಸಿದ್ದಾರೆ. ಹೃದಯ, ಹೊಟ್ಟೆ ಅಥವಾ ಇನ್ಯಾವುದೇ ಅಂಗಗಳಲ್ಲಿ ಯಾವುದೇ ಗಾಯಗಳಾಗಿಲ್ಲ ಎಂಬುದು ತಿಳಿದುಬಂದಿದೆ. ಆರು ದಿನಗಳ ಚಿಕಿತ್ಸೆ ಬಳಿಕ ಡಿಸ್ಚಾರ್ಜ್​ ಮಾಡಲಾಗಿದೆ.

ವರದಿಯನ್ನು ಇಂಟರ್ ನ್ಯಾಷನಲ್ ಮೆಡಿಕಲ್ ಕೇಸ್ ರಿಪೋರ್ಟ್ಸ್ ಜರ್ನಲ್ ನಲ್ಲಿ ಪ್ರಕಟಿಸಲಾಗಿದೆ. ಇದನ್ನು ಪವಾಡ ಎಂದು ಕರೆಯಲಾಯಿತು. ಮಗುವನ್ನು ಈಗ ಅಜ್ಜಿ ನೋಡಿಕೊಳ್ಳುತ್ತಿದ್ದಾರೆ, ಮಗುವಿನ ಹತ್ಯೆಗೆ ಯತ್ನಿಸಿದ ತಾಯಿಯನ್ನು ಬಂಧಿಸಲಾಗಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು