AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಓವರ್ ಟೈಮ್ ಡ್ಯೂಟಿ ಮಾಡಿದ್ರೂ ಸಂಬಳ ಹೆಚ್ಚು ಕೊಡಲ್ಲ; ಮ್ಯಾನೇಜರ್ ವರ್ತನೆಗೆ ಬೇಸತ್ತು ಜಾಬ್ ರಿಸೈನ್ ಮಾಡಿದ ಉದ್ಯೋಗಿ

ಕೆಲ ಉದ್ಯೋಗಿಗಳು ಬಾಸ್ ಕೊಡೋ ಟಾರ್ಚರ್ ಗೆ ಈ ಕೆಲಸವೇ ಬೇಡ ಎನ್ನುವ ಮಟ್ಟಿಗೆ ತಲುಪಿ ಬಿಡುತ್ತಾರೆ. ಈ ಉದ್ಯೋಗಿಯದ್ದು ಅದೇ ಪಾಡು. ಯುವಕನೊಬ್ಬ ಓವರ್ ಟೈಮ್ ಡ್ಯೂಟಿ ಮಾಡಿದ್ರೂ ಸಂಬಳವಂತೂ ಹೆಚ್ಚು ಕೊಡಲ್ಲ ಎನ್ನುವ ಕಾರಣಕ್ಕೆ ರಾಜೀನಾಮೆ ನೀಡಿದ್ದಾನೆ. ಯುವಕ ಈ ಬಗ್ಗೆ ಮಾಡಿದ ಪೋಸ್ಟ್ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Viral: ಓವರ್ ಟೈಮ್ ಡ್ಯೂಟಿ ಮಾಡಿದ್ರೂ ಸಂಬಳ ಹೆಚ್ಚು ಕೊಡಲ್ಲ; ಮ್ಯಾನೇಜರ್ ವರ್ತನೆಗೆ ಬೇಸತ್ತು ಜಾಬ್ ರಿಸೈನ್ ಮಾಡಿದ ಉದ್ಯೋಗಿ
ಸಾಂದರ್ಭಿಕ ಚಿತ್ರImage Credit source: Getty Images
ಸಾಯಿನಂದಾ
|

Updated on:Jul 08, 2026 | 6:48 PM

Share

ಕೈಯಲ್ಲಿ ಒಂದು ಉದ್ಯೋಗವಿದ್ರೆ (Job) ಮರ್ಯಾದೆ. ಕೆಲವು ಸಲ ಈ ಮ್ಯಾನೇಜರ್  ಉದ್ಯೋಗಿಗಳ ಮೇಲೆ ಹೆಚ್ಚು ಒತ್ತಡ ಹಾಕೋದಿದೆ. ಆದರೆ ಮ್ಯಾನೇಜರ್‌ ವರ್ತನೆಯೇ ಮಿತಿ ಮೀರಿ ಹೋದ್ರೆ ಪರಿಸ್ಥಿತಿ ಹೇಗಿರಬೇಡ. ಹೌದು ಆಫೀಸ್ ಟೈಮಿಂಗ್ಸ್ ಮೀರಿ ವೇತನವಿಲ್ಲದೆ ಹೆಚ್ಚುವರಿ ಸಮಯ ಕೆಲಸ ಮಾಡಲು ಹೇಳಿದ್ದಕ್ಕೆ ಉದ್ಯೋಗಿಯೊಬ್ಬ ಜಾಬ್ ರಿಸೈನ್ (job resign) ಮಾಡಿದ್ದಾನೆ. ಈ ವ್ಯಕ್ತಿ ಮಾಡಿದ ರೆಡ್ಡಿಟ್ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಚರ್ಚೆಗೆ ನಾಂದಿ ಹಾಡಿದೆ.

ಆರ್/ ಇಂಡಿಯನ್ ವರ್ಕ್ ಪ್ಲೇಸ್ (r/Indian Workplace) ಹೆಸರಿನ ರೆಡ್ಡಿಟ್ ಖಾತೆಯಲ್ಲಿ ವ್ಯಕ್ತಿಯೊಬ್ಬ ತನ್ನ ವೃತ್ತಿ ಜೀವನದ ಬಗ್ಗೆ ತೆಗೆದುಕೊಂಡ ನಿರ್ಧಾರದ ಬಗ್ಗೆ ಪೋಸ್ಟ್ ನಲ್ಲಿ ತಿಳಿಸಿದ್ದಾನೆ. ನಾನು ನನ್ನ ಮ್ಯಾನೇಜರ್ ನ್ನು ದ್ವೇಷಿಸುತ್ತೇನೆ ಎಂಬ ಶೀರ್ಷಿಕೆ ನೀಡಿ ತನ್ನ ವೈಯುಕ್ತಿಕ ಅನುಭವ ಹಂಚಿಕೊಂಡಿದ್ದಾನೆ.

ವೈರಲ್ ಪೋಸ್ಟ್ ಇಲ್ಲಿದೆ

I hate my manager by u/watevershit in IndianWorkplace

ನನ್ನ ಕೆಲಸದ ಸಮಯ ಬೆಳಿಗ್ಗೆ 9:00 ರಿಂದ ಸಂಜೆ 6:30 ಗಂಟೆವರೆಗೆ. ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೆ. ಆದರೆ ಮ್ಯಾನೇಜರ್ ನನ್ನ ಶಿಫ್ಟ್ ಅನ್ನು ಹೆಚ್ಚುವರಿಯಾಗಿ ಒಂದು ಗಂಟೆ ವಿಸ್ತರಿಸಲು ಹೇಳಿದರು. ನಾನು ಅದಕ್ಕೆ ತಲೆ ಅಲ್ಲಾಡಿಸಿದೆ. ಹೀಗಾಗಿ ಕಳೆದ ವಾರ ನಾನು ರಾತ್ರಿ 8:00 ಗಂಟೆಗೆ ಆಫೀಸಿನಿಂದ ಹೊರಟೆ. ಇದೇ ವೇಳೆಗೆ ಮ್ಯಾನೇಜರ್ ನಿಂದ ನನಗೆ ಮೆಸೇಜ್ ಬಂತು. ರಾತ್ರಿಯೊಳಗೆ ಬಾಕಿ ಇರುವ ದಾಖಲೆಗಳನ್ನು ಕಳುಹಿಸುವಂತೆ ಹೇಳಿದರು. ಅದಕ್ಕೆ ನಾನು ಸೋಮವಾರ ಕೆಲಸವನ್ನು ಪೂರ್ಣಗೊಳಿಸುವುದಾಗಿ ತಿಳಿಸಿದೆ. ಆದರೆ ಅವರು ಶನಿವಾರ ಬೆಳಗ್ಗೆ ಕಳುಹಿಸುವಂತೆ ಒತ್ತಾಯಿಸಿದರು. ನನ್ನ ಪರಿಸ್ಥಿತಿಯನ್ನು ವಿವರಿಸುತ್ತಾ ನನ್ನ ಬಳಿ ಲ್ಯಾಪ್‌ಟಾಪ್ ಇಲ್ಲ ಎಂದು ಹೇಳಿದೆ.

ಆದರೆ ಮ್ಯಾನೇಜರ್ ಮಾತ್ರ ಪದೇ ಪದೇ ಕಾಲ್ ಮಾಡುತ್ತಿದ್ದರು. ನನಗೆ ಏಕೆ ಕರೆ ಮಾಡುತ್ತಿದ್ದಾರೆಂದು ನನಗೆ ತಿಳಿದಿಲ್ಲ. ನಾನು ನನ್ನ ಫೋನ್ ಅನ್ನು ಏರ್‌ಪ್ಲೇನ್ ಮೋಡ್‌ನಲ್ಲಿ ಇರಿಸಿದೆ. ಇದರ ಬಗ್ಗೆ ಏನು ಮಾಡಬೇಕೆಂದು ನನಗೆ ತಿಳಿದಿಲ್ಲ. ನಾನು ನನ್ನ ಕೆಲಸವನ್ನು ಕಳೆದುಕೊಳ್ಳುತ್ತೇನೆ ಎಂದು ನಾನು ಯೋಚಿಸುತ್ತಿದ್ದೇನೆ. ಅವರು ನನಗೆ ಫ್ರೀ ಟೈಮ್ ನೀಡದೆ ರೋಬೋಟ್‌ನಂತೆ ಕೆಲಸ ಮಾಡಬೇಕೆಂದು ನಿರೀಕ್ಷಿಸುತ್ತಿದ್ದಾರೆ ಎಂದು ಮ್ಯಾನೇಜರ್ ನಡವಳಿಕೆಯನ್ನು ಟೀಕಿಸಿದ್ದಾನೆ.

ಇದನ್ನೂ ಓದಿ: ಸಂಬಳ ಹೆಚ್ಚಳಕ್ಕಾಗಿ ಕೆಲಸ ಬದಲಾವಣೆ; ಕೆಲಸಕ್ಕೆ ಸೇರಿದ ಮೂರೇ ತಿಂಗಳಿಗೆ ಜಾಬ್‌ ಕಳೆದುಕೊಂಡ ಉದ್ಯೋಗಿ

ಈ ರೆಡ್ಡಿಟ್ ಪೋಸ್ಟ್ ಗೆ ನೆಟ್ಟಿಗರು ಪ್ರತಿಕ್ರಿಯೆ ನೀಡಿದ್ದು, ಒಬ್ಬ ಬಳಕೆದಾರ ಕೆಲಸ ಬಿಟ್ಟದ್ದು ಒಳ್ಳೆಯದೇ ಆಯ್ತು ಎಂದಿದ್ದಾರೆ. ಮತ್ತೊಬ್ಬರು, ಇಂತಹ ಮ್ಯಾನೇಜರ್ ಗೆ ಉದ್ಯೋಗಿಗಳಿಗೂ ಪರ್ಸನಲ್ ಲೈಫ್ ಇದೆ ಎಂದು ತಿಳಿದಿರುವುದಿಲ್ಲ ಎಂದಿದ್ದಾರೆ. ಇನ್ನೊಬ್ಬರು, ದುಡಿಮೆ ಬೇಕು ನಿಜ, ಆದರೆ ವೈಯುಕ್ತಿಕ ನೆಮ್ಮದಿ ಹಾಳಾಗದಿರಲಿ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:46 pm, Wed, 8 July 26

Follow Us
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು