AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಪ್ರವಾಹ ಸಂದರ್ಭದಲ್ಲಿ ನಿರ್ಲಕ್ಷ್ಯ ತೋರಿದ 30 ಅಧಿಕಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಕಿಮ್ ಜಾಂಗ್ ಉನ್‌

ಉತ್ತರ ಕೊರಿಯಾ ಅಲ್ಲಿನ ವಿಚಿತ್ರ ಹಾಗೂ ಕಟ್ಟುನಿಟ್ಟಿನ ಕಾನೂನುಗಳಿಗೆ ಪ್ರಸಿದ್ಧ. ಅಲ್ಲಿನ ಕಾನೂನು ಕ್ರಮ ನೋಡಿದರೆ ಎಂಥವರಿಗೂ ಒಂದು ಕ್ಷಣ ತಲೆ ತಿರುಗುತ್ತದೆ. ಹೌದು ಅಲ್ಲಿ ಸರ್ವಾಧಿಕಾರಿ ಕಿಮ್‌ ಜಂಗ್‌ ಉನ್‌ ಹೊರಡಿಸುವ ಕಾನೂನನ್ನು ಪ್ರತಿಯೊಬ್ಬ ನಾಗರಿಕ ಕೂಡಾ ಪಾಲಿಸಲೇಬೇಕು. ಇದೀಗ ಉತ್ತರ ಕೊರಿಯ ಮತ್ತೊಮ್ಮೆ ಸುದ್ದಿಯಲ್ಲಿದ್ದು, ಜುಲೈ ತಿಂಗಳ ಅಂತ್ಯದಲ್ಲಿ ಸಂಭವಿಸಿದ ಭಾರೀ ಪ್ರವಾಹದ ಕಾರಣ ಇಲ್ಲಿ ಅನೇಕ ಅವು ನೋವುಗಳು ಸಂಭವಿಸಿದೆ. ಈ ಸಂದರ್ಭದಲ್ಲಿ ಅಧಿಕಾರಿಗಳು ತೋರಿದ ನಿರ್ಲಕ್ಷ್ಯದಿಂದ ಕೋಪಗೊಂಡ ಕಿಮ್‌ ಜಂಗ್‌ ಉನ್‌ 30 ಅಧಿಕಾರಿಗಳಿಗೆ ಗಲ್ಲು ಶಿಕ್ಷೆಯನ್ನು ವಿಧಿಸಿದ್ದಾರೆ ಎಂದು ವರದಿಗಳು ಹೇಳಿವೆ.

Viral: ಪ್ರವಾಹ ಸಂದರ್ಭದಲ್ಲಿ ನಿರ್ಲಕ್ಷ್ಯ ತೋರಿದ 30 ಅಧಿಕಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಕಿಮ್ ಜಾಂಗ್ ಉನ್‌
ಕಿಮ್‌ ಜಂಗ್‌ ಉನ್‌
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on: Sep 04, 2024 | 5:24 PM

Share

ಉತ್ತರ ಕೊರಿಯಾ ಎಂದಾಕ್ಷಣ ನಮಗೆಲ್ಲರಿಗೂ ನೆನಪಾಗುವುದೇ ಇಲ್ಲಿನ ಚಿತ್ರ ವಿಚಿತ್ರ ಹಾಗೂ ಕಠಿಣ ಕಾನೂನುಗಳು. ಅದರಲ್ಲೂ ಈ ದೇಶದ ಅಧ್ಯಕ್ಷ ಕಿಮ್‌ ಜಾಂಗ್‌ ಉನ್‌ ವಿಚಿತ್ರ ಕಾನೂನುಗಳನ್ನು ಪರಿಚಯಿಸುವ ಮೂಲಕ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ. ಇಲ್ಲಿನ ಸರ್ವಾಧಿಕಾರಿ ಆಡಳಿತವಿದ್ದು, ಸರ್ಕಾರ ಜಾರಿಗೊಳಿಸುವ ಪ್ರತಿಯೊಂದು ಕಾನೂನುಗಳನ್ನು ಇಲ್ಲಿನ ನಾಗರಿಕರು ಪಾಲಿಸಲೇಬೇಕಾಗುತ್ತದೆ. ಇಲ್ಲದಿದ್ದರೆ ಕಠಿಣ ಶಿಕ್ಷೆಗೆ ಗುರಿಯಾಗುವುದು ಖಂಡಿತ. ಇದೀಗ ಸರ್ವಾಧಿಕಾರಿ ಕಿಮ್‌ ಜಾಂಗ್‌ ಉನ್‌ ಮತ್ತೊಮ್ಮೆ ಸುದ್ದಿಯಲ್ಲಿದ್ದು, ಜುಲೈ ತಿಂಗಳ ಅಂತ್ಯದಲ್ಲಿ ಸಂಭವಿಸಿದ ಭಾರೀ ಪ್ರವಾಹದ ಕಾರಣ ಇಲ್ಲಿ ಅನೇಕ ಅವು ನೋವುಗಳು ಸಂಭವಿಸಿದೆ. ಈ ಸಂದರ್ಭದಲ್ಲಿ ಅಧಿಕಾರಿಗಳು ತೋರಿದ ನಿರ್ಲಕ್ಷ್ಯದಿಂದ ಕೋಪಗೊಂಡ ಕಿಮ್‌ ಜಂಗ್‌ ಉನ್‌ 30 ಅಧಿಕಾರಿಗಳಿಗೆ ಗಲ್ಲು ಶಿಕ್ಷೆಯನ್ನು ವಿಧಿಸಿದ್ದಾರೆ ಎಂದು ವರದಿಗಳು ಹೇಳಿವೆ.

ಉತ್ತರ ಕೊರಿಯಾದಲ್ಲಿ ಜುಲೈ ತಿಂಗಳ ಅಂತ್ಯದಲ್ಲಿ ಭಾರೀ ಮಳೆಯ ಕಾರಣದಿಂದಾಗಿ ಭೂ ಕುಸಿತ ಮತ್ತು ಪ್ರವಾಹ ಉಂಟಾಗಿತ್ತು. ಈ ನೈಸರ್ಗಿಕ ವಿಕೋಪದ ಕಾರಣ ಹಲವಾರು ಸಾವು ನೋವುಗಳು ಸಂಭವಿಸಿದೆ. ಸಾವಿರಕ್ಕೂ ಹೆಚ್ಚು ಜನ ಮೃತಪಟ್ಟಿದ್ದು, ಇದಕ್ಕೆಲ್ಲಾ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವೆಂದು ಕೋಪಗೊಂಡ ಕಿಮ್‌ ಜಾಂಗ್‌ ಉನ್‌ ಇಲ್ಲಿನ ಒಟ್ಟು 30 ಸರ್ಕಾರಿ ಅಧಿಕಾರಿಗಳಿಗೆ ಗಲ್ಲು ಶಿಕ್ಷೆಯನ್ನು ವಿಧಿಸಿದ್ದಾರೆ ಎಂದು ದಕ್ಷಿಣ ಕೊರಿಯಾದ ಚೋಸನ್‌ ಟಿವಿ ವರದಿ ತಿಳಿಸಿದೆ.

ಇದನ್ನೂ ಓದಿ: ಇದು ಲವ್‌ ಬಾಂಬ್‌ ದಾಳಿ, ಮಾತಲ್ಲೇ ಮರಳು ಮಾಡಿ ಪ್ರೀತಿಯ ಬಲೆಗೆ ಬೀಳಿಸಿ, ಯುವಕರ ಜೀವನ ನಾಶ ಮಾಡುವ ತಂತ್ರ

ಈ ಭೀಕರ ಪ್ರವಾಹದಲ್ಲಿ 4 ಸಾವಿರಕ್ಕೂ ಹೆಚ್ಚು ಜನ ಪ್ರಾಣವನ್ನು ಕಳೆದುಕೊಂಡಿದ್ದು, 15 ಸಾವಿರಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಿಗೆ ಸ್ವತಃ ಕಿಮ್ ಜಾಂಗ್‌ ಉನ್‌ ಭೇಟಿ ನೀಡಿ ಪರಿಶೀಲಿಸಿದ್ದಾರೆ. ನಂತರ ಪ್ರವಾಹ ಸಂದರ್ಭದಲ್ಲಿ ಅಧಿಕಾರಿ ತೋರಿದ ನಿರ್ಲಕ್ಷ್ಯದ ಕಾರಣಕ್ಕೆ 30 ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಮತ್ತು ಕರ್ತವ್ಯ ಲೋಪದ ಆರೋಪ ಹೊರಿಸಿ ಅವರಿಗೆ ಮರಣ ದಂಡನೆ ಶಿಕ್ಷೆ ವಿಧಿಸಿದೆ ಎಂದು ವರದಿಗಳು ತಿಳಿಸಿವೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ