AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kawasaki Ninja ZX-4RR: ಇದು ಭಾರತದ ಅತ್ಯಂತ ದುಬಾರಿ ಬೈಕ್; ವಿಶೇಷತೆ ಇಲ್ಲಿ ತಿಳಿದುಕೊಳ್ಳಿ

ಇಂಡಿಯಾ ಕವಾಸಕಿ ಮೋಟಾರ್ (IKM) ಶುಕ್ರವಾರ ತನ್ನ ಸೂಪರ್ ಸ್ಪೋರ್ಟ್ಸ್ ಬೈಕ್ ನಿಂಜಾ ZX-4R ZX-4RR ನ ಹೊಸ ಆವೃತ್ತಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇದರ ಬೆಲೆ 9.10 ಲಕ್ಷ ರೂ. ಇದು ಭಾರತದಲ್ಲಿ ಮಾರಾಟಕ್ಕೆ ನೀಡಲಾಗುವ ಅತ್ಯಂತ ದುಬಾರಿ 400 cc ಮೋಟಾರ್‌ ಬೈಕ್ ಆಗಿದೆ.

Kawasaki Ninja ZX-4RR: ಇದು ಭಾರತದ ಅತ್ಯಂತ ದುಬಾರಿ ಬೈಕ್; ವಿಶೇಷತೆ ಇಲ್ಲಿ ತಿಳಿದುಕೊಳ್ಳಿ
Ninja ZX-4RR
ಅಕ್ಷತಾ ವರ್ಕಾಡಿ
|

Updated on:Jun 02, 2024 | 1:44 PM

Share

ದ್ವಿಚಕ್ರ ವಾಹನ ತಯಾರಕ ಇಂಡಿಯಾ ಕವಾಸಕಿ ಮೋಟಾರ್ (IKM) ಶುಕ್ರವಾರ ತನ್ನ ಸೂಪರ್ ಸ್ಪೋರ್ಟ್ಸ್ ಬೈಕ್ ನಿಂಜಾ ZX-4R ZX-4RR ನ ಹೊಸ ಆವೃತ್ತಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ರೂ 9.10 ಲಕ್ಷ (ಎಕ್ಸ್ ಶೋ ರೂಂ) ಬೆಲೆಯ ಈ ಮಾದರಿಯು ZX4R ಗಿಂತ ರೂ 61,000 ಹೆಚ್ಚು ದುಬಾರಿಯಾಗಿದೆ, ಇದು ರೂ 8.49 ಲಕ್ಷಕ್ಕೆ ಮಾರಾಟವಾಗಿದೆ. ಇದು ಭಾರತದಲ್ಲಿ ಮಾರಾಟಕ್ಕೆ ನೀಡಲಾಗುವ ಅತ್ಯಂತ ದುಬಾರಿ 400 cc ಮೋಟಾರ್‌ ಬೈಕ್ ಆಗಿದೆ.

ZX-4R ಗೆ ಹೋಲಿಸಿದರೆ, 4RR ಮಾದರಿಯು ಹೆಚ್ಚುವರಿ ವೈಶಿಷ್ಟ್ಯಗಳೊಂದಿಗೆ ಮತ್ತು ಹೊಸ ಬಣ್ಣದೊಂದಿಗೆ ಬರುತ್ತದೆ. ವಿನ್ಯಾಸದ ವಿಷಯದಲ್ಲಿ, ಈ ಬೈಕ್ ZX-4R ಅನ್ನು ಹೋಲುತ್ತದೆ. ಆದರೆ ಇದನ್ನು ZX4R ಮೆಟಾಲಿಕ್ ಬ್ಲ್ಯಾಕ್‌ನೊಂದಿಗೆ KRT ಮಾದರಿಯ ಬಣ್ಣದ ಯೋಜನೆಯ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ. ಬೈಕ್‌ನ ಮೇನ್‌ಫ್ರೇಮ್ ಕೂಡ ಒಂದೇ ಆಗಿರುತ್ತದೆ. ಆದರೆ ಸಸ್ಪೆನ್ಷನ್ ಸೆಟಪ್ ವಿಭಿನ್ನವಾಗಿದೆ.

ಇದನ್ನೂ ಓದಿ: ಮುಖೇಶ್ ಅಂಬಾನಿಯ ಕಿರಿಯ ಪುತ್ರನ ಪ್ರೀ ವೆಡ್ಡಿಂಗ್‌ ಪಾರ್ಟಿಯಲ್ಲಿ ರಾಮೇಶ್ವರಂ ಕೆಫೆ ಫುಡ್​

ಈ ಹೊಸ ಕವಾಸಕಿ ನಿಂಜಾ ZX 4RR ಬೈಕ್ ಬ್ಲೂಟೂತ್ ಕನೆಕ್ಟಿವಿಟಿಯೊಂದಿಗೆ 4.3-ಇಂಚಿನ TFT ಡಿಸ್‌ಪ್ಲೇಯನ್ನು ಹೊಂದಿದೆ. ಇದಲ್ಲದೇ ರೇಡಿಯಾಲಜಿ ಅಪ್ಲಿಕೇಶನ್, ಎಲ್ಇಡಿ ಲೈಟ್​, ನಾಲ್ಕು ವಿಭಿನ್ನ ರೈಡಿಂಗ್ ಮೋಡ್ಗಳು, ಎಬಿಎಸ್ ಇತರ ಪ್ರಮುಖ ವೈಶಿಷ್ಟ್ಯಗಳನ್ನು ಹೊಂದಿದೆ. ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಇದು ಹಿಂದಿನ ಅದೇ ಬ್ರೇಕಿಂಗ್ ಸಿಸ್ಟಂ ಅನ್ನು ಉಳಿಸಿಕೊಂಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:38 pm, Sun, 2 June 24

Follow Us
ಬೆಳಗ್ಗೆ 6 ಗಂಟೆಯಿಂದಲೇ ‘ಟಾಕ್ಸಿಕ್’ ಪ್ರದರ್ಶನ ಆರಂಭ; ಜೋರಾಗಿದೆ ಕ್ರೇಜ್
ಬೆಳಗ್ಗೆ 6 ಗಂಟೆಯಿಂದಲೇ ‘ಟಾಕ್ಸಿಕ್’ ಪ್ರದರ್ಶನ ಆರಂಭ; ಜೋರಾಗಿದೆ ಕ್ರೇಜ್
ಬ್ರಿಕ್ಸ್ ಶೃಂಗಸಭೆಗೂ ಮುನ್ನ ಚೀನಾ ಸಚಿವರ ಜೊತೆ ಅಜಿತ್ ದೋವಲ್ ಮಾತುಕತೆ
ಬ್ರಿಕ್ಸ್ ಶೃಂಗಸಭೆಗೂ ಮುನ್ನ ಚೀನಾ ಸಚಿವರ ಜೊತೆ ಅಜಿತ್ ದೋವಲ್ ಮಾತುಕತೆ
ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮತ್ತೊಂದು ಶಾಕ್!
ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮತ್ತೊಂದು ಶಾಕ್!
ದೇಶದಲ್ಲಿ ಹೆಚ್ಚಿದ H1N1 ಭೀತಿ: 'ಆತಂಕ ಬೇಡ' ಎಂದ ಯು.ಟಿ. ಖಾದರ್
ದೇಶದಲ್ಲಿ ಹೆಚ್ಚಿದ H1N1 ಭೀತಿ: 'ಆತಂಕ ಬೇಡ' ಎಂದ ಯು.ಟಿ. ಖಾದರ್
ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ