AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಮದ್ವೆಯಲ್ಲಿ ಮದ್ಯ, ನಾನ್ ವೆಜ್ ಇರಲ್ಲ; ವಿಚಿತ್ರ ಮದುವೆ ಆಮಂತ್ರಣ ಪತ್ರಿಕೆ ವೈರಲ್

ಇಂದಿನ ಕಾಲದಲ್ಲಿ ಅದ್ದೂರಿ ಮದುವೆ ಜೊತೆಗೆ ದುಬಾರಿ ಬೆಲೆಯ ವಿಶಿಷ್ಟ ಆಮಂತ್ರಣ ಪತ್ರಿಕೆಗಳನ್ನು ಕೂಡ ಮಾಡಿಸ್ತಾರೆ. ಕೆಲವು ಮದುವೆ ಆಮಂತ್ರಣ ಪತ್ರಿಕೆಗಳು ವಿಶೇಷತೆಯಿಂದಲೇ ಗಮನ ಸೆಳೆಯುತ್ತದೆ. ಆದರೆ ಇದೀಗ ಈ ಆಮಂತ್ರಣ ಪತ್ರಿಕೆಯಲ್ಲಿ ಬರೆಯಲಾದ ಕೆಲ ಸಾಲುಗಳು ಮದ್ಯ ಹಾಗೂ ನಾನ್ ವೆಜ್ ಪ್ರಿಯರನ್ನು ನಿರಾಶೆಗೊಳಿಸಿದೆ. ಈ ಆಮಂತ್ರಣ ಪತ್ರಿಕೆಯಲ್ಲಿ ಏನಿದೆ ಎನ್ನುವುದಕ್ಕೆ ಈ ಸ್ಟೋರಿ ಓದಿ.

Viral: ಮದ್ವೆಯಲ್ಲಿ ಮದ್ಯ, ನಾನ್ ವೆಜ್ ಇರಲ್ಲ; ವಿಚಿತ್ರ  ಮದುವೆ ಆಮಂತ್ರಣ ಪತ್ರಿಕೆ ವೈರಲ್
ಮದುವೆ ಆಮಂತ್ರಣ ಪತ್ರಿಕೆImage Credit source: Pinterest/ Instagram
ಸಾಯಿನಂದಾ
|

Updated on:Oct 23, 2025 | 6:30 PM

Share

ಪ್ರತಿಯೊಬ್ಬರು ಕೂಡ ತಮ್ಮ ಮದುವೆ (marriage) ವಿಶೇಷವಾಗಿರಬೇಕು ಎಂದುಕೊಳ್ತಾರೆ. ಹೀಗಾಗಿ ಮದುವೆ ಕಾರ್ಡ್ ಯಿಂದ ಹಿಡಿದು ಪ್ರತಿಯೊಂದು ವಿಷ್ಯಕ್ಕೂ ಹೆಚ್ಚು ಗಮನ ಕೊಡ್ತಾರೆ. ನೀವು ಮದುವೆ ಆಮಂತ್ರಣ ಪತ್ರಿಕೆಯನ್ನು ವಿಭಿನ್ನ ಹಾಗೂ ಆಕರ್ಷಕವಾಗಿ ಮಾಡಿಸುವುದನ್ನು ನೋಡಿರುತ್ತೀರಿ. ಆದರೆ ಇದೀಗ ವೈರಲ್ ಆಗಿರುವ ಮದುವೆ ಆಮಂತ್ರಣ ಪತ್ರಿಕೆಯಲ್ಲಿ (marriage invitation card) ಉಲ್ಲೇಖಿಸಲಾಗಿರುವ ಕೆಲ ಸಾಲುಗಳು ಎಲ್ಲರನ್ನು ಹುಬ್ಬೇರಿಸುವಂತೆ ಮಾಡಿದೆ. ಅದರಲ್ಲೂ ನಾನ್ ವೆಜ್‌ ಹಾಗೂ ಮದ್ಯ ಪ್ರಿಯರಿಗೆ ಬೇಸರ ತರಸಿದೆ. ಈ ಮದ್ವೆ ಆಮಂತ್ರಣ ಪತ್ರಿಕೆ ಕೈಗೆ ತಲುಪಿದ ವ್ಯಕ್ತಿಗಳು ಮದುವೆಗೆ ಹೋಗ್ಬೇಕ ಬೇಡ್ವಾ ಎಂದು ಯೋಚನೆ ಮಾಡಿದ್ರೂ ತಪ್ಪಿಲ್ಲ. ಅಂದಹಾಗೆ, ಈ ಮದ್ವೆ ಇನ್ವಿಟೇಶನ್ ಕಾರ್ಡ್‌ನಲ್ಲಿ ಮಾಂಸ ಹಾಗೂ ಮದ್ಯ ಇಲ್ಲ ಎಂದು ಉಲ್ಲೇಖಿಸಲಾಗಿದೆ. ಈ ಮದುವೆ ಕಾರ್ಡ್ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

officialraj sisodiya ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ಪೋಸ್ಟ್ ನಲ್ಲಿ ಮದುವೆ ಆಮಂತ್ರಣ ಪತ್ರಿಕೆಯನ್ನು ನೋಡಬಹುದು. ರಾಜಸ್ಥಾನದ ಸಿಕಾರ್‌ನ ಅಜಿತ್‌ ಸಿಂಗ್ ಶೇಖಾವತ್ ಅವರ ಕುಟುಂಬಕ್ಕೆ ಸೇರಿದ ಈ ಮದುವೆ ಕಾರ್ಡ್‌ ಇದಾಗಿದೆ. ಸಂಗ್ರಾಮ್ ಸಿಂಗ್, ಪೂಜಾ ಜೋಡಿಯೂ ನವೆಂಬರ್ 2, 2025 ರಂದು ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದರೆ, ಮತ್ತೊಂದು ಜೋಡಿಯಾದ ಯುವರಾಜ್ ಸಿಂಗ್, ಹರ್ಷಿತಾ ರಾಥೋಡ್ ಅವರು ನವೆಂಬರ್ 7, 2025 ರಂದು ವಿವಾಹವಾಗುತ್ತಿದ್ದಾರೆ. ಈ ಜೋಡಿಯ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ವರದಕ್ಷಿಣೆ ರಹಿತ ವಿವಾಹದೊಂದಿಗೆ ಮಾಂಸ ಹಾಗೂ ಮದ್ಯ ನಿಷೇಧ ಎಂದು ಬರೆದಿರುವುದನ್ನು ನೋಡಬಹುದು.

ಇದನ್ನೂ ಓದಿ
Image
ಗಂಡ ಕೆಲ್ಸ ಮುಗಿಸಿ ಮನೆಗೆ ಬರುತ್ತಿದ್ದಂತೆ ಜಗಳಕ್ಕಿಳಿದ ಹೆಂಡ್ತಿ
Image
ಹೆಂಡ್ತಿ ಬಾಯ್ ಫ್ರೆಂಡ್ ಜೊತೆಯಲ್ಲಿರುವಾಗಲೇ ಪ್ರತ್ಯಕ್ಷನಾದ ಗಂಡ
Image
ನಡುರಸ್ತೆಯಲ್ಲೇ ಗಂಡನಿಗೆ ಥಳಿಸಿದ ಹೆಂಡ್ತಿ
Image
ಸಮೋಸ ತರಲು ನಿರಾಕರಿಸಿದ ಪತಿ, ಕೋಪದಲ್ಲಿ ಥಳಿಸಿ ಹಲ್ಲೆಗೆ ಯತ್ನಿಸಿದ ಪತ್ನಿ

ವೈರಲ್ ಪೋಸ್ಟ್ ಇಲ್ಲಿದೆ ನೋಡಿ

ಇದನ್ನೂ ಓದಿ: ಟೈಮ್ ಕೊಡದ ಪತಿರಾಯ; ಗಂಡ ಕೆಲ್ಸ ಮುಗಿಸಿ ಮನೆಗೆ ಬರುತ್ತಿದ್ದಂತೆ ಜಗಳಕ್ಕಿಳಿದ ಹೆಂಡ್ತಿ

ಈ ಪೋಸ್ಟ್‌ನ್ನು ಅಧಿಕ ಜನರು ವೀಕ್ಷಿಸಿದ್ದು, ಈ ಆಮಂತ್ರಣ ಪತ್ರಿಕೆಯಲ್ಲಿ ಬರೆದ ಕೆಲವು ಸಾಲುಗಳನ್ನು ಬಹುತೇಕರು ಮೆಚ್ಚಿಕೊಂಡಿದ್ದಾರೆ. ಒಬ್ಬ ಬಳಕೆದಾರ ಪ್ರತಿ ಕುಟುಂಬವು ಇಂತಹ ದಿಟ್ಟ ಹೆಜ್ಜೆಯನ್ನು ಇಡಬೇಕು, ಮದ್ಯ ಹಾಗೂ ಮಾಂಸ ರಹಿತ ಮದುವೆಯನ್ನು ಏರ್ಪಡಿಸಬೇಕು ಎಂದಿದ್ದಾರೆ. ಇನ್ನೊಬ್ಬರು, ಇದು ಸಮಾಜಕ್ಕೆ ಉತ್ತಮ ಸಂದೇಶ ಎಂದು ಹೇಳಿದ್ದಾರೆ. ಮತ್ತೊಬ್ಬರು, ಈ ರೀತಿ ಮಾಡಿದ್ರೆ ಬೇಕಾಬಿಟ್ಟಿ ಖರ್ಚುಗಳಿಗೆ ಕಡಿವಾಣ ಹಾಕಬಹುದು. ಹೆಣ್ಣು ಹೆತ್ತವರು ಸಾಲದಲ್ಲೇ ಮುಳುಗಿ ಏಳುವುದು ತಪ್ಪುತ್ತದೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:24 pm, Thu, 23 October 25

Follow Us
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!