AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿರತೆ ಜತೆ ವಾಕಿಂಗ್​ ಹೋದ ತೆಲಂಗಾಣ ರಾಜಕಾರಣಿ! ವಿಡಿಯೋ ವೈರಲ್

ತೆಲಂಗಾಣದ ನಾಗಾರ್ಜುನ ಸಾಗರ್​ ಉಪಚುನಾವಣೆಯಲ್ಲಿ ಟಿಆರ್​​ಎಸ್​ ಅಭ್ಯರ್ಥಿಯಾಗಿ ನೋಮುಲಾ ಭಗತ್ ಕುಮಾರ್ ಸ್ಪರ್ಧಿಸಿದ್ದಾರೆ. ಇವರು ಚಿರತೆ ಜತೆ ನಡೆದು ಹೋಗುತ್ತಿರುವ ವಿಡಿಯೋ ಒಂದು ಈಗ ವೈರಲ್​ ಆಗಿದೆ.

ಚಿರತೆ ಜತೆ ವಾಕಿಂಗ್​ ಹೋದ ತೆಲಂಗಾಣ ರಾಜಕಾರಣಿ! ವಿಡಿಯೋ ವೈರಲ್
ಚಿರತೆ ಜತೆ ವಾಕಿಂಗ್​ ಹೋದ ನೋಮುಲಾ ಭಗತ್
ರಾಜೇಶ್ ದುಗ್ಗುಮನೆ
| Edited By: |

Updated on: Apr 03, 2021 | 7:25 PM

Share

ಶ್ವಾನಗಳನ್ನು ವಾಕಿಂಗ್​ಗೆ ಕರೆದುಕೊಂಡು ಹೋಗೋದು ಕಾಮನ್​. ಆದರೆ, ಎಲ್ಲಾದರೂ ಚಿರತೆಯನ್ನು ಕರೆದುಕೊಂಡು ವಾಕಿಂಗ್​ ಹೋಗಿದ್ದನ್ನು ನೀವು ನೋಡಿದ್ದೀರಾ? ತೆಲಂಗಾಣ ಟಿಆರ್​ಎಸ್ ನಾಯಕನೋರ್ವ ಚಿರತೆ ಜತೆ ನಡೆದು ಹೋಗಿರುವ ವಿಡಿಯೋ ಒಂದು ಈಗ ಸಾಕಷ್ಟು ವೈರಲ್​ ಆಗಿದೆ.

ತೆಲಂಗಾಣದ ನಾಗಾರ್ಜುನ ಸಾಗರ್​ ಉಪಚುನಾವಣೆಯಲ್ಲಿ ಟಿಆರ್​​ಎಸ್​ ಅಭ್ಯರ್ಥಿಯಾಗಿ ನೋಮುಲಾ ಭಗತ್ ಕುಮಾರ್ ಸ್ಪರ್ಧಿಸಿದ್ದಾರೆ. ಇವರು ಚಿರತೆ ಜತೆ ನಡೆದು ಹೋಗುತ್ತಿರುವ ವಿಡಿಯೋ ಒಂದು ಈಗ ವೈರಲ್​ ಆಗಿದೆ. ಶ್ವಾನವನ್ನು ನಡೆಸಿಕೊಂಡು ಹೋದಂತೆ ನೋಮುಲಾ ಭಗತ್ ಕುಮಾರ್ ಚಿರತೆಯನ್ನು ಕರೆದುಕೊಂಡು ಹೋಗಿರುವುದು ಅನೇಕರಲ್ಲಿ ಅಚ್ಚರಿ ಮೂಡಿಸಿದೆ.

ದೀರ್ಘಕಾಲದವರೆಗೆ ಕಮ್ಯುನಿಸ್ಟ್ ಪಕ್ಷದ ನಾಯಕರಾಗಿದ್ದ ನೋಮುಲಾ ನರಸಿಂಹಯ್ಯ ತೆಲಂಗಾಣ ರಾಜ್ಯ ರಚನೆಯ ನಂತರ ಟಿಆರ್​ಎಸ್ ಪಕ್ಷಕ್ಕೆ ಸೇರಿಕೊಂಡರು. 2018 ರ ವಿಧಾನಸಭಾ ಚುನಾವಣೆಯಲ್ಲಿ ಅವರು ನಾಗಾರ್ಜುನ ಸಾಗರ್​​ನಿಂದ ಗೆದ್ದಿದ್ದರು. ಆದರೆ, ಅವರು ಮೃತಪಟ್ಟಿದ್ದರಿಂದ ಇಲ್ಲಿಗೆ ಉಪಚುನಾವಣೆ ನಡೆಯುತ್ತಿದೆ.

ನೋಮುಲಾ ನರಸಿಂಹಯ್ಯ ಪುತ್ರ ಭಗತ್ ಕುಮಾರ್ ಟಿಆರ್​ಎಸ್​ ಅಭ್ಯರ್ಥಿಯಾಗಿ ನಾಗಾರ್ಜುನ್​ ಸಾಗರ್​ ಅಖಾಡಕ್ಕೆ ಇಳಿದಿದ್ದಾರೆ. ಇವರು ಚುನಾವಣಾ ಪ್ರಚಾರ ಮಾಡುತ್ತಿದ್ದು, ಭಗತ್ ಹಳೆಯ ವಿಡಿಯೋ ವೈರಲ್ ಆಗಿದೆ. ಚಿರತೆಯೊಂದಿಗೆ ಭಗತ್ ನಡೆದುಕೊಂಡು ಬರುತ್ತಿರುವ ವಿಡಿಯೋವನ್ನು ನಿರ್ದೇಶಕ ರಾಮ್​ ಗೋಪಾಲ್​ ವರ್ಮಾ ಹಂಚಿಕೊಂಡಿದ್ದಾರೆ.

ಕೆಸಿಆರ್ ಹುಲಿ ಮತ್ತು ಕೆಟಿಆರ್ ಸಿಂಹ ಎಂದು ನಮಗೆ ಗೊತ್ತು. ಆದರೆ, ನೋಮುಲಾ ಭಗತ್ ಚಿರತೆಯನ್ನು ವಾಕ್ ಕರೆದೊಯ್ಯುತ್ತಿರುವ ವಿಡಿಯೋ ನನಗೆ ತುಂಬಾ ಇಷ್ಟವಾಯಿತು. ನಾಗಾರ್ಜುನ ಸಾಗರ್ ಉಪ ಚುನಾವಣೆಯಲ್ಲಿ ನನಗೆ ಮತ ಚಲಾಯಿಸಲು ಅವಕಾಶವಿದ್ದರೆ, ನಾನು ಅವರಿಗೆ ಮತ ಹಾಕುತ್ತಿದ್ದೆ ಎಂದು ಬರೆದಯಕೊಂಡಿದ್ದಾರೆ.

5 ವರ್ಷದ ಹಳೆಯ ವಿಡಿಯೋ .. ಚಿರತೆಯೊಂದಿಗೆ ನೋಮುಲಾ ಭಗತ್ ನಡೆದಿದ್ದು ನಿಜ ಎಂದು ಅವರ ಆಪ್ತರು ಹೇಳಿದ್ದಾರೆ. ಮೂಲಗಳ ಪ್ರಕಾರ, ಭಗತ್ ಐದು ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದ ಪ್ರವಾಸಕ್ಕೆ ಹೋಗಿದ್ದರು. ಅಲ್ಲಿ ಅವರು ಸಫಾರಿಗೆ ಹೋಗಿದ್ದಾಗ ಚಿರತೆ ಜತೆ ನಡೆದಿದ್ದರು ಎನ್ನಲಾಗಿದೆ.

ಚುನಾವಣಾ ಅಖಾಡ.. ತೆಲಂಗಾಣದ ನಲ್ಲಗೊಂಡ ಜಿಲ್ಲೆ ನಾಗಾರ್ಜುನ ಉಪಚುನಾವಣೆಗೆ ಒಟ್ಟು 77 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ವಿವಿಧ ಕಾರಣಗಳಿಗಾಗಿ 17 ನಾಮಪತ್ರಗಳನ್ನು ತಿರಸ್ಕರಿಸಲಾಗಿದೆ. ಮೂರು ಅಭ್ಯರ್ಥಿಗಳು ಶುಕ್ರವಾರ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಇದರೊಂದಿಗೆ ಪ್ರಸ್ತುತ 57 ಜನರು ಕಣದಲ್ಲಿದ್ದಾರೆ.

ಇದನ್ನೂ ಓದಿ: ಹಾವೇರಿ ಜನತೆಗೆ ಚಿರತೆ ಭೀತಿ; ಸೆರೆ ಹಿಡಿಯಲು ಬೋನ್ ಇಟ್ಟಿರುವ ಅರಣ್ಯ ಇಲಾಖೆ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ