AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಹಸುವಿನ ಗುದನಾಳದೊಳಗೆ 2.5 ಅಡಿ ಉದ್ದದ ಕೋಲು ತುರುಕಿ ವಿಕೃತಿ; ಪಶು ವೈದ್ಯರಿಂದ ರಕ್ಷಣೆ

ಉತ್ತರಪ್ರದೇಶದ ನೋಯ್ಡಾದಲ್ಲಿ ಬೀದಿ ಹಸುವಿನ ಗುದನಾಳದೊಳಗೆ 2.5 ಅಡಿ ಉದ್ದದ ಕೋಲು ಪತ್ತೆಯಾಗಿದೆ. ನಂದಿ ಸೇವಾ ಟ್ರಸ್ಟ್ ಹಸುವಿಗೆ ಚಿಕಿತ್ಸೆ ನೀಡಿದ್ದು, ಕೋಲನ್ನು ಹೊರ ತೆಗೆಯಲಾಗಿದೆ. ಪ್ರಾಣಿ ಹಿಂಸೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಈ ಅಮಾನವೀಯ ಕೃತ್ಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಚರ್ಚೆಗೆ ಗ್ರಾಸವಾಗಿದೆ.

Video: ಹಸುವಿನ ಗುದನಾಳದೊಳಗೆ 2.5 ಅಡಿ ಉದ್ದದ ಕೋಲು ತುರುಕಿ ವಿಕೃತಿ; ಪಶು ವೈದ್ಯರಿಂದ ರಕ್ಷಣೆ
ಅಕ್ಷತಾ ವರ್ಕಾಡಿ
|

Updated on:Nov 22, 2024 | 10:40 AM

Share

ಉತ್ತರಪ್ರದೇಶ: ಬೀದಿ ಹಸುವಿನ ಗುದನಾಳದೊಳಗೆ 2.5 ಅಡಿ ಉದ್ದದ ಕೋಲು ತುರುಕಿ ವಿಕೃತಿ ಮರೆದಿರುವ ಘಟನೆ ಉತ್ತರಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ರಸ್ತೆಬದಿ ಅನಾರೋಗ್ಯದಿಂದ ಬಳಲುತ್ತಿದ್ದ ಹಸುವಿನ ರಕ್ಷಣೆಗೆ ನಂದಿ ಸೇವಾ ಟ್ರಸ್ಟ್‌ ಧಾವಿಸಿದ್ದು, ಈ ವೇಳೆ ಪಶು ವೈದ್ಯರು ಪರೀಕ್ಷಿಸಿದಾಗ ಅದರ ಹೊಟ್ಟೆಯೊಳಗೆ ಕೋಲು ಇರುವುದು ಪತ್ತೆಯಾಗಿದೆ. ಸದ್ಯ ಕೋಲನ್ನು ಹೊರ ತೆಗೆಯಲಾಗಿದ್ದು, ಹಸುವಿಗೆ ಹೆಚ್ಚಿನ ಚಿಕಿತ್ಸೆ ನೀಡಲಾಗಿದೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗುತ್ತಿದೆ.

ವರದಿಗಳ ಪ್ರಕಾರ, ಅಸ್ವಸ್ಥಗೊಂಡಿದ್ದ ಹಸುವನ್ನು ನಂದಿ ಸೇವಾ ಟ್ರಸ್ಟ್‌ ಅವರು ಆಂಬ್ಯುಲೆನ್ಸ್‌ನಲ್ಲಿ ಸೆಕ್ಟರ್ 3 ಪಟ್ವಾರಿಯಲ್ಲಿರುವ ಆಸ್ಪತ್ರೆಗೆ ಸಾಗಿಸಿದ್ದರು. ವೈದ್ಯರು ವಿವಿಧ ಪರೀಕ್ಷೆಗಳನ್ನು ನಡೆಸಿದ್ದು, ಬಳಿಕ ಹಸುವಿನ ಗುದನಾಳದೊಳಗೆ ಕೋಲು ತುರುಕಿರುವುದು ಬೆಳಕಿಗೆ ಬಂದಿದೆ. 2.5 ಅಡಿ ಉದ್ದದ ಮರದ ಕೋಲು ಹಸುವಿನ ಗುದನಾಳದೊಳಗೆ ಸಿಲುಕಿಕೊಂಡಿರುವುದನ್ನು ಪಶುವೈದ್ಯರು ಪತ್ತೆ ಹಚ್ಚಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಲೇ ಕುಸಿದು ಬಿದ್ದು ಪ್ರಾಣ ಬಿಟ್ಟ ವ್ಯಕ್ತಿ

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಪಶುವೈದ್ಯರು ಹಸುವಿನ ಒಳಗಿದ್ದ ಕೋಲನ್ನು ತೆಗೆಯುತ್ತಿರುವುದು ಕಂಡು ಬರುತ್ತಿದೆ. ಸದ್ಯ ವಿಕೃತಿ ಮರೆದವರ ವಿರುದ್ಧ ಪೋಲೀಸ್ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಬಂಧನದ ವರದಿಗಳಿಲ್ಲ. ಈ ಸಂಬಂಧ ಇಕೋಟೆಕ್-3 ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:39 am, Fri, 22 November 24

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು