AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ಯಾದಾನ ನಿರಾಕರಿಸಿದೆ ಎಂದ ವಧು, ಸಂಪೂರ್ಣ ಬೆಂಬಲ ಸೂಚಿಸಿದ ನೆಟ್ಟಿಗರು

Kanyadan : ‘ಒಂದು ಮನೆಯಿಂದ ಇನ್ನೊಂದು ಮನೆಗೆ ಹೆಣ್ಣುಮಕ್ಕಳನ್ನು ವರ್ಗಾಯಿಸುವಂತಿಲ್ಲ. ಹಾಗಾಗಿ ನಾನು ನನ್ನ ಮದುವೆಯಲ್ಲಿ ಕನ್ಯಾದಾನ ಪ್ರಕ್ರಿಯೆಯನ್ನು ನಿರಾಕರಿಸಿದೆ. ನನ್ನ ತಂದೆತಾಯಿ ಕೂಡ ಇದೆಲ್ಲವನ್ನು ನಿರಾಕರಿಸಿದರು.’

ಕನ್ಯಾದಾನ ನಿರಾಕರಿಸಿದೆ ಎಂದ ವಧು, ಸಂಪೂರ್ಣ ಬೆಂಬಲ ಸೂಚಿಸಿದ ನೆಟ್ಟಿಗರು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಶ್ರೀದೇವಿ ಕಳಸದ

Updated on: Dec 08, 2022 | 5:35 PM

Viral : ಭಾರತೀಯ ವಿವಾಹ ಪದ್ಧತಿಯಲ್ಲಿ ಪ್ರತೀ ಹಂತಗಳೂ ನಿರ್ದಿಷ್ಟವಾದ ಅರ್ಥಗಳಿಂದ ಕೂಡಿವೆ. ಇವುಗಳಲ್ಲಿ ಕನ್ಯಾದಾನ ಎನ್ನುವುದು ಮಹತ್ತರ ಪಾತ್ರ ವಹಿಸುತ್ತದೆ. ಆದರೆ ಅನಾದಿಕಾಲದಲ್ಲಿ ಮಾಡಿಟ್ಟ ಈ ಪದ್ಧತಿಗಳು ಬದಲಾದ ಕಾಲಘಟ್ಟದಲ್ಲಿ ಅರ್ಥಹೀನವೆನ್ನಿಸುತ್ತಿವೆ. ಹೆಣ್ಣಿನ ಅಸ್ತಿತ್ವವನ್ನು ಅವಮಾನಿಸುವಂತಿವೆ ಎಂದು ಆಧುನಿಕ ಹೆಣ್ಣುಮಕ್ಕಳು ಇಂಥ ಪದ್ಧತಿಗಳನ್ನು ನಿರ್ಭಿಡೆಯಿಂದ ನಿರಾಕರಿಸಲು ಆರಂಭಿಸಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ಇದೀಗ ವೈರಲ್ ಆಗಿರುವ ಈ ಪೋಸ್ಟ್​. ತನ್ನ ಮದುವೆಯಲ್ಲಿ ಕನ್ಯಾದಾನವನ್ನು ಹೇಗೆ ನಿರಾಕರಿಸಿದೆ ಎಂಬುದನ್ನು ವಧುವೊಬ್ಬಳು ಟ್ವೀಟ್ ಮಾಡಿದ್ದಾಳೆ. ಇದಕ್ಕೆ ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ ನೆಟ್ಟಿಗರು.

@keepitrustic ಎನ್ನುವ ಖಾತೆಯಲ್ಲಿ ಈ ಟ್ವೀಟ್​ ಇದೆ. ತನ್ನ ಮದುವೆಯ ಸಂದರ್ಭದಲ್ಲಿ ತಾನು ಕನ್ಯಾದಾನವನ್ನು ಹೇಗೆ ನಿರಾಕರಿಸಿದೆ ಎನ್ನುವ ಕುರಿತು ಈಕೆ ಚರ್ಚಿಸಿದ್ಧಾಳೆ. ‘ನನ್ನ ಮದುವೆಯಲ್ಲಿ ನಾನು ಕನ್ಯಾದಾನವನ್ನು ನಿರಾಕರಿಸಿದೆ. ಒಂದು ಮನೆಯಿಂದ ಇನ್ನೊಂದು ಮನೆಗೆ ಹೆಣ್ಣನ್ನು ವರ್ಗಾವಣೆ ಮಾಡುವ ಈ ಪದ್ಧತಿಯು ನನಗೆ ಇಷ್ಟವಿಲ್ಲ. ನನಗಷ್ಟೇ ಅಲ್ಲ, ನನ್ನ ತಂದೆತಾಯಿಯೂ ಈ ಪದ್ಧತಿಯನ್ನು ನಿರಾಕರಿಸಿದರು’ ಎಂದು ಟ್ವೀಟ್ ಮಾಡಿದ್ಧಾರೆ ಈಕೆ.

ಇದನ್ನೂ ಓದಿ : ಮಿಸ್​ ಅರ್ಜೆಂಟೀನಾ, ಮಿಸ್ ಪ್ಯೂರ್ಟೋರಿಕೋ ಇದೀಗ ವಿವಾಹ ಬಂಧನದಲ್ಲಿ

ಕನ್ಯಾದಾನ ಪ್ರಕ್ರಿಯೆಯು ಹೆಣ್ಣನ್ನು ಸರಕಿನಂತೆ ಕಾಣಲು ಸೂಚಿಸುತ್ತದೆ. ಹಾಗಾಗಿ ಇದು ಸಮ್ಮತವಲ್ಲ ಎಂದು ಬಹುತೇಕ ನೆಟ್ಟಿಗರು ಹೇಳಿದ್ದಾರೆ. ಉಳಿದ ಪದ್ಧತಿಗಳನ್ನು ಪಾಲಿಸಿದಿರಾ ಎಂದು ಒಬ್ಬರು ಕೇಳಿದ್ದಾರೆ. ಇಲ್ಲ ಸಿಂಧೂರ ಮತ್ತು ಸಪ್ತಪದಿಯನ್ನು ಮಾತ್ರ. ಪಂಡಿತರು ಉಳಿದುದನ್ನು ಪಾಲಿಸಲು ಒತ್ತಾಯಿಸಿದರು ನನ್ನ ಅಪ್ಪ ನಿರಾಕರಿಸಿದರು ಎಂದಿದ್ದಾಳೆ ಈ ಹೊಸ ಮದುವಣಗಿತ್ತಿ. ನಿಮಗೆ ಪದ್ಧತಿಗಳಲ್ಲಿ ನಂಬಿಕೆ ಇಲ್ಲದಿದ್ದರೆ ರಿಜಿಸ್ಟರ್ ಮದುವೆ ಆಗಬಹುದಿತ್ತಲ್ಲವೆ? ಎಂದು ಕೇಳಿದ್ದಾರೆ ಒಬ್ಬರು. ಅದಕ್ಕೆ ಪ್ರತಿಯಾಗಿ ಒಬ್ಬರು ಅವರ ಮದುವೆ ಅವರದೇ ನಿಯಮ ಎಂದಿದ್ದಾರೆ. ‘ನಾನಂತೂ ಈಗಲೇ ನಿರ್ಧರಿಸಿದ್ದೀನಿ ನನ್ನ ಮದುವೆಯಲ್ಲಿ ಕನ್ಯಾದಾನ ಇರುವುದೇ ಇಲ್ಲ’ ಎಂದು ಒಬ್ಬರು ಹೇಳಿದ್ದಾರೆ.

ಎಲ್ಲರೂ ಹೊಸ ಮದುವಣಗಿತ್ತಿಯನ್ನು ಈ ನಿರ್ಧಾರಕ್ಕೆ ಅಭಿನಂದಿಸಿದ್ಧಾರೆ.

ನೀವೇನಂತೀರಿ ಈ ವಿಷಯವಾಗಿ?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​