AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಪ್ರವಾಹ ಸಂದರ್ಭದಲ್ಲಿ ನಿರ್ಲಕ್ಷ್ಯ ತೋರಿದ 30 ಅಧಿಕಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಕಿಮ್ ಜಾಂಗ್ ಉನ್‌

ಉತ್ತರ ಕೊರಿಯಾ ಅಲ್ಲಿನ ವಿಚಿತ್ರ ಹಾಗೂ ಕಟ್ಟುನಿಟ್ಟಿನ ಕಾನೂನುಗಳಿಗೆ ಪ್ರಸಿದ್ಧ. ಅಲ್ಲಿನ ಕಾನೂನು ಕ್ರಮ ನೋಡಿದರೆ ಎಂಥವರಿಗೂ ಒಂದು ಕ್ಷಣ ತಲೆ ತಿರುಗುತ್ತದೆ. ಹೌದು ಅಲ್ಲಿ ಸರ್ವಾಧಿಕಾರಿ ಕಿಮ್‌ ಜಂಗ್‌ ಉನ್‌ ಹೊರಡಿಸುವ ಕಾನೂನನ್ನು ಪ್ರತಿಯೊಬ್ಬ ನಾಗರಿಕ ಕೂಡಾ ಪಾಲಿಸಲೇಬೇಕು. ಇದೀಗ ಉತ್ತರ ಕೊರಿಯ ಮತ್ತೊಮ್ಮೆ ಸುದ್ದಿಯಲ್ಲಿದ್ದು, ಜುಲೈ ತಿಂಗಳ ಅಂತ್ಯದಲ್ಲಿ ಸಂಭವಿಸಿದ ಭಾರೀ ಪ್ರವಾಹದ ಕಾರಣ ಇಲ್ಲಿ ಅನೇಕ ಅವು ನೋವುಗಳು ಸಂಭವಿಸಿದೆ. ಈ ಸಂದರ್ಭದಲ್ಲಿ ಅಧಿಕಾರಿಗಳು ತೋರಿದ ನಿರ್ಲಕ್ಷ್ಯದಿಂದ ಕೋಪಗೊಂಡ ಕಿಮ್‌ ಜಂಗ್‌ ಉನ್‌ 30 ಅಧಿಕಾರಿಗಳಿಗೆ ಗಲ್ಲು ಶಿಕ್ಷೆಯನ್ನು ವಿಧಿಸಿದ್ದಾರೆ ಎಂದು ವರದಿಗಳು ಹೇಳಿವೆ.

Viral: ಪ್ರವಾಹ ಸಂದರ್ಭದಲ್ಲಿ ನಿರ್ಲಕ್ಷ್ಯ ತೋರಿದ 30 ಅಧಿಕಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಕಿಮ್ ಜಾಂಗ್ ಉನ್‌
ಕಿಮ್‌ ಜಂಗ್‌ ಉನ್‌
ಮಾಲಾಶ್ರೀ ಅಂಚನ್​
| Edited By: |

Updated on: Sep 04, 2024 | 5:24 PM

Share

ಉತ್ತರ ಕೊರಿಯಾ ಎಂದಾಕ್ಷಣ ನಮಗೆಲ್ಲರಿಗೂ ನೆನಪಾಗುವುದೇ ಇಲ್ಲಿನ ಚಿತ್ರ ವಿಚಿತ್ರ ಹಾಗೂ ಕಠಿಣ ಕಾನೂನುಗಳು. ಅದರಲ್ಲೂ ಈ ದೇಶದ ಅಧ್ಯಕ್ಷ ಕಿಮ್‌ ಜಾಂಗ್‌ ಉನ್‌ ವಿಚಿತ್ರ ಕಾನೂನುಗಳನ್ನು ಪರಿಚಯಿಸುವ ಮೂಲಕ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ. ಇಲ್ಲಿನ ಸರ್ವಾಧಿಕಾರಿ ಆಡಳಿತವಿದ್ದು, ಸರ್ಕಾರ ಜಾರಿಗೊಳಿಸುವ ಪ್ರತಿಯೊಂದು ಕಾನೂನುಗಳನ್ನು ಇಲ್ಲಿನ ನಾಗರಿಕರು ಪಾಲಿಸಲೇಬೇಕಾಗುತ್ತದೆ. ಇಲ್ಲದಿದ್ದರೆ ಕಠಿಣ ಶಿಕ್ಷೆಗೆ ಗುರಿಯಾಗುವುದು ಖಂಡಿತ. ಇದೀಗ ಸರ್ವಾಧಿಕಾರಿ ಕಿಮ್‌ ಜಾಂಗ್‌ ಉನ್‌ ಮತ್ತೊಮ್ಮೆ ಸುದ್ದಿಯಲ್ಲಿದ್ದು, ಜುಲೈ ತಿಂಗಳ ಅಂತ್ಯದಲ್ಲಿ ಸಂಭವಿಸಿದ ಭಾರೀ ಪ್ರವಾಹದ ಕಾರಣ ಇಲ್ಲಿ ಅನೇಕ ಅವು ನೋವುಗಳು ಸಂಭವಿಸಿದೆ. ಈ ಸಂದರ್ಭದಲ್ಲಿ ಅಧಿಕಾರಿಗಳು ತೋರಿದ ನಿರ್ಲಕ್ಷ್ಯದಿಂದ ಕೋಪಗೊಂಡ ಕಿಮ್‌ ಜಂಗ್‌ ಉನ್‌ 30 ಅಧಿಕಾರಿಗಳಿಗೆ ಗಲ್ಲು ಶಿಕ್ಷೆಯನ್ನು ವಿಧಿಸಿದ್ದಾರೆ ಎಂದು ವರದಿಗಳು ಹೇಳಿವೆ.

ಉತ್ತರ ಕೊರಿಯಾದಲ್ಲಿ ಜುಲೈ ತಿಂಗಳ ಅಂತ್ಯದಲ್ಲಿ ಭಾರೀ ಮಳೆಯ ಕಾರಣದಿಂದಾಗಿ ಭೂ ಕುಸಿತ ಮತ್ತು ಪ್ರವಾಹ ಉಂಟಾಗಿತ್ತು. ಈ ನೈಸರ್ಗಿಕ ವಿಕೋಪದ ಕಾರಣ ಹಲವಾರು ಸಾವು ನೋವುಗಳು ಸಂಭವಿಸಿದೆ. ಸಾವಿರಕ್ಕೂ ಹೆಚ್ಚು ಜನ ಮೃತಪಟ್ಟಿದ್ದು, ಇದಕ್ಕೆಲ್ಲಾ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವೆಂದು ಕೋಪಗೊಂಡ ಕಿಮ್‌ ಜಾಂಗ್‌ ಉನ್‌ ಇಲ್ಲಿನ ಒಟ್ಟು 30 ಸರ್ಕಾರಿ ಅಧಿಕಾರಿಗಳಿಗೆ ಗಲ್ಲು ಶಿಕ್ಷೆಯನ್ನು ವಿಧಿಸಿದ್ದಾರೆ ಎಂದು ದಕ್ಷಿಣ ಕೊರಿಯಾದ ಚೋಸನ್‌ ಟಿವಿ ವರದಿ ತಿಳಿಸಿದೆ.

ಇದನ್ನೂ ಓದಿ: ಇದು ಲವ್‌ ಬಾಂಬ್‌ ದಾಳಿ, ಮಾತಲ್ಲೇ ಮರಳು ಮಾಡಿ ಪ್ರೀತಿಯ ಬಲೆಗೆ ಬೀಳಿಸಿ, ಯುವಕರ ಜೀವನ ನಾಶ ಮಾಡುವ ತಂತ್ರ

ಈ ಭೀಕರ ಪ್ರವಾಹದಲ್ಲಿ 4 ಸಾವಿರಕ್ಕೂ ಹೆಚ್ಚು ಜನ ಪ್ರಾಣವನ್ನು ಕಳೆದುಕೊಂಡಿದ್ದು, 15 ಸಾವಿರಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಿಗೆ ಸ್ವತಃ ಕಿಮ್ ಜಾಂಗ್‌ ಉನ್‌ ಭೇಟಿ ನೀಡಿ ಪರಿಶೀಲಿಸಿದ್ದಾರೆ. ನಂತರ ಪ್ರವಾಹ ಸಂದರ್ಭದಲ್ಲಿ ಅಧಿಕಾರಿ ತೋರಿದ ನಿರ್ಲಕ್ಷ್ಯದ ಕಾರಣಕ್ಕೆ 30 ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಮತ್ತು ಕರ್ತವ್ಯ ಲೋಪದ ಆರೋಪ ಹೊರಿಸಿ ಅವರಿಗೆ ಮರಣ ದಂಡನೆ ಶಿಕ್ಷೆ ವಿಧಿಸಿದೆ ಎಂದು ವರದಿಗಳು ತಿಳಿಸಿವೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು