AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿರತೆ ಜತೆ ವಾಕಿಂಗ್​ ಹೋದ ತೆಲಂಗಾಣ ರಾಜಕಾರಣಿ! ವಿಡಿಯೋ ವೈರಲ್

ತೆಲಂಗಾಣದ ನಾಗಾರ್ಜುನ ಸಾಗರ್​ ಉಪಚುನಾವಣೆಯಲ್ಲಿ ಟಿಆರ್​​ಎಸ್​ ಅಭ್ಯರ್ಥಿಯಾಗಿ ನೋಮುಲಾ ಭಗತ್ ಕುಮಾರ್ ಸ್ಪರ್ಧಿಸಿದ್ದಾರೆ. ಇವರು ಚಿರತೆ ಜತೆ ನಡೆದು ಹೋಗುತ್ತಿರುವ ವಿಡಿಯೋ ಒಂದು ಈಗ ವೈರಲ್​ ಆಗಿದೆ.

ಚಿರತೆ ಜತೆ ವಾಕಿಂಗ್​ ಹೋದ ತೆಲಂಗಾಣ ರಾಜಕಾರಣಿ! ವಿಡಿಯೋ ವೈರಲ್
ಚಿರತೆ ಜತೆ ವಾಕಿಂಗ್​ ಹೋದ ನೋಮುಲಾ ಭಗತ್
ರಾಜೇಶ್ ದುಗ್ಗುಮನೆ
| Updated By: ganapathi bhat|

Updated on: Apr 03, 2021 | 7:25 PM

Share

ಶ್ವಾನಗಳನ್ನು ವಾಕಿಂಗ್​ಗೆ ಕರೆದುಕೊಂಡು ಹೋಗೋದು ಕಾಮನ್​. ಆದರೆ, ಎಲ್ಲಾದರೂ ಚಿರತೆಯನ್ನು ಕರೆದುಕೊಂಡು ವಾಕಿಂಗ್​ ಹೋಗಿದ್ದನ್ನು ನೀವು ನೋಡಿದ್ದೀರಾ? ತೆಲಂಗಾಣ ಟಿಆರ್​ಎಸ್ ನಾಯಕನೋರ್ವ ಚಿರತೆ ಜತೆ ನಡೆದು ಹೋಗಿರುವ ವಿಡಿಯೋ ಒಂದು ಈಗ ಸಾಕಷ್ಟು ವೈರಲ್​ ಆಗಿದೆ.

ತೆಲಂಗಾಣದ ನಾಗಾರ್ಜುನ ಸಾಗರ್​ ಉಪಚುನಾವಣೆಯಲ್ಲಿ ಟಿಆರ್​​ಎಸ್​ ಅಭ್ಯರ್ಥಿಯಾಗಿ ನೋಮುಲಾ ಭಗತ್ ಕುಮಾರ್ ಸ್ಪರ್ಧಿಸಿದ್ದಾರೆ. ಇವರು ಚಿರತೆ ಜತೆ ನಡೆದು ಹೋಗುತ್ತಿರುವ ವಿಡಿಯೋ ಒಂದು ಈಗ ವೈರಲ್​ ಆಗಿದೆ. ಶ್ವಾನವನ್ನು ನಡೆಸಿಕೊಂಡು ಹೋದಂತೆ ನೋಮುಲಾ ಭಗತ್ ಕುಮಾರ್ ಚಿರತೆಯನ್ನು ಕರೆದುಕೊಂಡು ಹೋಗಿರುವುದು ಅನೇಕರಲ್ಲಿ ಅಚ್ಚರಿ ಮೂಡಿಸಿದೆ.

ದೀರ್ಘಕಾಲದವರೆಗೆ ಕಮ್ಯುನಿಸ್ಟ್ ಪಕ್ಷದ ನಾಯಕರಾಗಿದ್ದ ನೋಮುಲಾ ನರಸಿಂಹಯ್ಯ ತೆಲಂಗಾಣ ರಾಜ್ಯ ರಚನೆಯ ನಂತರ ಟಿಆರ್​ಎಸ್ ಪಕ್ಷಕ್ಕೆ ಸೇರಿಕೊಂಡರು. 2018 ರ ವಿಧಾನಸಭಾ ಚುನಾವಣೆಯಲ್ಲಿ ಅವರು ನಾಗಾರ್ಜುನ ಸಾಗರ್​​ನಿಂದ ಗೆದ್ದಿದ್ದರು. ಆದರೆ, ಅವರು ಮೃತಪಟ್ಟಿದ್ದರಿಂದ ಇಲ್ಲಿಗೆ ಉಪಚುನಾವಣೆ ನಡೆಯುತ್ತಿದೆ.

ನೋಮುಲಾ ನರಸಿಂಹಯ್ಯ ಪುತ್ರ ಭಗತ್ ಕುಮಾರ್ ಟಿಆರ್​ಎಸ್​ ಅಭ್ಯರ್ಥಿಯಾಗಿ ನಾಗಾರ್ಜುನ್​ ಸಾಗರ್​ ಅಖಾಡಕ್ಕೆ ಇಳಿದಿದ್ದಾರೆ. ಇವರು ಚುನಾವಣಾ ಪ್ರಚಾರ ಮಾಡುತ್ತಿದ್ದು, ಭಗತ್ ಹಳೆಯ ವಿಡಿಯೋ ವೈರಲ್ ಆಗಿದೆ. ಚಿರತೆಯೊಂದಿಗೆ ಭಗತ್ ನಡೆದುಕೊಂಡು ಬರುತ್ತಿರುವ ವಿಡಿಯೋವನ್ನು ನಿರ್ದೇಶಕ ರಾಮ್​ ಗೋಪಾಲ್​ ವರ್ಮಾ ಹಂಚಿಕೊಂಡಿದ್ದಾರೆ.

ಕೆಸಿಆರ್ ಹುಲಿ ಮತ್ತು ಕೆಟಿಆರ್ ಸಿಂಹ ಎಂದು ನಮಗೆ ಗೊತ್ತು. ಆದರೆ, ನೋಮುಲಾ ಭಗತ್ ಚಿರತೆಯನ್ನು ವಾಕ್ ಕರೆದೊಯ್ಯುತ್ತಿರುವ ವಿಡಿಯೋ ನನಗೆ ತುಂಬಾ ಇಷ್ಟವಾಯಿತು. ನಾಗಾರ್ಜುನ ಸಾಗರ್ ಉಪ ಚುನಾವಣೆಯಲ್ಲಿ ನನಗೆ ಮತ ಚಲಾಯಿಸಲು ಅವಕಾಶವಿದ್ದರೆ, ನಾನು ಅವರಿಗೆ ಮತ ಹಾಕುತ್ತಿದ್ದೆ ಎಂದು ಬರೆದಯಕೊಂಡಿದ್ದಾರೆ.

5 ವರ್ಷದ ಹಳೆಯ ವಿಡಿಯೋ .. ಚಿರತೆಯೊಂದಿಗೆ ನೋಮುಲಾ ಭಗತ್ ನಡೆದಿದ್ದು ನಿಜ ಎಂದು ಅವರ ಆಪ್ತರು ಹೇಳಿದ್ದಾರೆ. ಮೂಲಗಳ ಪ್ರಕಾರ, ಭಗತ್ ಐದು ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದ ಪ್ರವಾಸಕ್ಕೆ ಹೋಗಿದ್ದರು. ಅಲ್ಲಿ ಅವರು ಸಫಾರಿಗೆ ಹೋಗಿದ್ದಾಗ ಚಿರತೆ ಜತೆ ನಡೆದಿದ್ದರು ಎನ್ನಲಾಗಿದೆ.

ಚುನಾವಣಾ ಅಖಾಡ.. ತೆಲಂಗಾಣದ ನಲ್ಲಗೊಂಡ ಜಿಲ್ಲೆ ನಾಗಾರ್ಜುನ ಉಪಚುನಾವಣೆಗೆ ಒಟ್ಟು 77 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ವಿವಿಧ ಕಾರಣಗಳಿಗಾಗಿ 17 ನಾಮಪತ್ರಗಳನ್ನು ತಿರಸ್ಕರಿಸಲಾಗಿದೆ. ಮೂರು ಅಭ್ಯರ್ಥಿಗಳು ಶುಕ್ರವಾರ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಇದರೊಂದಿಗೆ ಪ್ರಸ್ತುತ 57 ಜನರು ಕಣದಲ್ಲಿದ್ದಾರೆ.

ಇದನ್ನೂ ಓದಿ: ಹಾವೇರಿ ಜನತೆಗೆ ಚಿರತೆ ಭೀತಿ; ಸೆರೆ ಹಿಡಿಯಲು ಬೋನ್ ಇಟ್ಟಿರುವ ಅರಣ್ಯ ಇಲಾಖೆ

2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ