AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮಲ್ಲಿ ಕೊರೊನಾ ಸೋಂಕಿದೆ; ಹಾಗಾಗಿ ನನ್ನ ಕೈಲಾಸಕ್ಕೆ ನೀವ್ಯಾರೂ ಬರಬೇಡಿ ಎಂದು ಭಾರತೀಯರಿಗೆ ಹೇಳಿದ ನಿತ್ಯಾನಂದ!

ತಾನೊಬ್ಬ ದೇವ ಮಾನವ, ಶಿವನ ಅಪರಾವತಾರ, ತನ್ನಿಂದ ಯಾವ ಚಮತ್ಕಾರ ಬೇಕಾದರೂ ನಡೆಯಬಲ್ಲದು ಎಂದು ಹೇಳಿಕೊಳ್ಳುವ ನಿತ್ಯಾನಂದ ಕೊರೊನಾ ವೈರಾಣುವಿಗೆ ಬೆದರಿದಂತೆ ಕಾಣುತ್ತಿದ್ದು, ಭಾರತೀಯರು ಕೈಲಾಸ ದೇಶಕ್ಕೆ ಬರುವಂತಿಲ್ಲ ಎಂದು ನಿರ್ಬಂಧ ಹೇರಿದ್ದಾನೆ.

ನಿಮ್ಮಲ್ಲಿ ಕೊರೊನಾ ಸೋಂಕಿದೆ; ಹಾಗಾಗಿ ನನ್ನ ಕೈಲಾಸಕ್ಕೆ ನೀವ್ಯಾರೂ ಬರಬೇಡಿ ಎಂದು ಭಾರತೀಯರಿಗೆ ಹೇಳಿದ ನಿತ್ಯಾನಂದ!
ನಿತ್ಯಾನಂದ ಸ್ವಾಮಿ
Follow us
Skanda
|

Updated on: Apr 22, 2021 | 10:44 AM

ಸದಾ ವಿವಾದದ ಸುಳಿಯಲ್ಲೇ ಸುತ್ತಾಡುವ ಸ್ವಯಂಘೋಷಿತ ದೇವ ಮಾನವ, ಧರ್ಮಗುರು, ಕೈಲಾಸ ದೇಶ ಸ್ಥಾಪಕ ನಿತ್ಯಾನಂದ ಸ್ವಾಮಿ ತನ್ನ ದೇಶವನ್ನು ಕೊರೊನಾದಿಂದ ರಕ್ಷಿಸಿಕೊಳ್ಳಲು ಭಾರತೀಯ ಪ್ರವಾಸಿಗರಿಗೆ ಕೈಲಾಸ ಪ್ರವೇಶ ನಿರ್ಬಂಧಿಸಿದ್ದಾನೆ. ತಾನೊಬ್ಬ ದೇವ ಮಾನವ, ಶಿವನ ಅಪರಾವತಾರ, ತನ್ನಿಂದ ಯಾವ ಚಮತ್ಕಾರ ಬೇಕಾದರೂ ನಡೆಯಬಲ್ಲದು ಎಂದು ಹೇಳಿಕೊಳ್ಳುವ ನಿತ್ಯಾನಂದ ಕೊರೊನಾ ವೈರಾಣುವಿಗೆ ಬೆದರಿದಂತೆ ಕಾಣುತ್ತಿದ್ದು ಈತನ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹಾಸ್ಯಾಸ್ಪದ ವಸ್ತುವಾಗಿ ಹರಿದಾಡುತ್ತಿದೆ.

ಕೈಲಾಸ ದೇಶಕ್ಕೆ ಭಾರತೀಯರು ಮಾತ್ರವಲ್ಲದೇ ಬ್ರೆಜಿಲ್, ಯುರೋಪ್ ಹಾಗೂ ಮಲೇಶಿಯಾದಿಂದ ಆಗಮಿಸುವವರಿಗೂ ಪ್ರವೇಶ ನಿರ್ಬಂಧಿಸಲಾಗಿದ್ದು, ಈ ಬಗ್ಗೆ ನಿತ್ಯಾನಂದ ಸ್ವಾಮಿ ವಿಡಿಯೋ ಹೇಳಿಕೆಯನ್ನೂ ಬಿಡುಗಡೆ ಮಾಡಿದ್ದಾನೆ. ಸದ್ಯ ಸ್ವಯಂ ನಿರ್ಮಿತ ರಾಷ್ಟ್ರ ಕೈಲಾಸದಲ್ಲಿ ನೆಲೆಯೂರಿರುವ ಸ್ವಘೋಷಿತ ದೇವ ಮಾನವ ನಿತ್ಯಾನಂದ, ತನ್ನ ಸಂದೇಶಗಳನ್ನು, ಆಲೋಚನೆಗಳನ್ನು ಭಕ್ತಾದಿಗಳಿಗೆ ತಲುಪಿಸಲು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳುತ್ತಿದ್ದು, ಅದು ನೆಟ್ಟಿಗರಿಗೆ ಭರಪೂರ ಮನರಂಜನೆಯನ್ನೂ ಒದಗಿಸುತ್ತಿದೆ.

ವಿವಾದದ ಮೂಲಕವೇ ಪ್ರಚಲಿತಕ್ಕೆ ಬಂದ ನಿತ್ಯಾನಂದ ಮೊದಲಿನಿಂದಲೂ ಅನೇಕ ಆರೋಪಗಳನ್ನು ಎದುರಿಸುತ್ತಿದ್ದು, 2019ರಲ್ಲಿ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಮೇಲೆ ಭಾರತದಿಂದ ಕಣ್ಮರೆಯಾಗಿದ್ದಾನೆ. ನಂತರ ಈಕ್ವೇಡರ್ ಸಮೀಪದ ದ್ವೀಪವೊಂದನ್ನು ತನ್ನ ರಾಷ್ಟ್ರವನ್ನಾಗಿಸಿಕೊಳ್ಳುತ್ತಿರುವುದಾಗಿ ಹೇಳಿದ್ದಾತ ಅದಕ್ಕೆ ಕೈಲಾಸವೆಂದು ನಾಮಕರಣವನ್ನೂ ಮಾಡಿದ್ದ. ಅಷ್ಟೇ ಅಲ್ಲದೇ ಕೈಲಾಸದಲ್ಲಿ ರಿಸರ್ವ್​ ಬ್ಯಾಂಕ್ ಒಂದನ್ನು ಸ್ಥಾಪಿಸಿ ಅಲ್ಲಿಗೆ ಪ್ರತ್ಯೇಕ ಕರೆನ್ಸಿ ಬಿಡುಗಡೆ ಮಾಡುವುದಾಗಿಯೂ ತಿಳಿಸಿದ್ದ.

ಸದ್ಯ ಇಡೀ ವಿಶ್ವವೇ ಕೊರೊನಾ ವೈರಾಣುವಿನ ಹೊಡೆತಕ್ಕೆ ಸಿಲುಕಿ ಬೆಚ್ಚಿಬಿದ್ದಿದ್ದು ಅದರಿಂದ ಪಾರಾಗುವುದಕ್ಕೆ ದಾರಿ ಹುಡುಕುತ್ತಿರುವ ಹೊತ್ತಿನಲ್ಲಿ ನಿತ್ಯಾನಂದ ಇಂಥದ್ದೊಂದು ಹೇಳಿಕೆ ಬಿಡುಗಡೆ ಮಾಡಿದ್ದಾನೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕಾಲೆಳೆದಿರುವ ಕೆಲವರು ಬಹುಶಃ ಈ ಜಗತ್ತಿನಲ್ಲಿ ನಿತ್ಯಾನಂದನಷ್ಟು ಯಶಸ್ವಿಯಾಗಿ ಯಾರೂ ಕೊರೊನಾ ವೈರಾಣುವನ್ನು ಮಣಿಸಿರಲಿಕ್ಕಿಲ್ಲ, ಈ ವಿಚಾರದಲ್ಲಿ ನಿತ್ಯಾನಂದನ ಸಲಹೆ ಕೇಳಿದರೂ ತಪ್ಪಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಎಲ್ಲಿದ್ದಾನೆ Nithyananda Swamiji? ತಲೆಮರೆಸಿಕೊಂಡಿರುವ ನಿತ್ಯಾನಂದ ಸ್ವಾಮಿ ಹುಡುಕುವಲ್ಲಿ ವಿಫಲವಾದ್ರಾ ಅಧಿಕಾರಿಗಳು 

ಹೊಸ ವರ್ಷಾಚರಣೆ ಅಫರ್​! ಶಿವನ ದರ್ಶನ ಮಾಡಿಸುತ್ತೇನೆ; ಕೈಲಾಸ ದೇಶಕ್ಕೆ ಬರುವಂತೆ ಭಕ್ತರಿಗೆ ನಿತ್ಯಾನಂದನ ಆಹ್ವಾನ..

ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?