AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಹಸುವಿನ ಗುದನಾಳದೊಳಗೆ 2.5 ಅಡಿ ಉದ್ದದ ಕೋಲು ತುರುಕಿ ವಿಕೃತಿ; ಪಶು ವೈದ್ಯರಿಂದ ರಕ್ಷಣೆ

ಉತ್ತರಪ್ರದೇಶದ ನೋಯ್ಡಾದಲ್ಲಿ ಬೀದಿ ಹಸುವಿನ ಗುದನಾಳದೊಳಗೆ 2.5 ಅಡಿ ಉದ್ದದ ಕೋಲು ಪತ್ತೆಯಾಗಿದೆ. ನಂದಿ ಸೇವಾ ಟ್ರಸ್ಟ್ ಹಸುವಿಗೆ ಚಿಕಿತ್ಸೆ ನೀಡಿದ್ದು, ಕೋಲನ್ನು ಹೊರ ತೆಗೆಯಲಾಗಿದೆ. ಪ್ರಾಣಿ ಹಿಂಸೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಈ ಅಮಾನವೀಯ ಕೃತ್ಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಚರ್ಚೆಗೆ ಗ್ರಾಸವಾಗಿದೆ.

Video: ಹಸುವಿನ ಗುದನಾಳದೊಳಗೆ 2.5 ಅಡಿ ಉದ್ದದ ಕೋಲು ತುರುಕಿ ವಿಕೃತಿ; ಪಶು ವೈದ್ಯರಿಂದ ರಕ್ಷಣೆ
ಅಕ್ಷತಾ ವರ್ಕಾಡಿ
|

Updated on:Nov 22, 2024 | 10:40 AM

Share

ಉತ್ತರಪ್ರದೇಶ: ಬೀದಿ ಹಸುವಿನ ಗುದನಾಳದೊಳಗೆ 2.5 ಅಡಿ ಉದ್ದದ ಕೋಲು ತುರುಕಿ ವಿಕೃತಿ ಮರೆದಿರುವ ಘಟನೆ ಉತ್ತರಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ರಸ್ತೆಬದಿ ಅನಾರೋಗ್ಯದಿಂದ ಬಳಲುತ್ತಿದ್ದ ಹಸುವಿನ ರಕ್ಷಣೆಗೆ ನಂದಿ ಸೇವಾ ಟ್ರಸ್ಟ್‌ ಧಾವಿಸಿದ್ದು, ಈ ವೇಳೆ ಪಶು ವೈದ್ಯರು ಪರೀಕ್ಷಿಸಿದಾಗ ಅದರ ಹೊಟ್ಟೆಯೊಳಗೆ ಕೋಲು ಇರುವುದು ಪತ್ತೆಯಾಗಿದೆ. ಸದ್ಯ ಕೋಲನ್ನು ಹೊರ ತೆಗೆಯಲಾಗಿದ್ದು, ಹಸುವಿಗೆ ಹೆಚ್ಚಿನ ಚಿಕಿತ್ಸೆ ನೀಡಲಾಗಿದೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗುತ್ತಿದೆ.

ವರದಿಗಳ ಪ್ರಕಾರ, ಅಸ್ವಸ್ಥಗೊಂಡಿದ್ದ ಹಸುವನ್ನು ನಂದಿ ಸೇವಾ ಟ್ರಸ್ಟ್‌ ಅವರು ಆಂಬ್ಯುಲೆನ್ಸ್‌ನಲ್ಲಿ ಸೆಕ್ಟರ್ 3 ಪಟ್ವಾರಿಯಲ್ಲಿರುವ ಆಸ್ಪತ್ರೆಗೆ ಸಾಗಿಸಿದ್ದರು. ವೈದ್ಯರು ವಿವಿಧ ಪರೀಕ್ಷೆಗಳನ್ನು ನಡೆಸಿದ್ದು, ಬಳಿಕ ಹಸುವಿನ ಗುದನಾಳದೊಳಗೆ ಕೋಲು ತುರುಕಿರುವುದು ಬೆಳಕಿಗೆ ಬಂದಿದೆ. 2.5 ಅಡಿ ಉದ್ದದ ಮರದ ಕೋಲು ಹಸುವಿನ ಗುದನಾಳದೊಳಗೆ ಸಿಲುಕಿಕೊಂಡಿರುವುದನ್ನು ಪಶುವೈದ್ಯರು ಪತ್ತೆ ಹಚ್ಚಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಲೇ ಕುಸಿದು ಬಿದ್ದು ಪ್ರಾಣ ಬಿಟ್ಟ ವ್ಯಕ್ತಿ

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಪಶುವೈದ್ಯರು ಹಸುವಿನ ಒಳಗಿದ್ದ ಕೋಲನ್ನು ತೆಗೆಯುತ್ತಿರುವುದು ಕಂಡು ಬರುತ್ತಿದೆ. ಸದ್ಯ ವಿಕೃತಿ ಮರೆದವರ ವಿರುದ್ಧ ಪೋಲೀಸ್ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಬಂಧನದ ವರದಿಗಳಿಲ್ಲ. ಈ ಸಂಬಂಧ ಇಕೋಟೆಕ್-3 ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:39 am, Fri, 22 November 24

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!