AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಪ್ರವಾಹ ಸಂದರ್ಭದಲ್ಲಿ ನಿರ್ಲಕ್ಷ್ಯ ತೋರಿದ 30 ಅಧಿಕಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಕಿಮ್ ಜಾಂಗ್ ಉನ್‌

ಉತ್ತರ ಕೊರಿಯಾ ಅಲ್ಲಿನ ವಿಚಿತ್ರ ಹಾಗೂ ಕಟ್ಟುನಿಟ್ಟಿನ ಕಾನೂನುಗಳಿಗೆ ಪ್ರಸಿದ್ಧ. ಅಲ್ಲಿನ ಕಾನೂನು ಕ್ರಮ ನೋಡಿದರೆ ಎಂಥವರಿಗೂ ಒಂದು ಕ್ಷಣ ತಲೆ ತಿರುಗುತ್ತದೆ. ಹೌದು ಅಲ್ಲಿ ಸರ್ವಾಧಿಕಾರಿ ಕಿಮ್‌ ಜಂಗ್‌ ಉನ್‌ ಹೊರಡಿಸುವ ಕಾನೂನನ್ನು ಪ್ರತಿಯೊಬ್ಬ ನಾಗರಿಕ ಕೂಡಾ ಪಾಲಿಸಲೇಬೇಕು. ಇದೀಗ ಉತ್ತರ ಕೊರಿಯ ಮತ್ತೊಮ್ಮೆ ಸುದ್ದಿಯಲ್ಲಿದ್ದು, ಜುಲೈ ತಿಂಗಳ ಅಂತ್ಯದಲ್ಲಿ ಸಂಭವಿಸಿದ ಭಾರೀ ಪ್ರವಾಹದ ಕಾರಣ ಇಲ್ಲಿ ಅನೇಕ ಅವು ನೋವುಗಳು ಸಂಭವಿಸಿದೆ. ಈ ಸಂದರ್ಭದಲ್ಲಿ ಅಧಿಕಾರಿಗಳು ತೋರಿದ ನಿರ್ಲಕ್ಷ್ಯದಿಂದ ಕೋಪಗೊಂಡ ಕಿಮ್‌ ಜಂಗ್‌ ಉನ್‌ 30 ಅಧಿಕಾರಿಗಳಿಗೆ ಗಲ್ಲು ಶಿಕ್ಷೆಯನ್ನು ವಿಧಿಸಿದ್ದಾರೆ ಎಂದು ವರದಿಗಳು ಹೇಳಿವೆ.

Viral: ಪ್ರವಾಹ ಸಂದರ್ಭದಲ್ಲಿ ನಿರ್ಲಕ್ಷ್ಯ ತೋರಿದ 30 ಅಧಿಕಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಕಿಮ್ ಜಾಂಗ್ ಉನ್‌
ಕಿಮ್‌ ಜಂಗ್‌ ಉನ್‌
ಮಾಲಾಶ್ರೀ ಅಂಚನ್​
| Edited By: |

Updated on: Sep 04, 2024 | 5:24 PM

Share

ಉತ್ತರ ಕೊರಿಯಾ ಎಂದಾಕ್ಷಣ ನಮಗೆಲ್ಲರಿಗೂ ನೆನಪಾಗುವುದೇ ಇಲ್ಲಿನ ಚಿತ್ರ ವಿಚಿತ್ರ ಹಾಗೂ ಕಠಿಣ ಕಾನೂನುಗಳು. ಅದರಲ್ಲೂ ಈ ದೇಶದ ಅಧ್ಯಕ್ಷ ಕಿಮ್‌ ಜಾಂಗ್‌ ಉನ್‌ ವಿಚಿತ್ರ ಕಾನೂನುಗಳನ್ನು ಪರಿಚಯಿಸುವ ಮೂಲಕ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ. ಇಲ್ಲಿನ ಸರ್ವಾಧಿಕಾರಿ ಆಡಳಿತವಿದ್ದು, ಸರ್ಕಾರ ಜಾರಿಗೊಳಿಸುವ ಪ್ರತಿಯೊಂದು ಕಾನೂನುಗಳನ್ನು ಇಲ್ಲಿನ ನಾಗರಿಕರು ಪಾಲಿಸಲೇಬೇಕಾಗುತ್ತದೆ. ಇಲ್ಲದಿದ್ದರೆ ಕಠಿಣ ಶಿಕ್ಷೆಗೆ ಗುರಿಯಾಗುವುದು ಖಂಡಿತ. ಇದೀಗ ಸರ್ವಾಧಿಕಾರಿ ಕಿಮ್‌ ಜಾಂಗ್‌ ಉನ್‌ ಮತ್ತೊಮ್ಮೆ ಸುದ್ದಿಯಲ್ಲಿದ್ದು, ಜುಲೈ ತಿಂಗಳ ಅಂತ್ಯದಲ್ಲಿ ಸಂಭವಿಸಿದ ಭಾರೀ ಪ್ರವಾಹದ ಕಾರಣ ಇಲ್ಲಿ ಅನೇಕ ಅವು ನೋವುಗಳು ಸಂಭವಿಸಿದೆ. ಈ ಸಂದರ್ಭದಲ್ಲಿ ಅಧಿಕಾರಿಗಳು ತೋರಿದ ನಿರ್ಲಕ್ಷ್ಯದಿಂದ ಕೋಪಗೊಂಡ ಕಿಮ್‌ ಜಂಗ್‌ ಉನ್‌ 30 ಅಧಿಕಾರಿಗಳಿಗೆ ಗಲ್ಲು ಶಿಕ್ಷೆಯನ್ನು ವಿಧಿಸಿದ್ದಾರೆ ಎಂದು ವರದಿಗಳು ಹೇಳಿವೆ.

ಉತ್ತರ ಕೊರಿಯಾದಲ್ಲಿ ಜುಲೈ ತಿಂಗಳ ಅಂತ್ಯದಲ್ಲಿ ಭಾರೀ ಮಳೆಯ ಕಾರಣದಿಂದಾಗಿ ಭೂ ಕುಸಿತ ಮತ್ತು ಪ್ರವಾಹ ಉಂಟಾಗಿತ್ತು. ಈ ನೈಸರ್ಗಿಕ ವಿಕೋಪದ ಕಾರಣ ಹಲವಾರು ಸಾವು ನೋವುಗಳು ಸಂಭವಿಸಿದೆ. ಸಾವಿರಕ್ಕೂ ಹೆಚ್ಚು ಜನ ಮೃತಪಟ್ಟಿದ್ದು, ಇದಕ್ಕೆಲ್ಲಾ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವೆಂದು ಕೋಪಗೊಂಡ ಕಿಮ್‌ ಜಾಂಗ್‌ ಉನ್‌ ಇಲ್ಲಿನ ಒಟ್ಟು 30 ಸರ್ಕಾರಿ ಅಧಿಕಾರಿಗಳಿಗೆ ಗಲ್ಲು ಶಿಕ್ಷೆಯನ್ನು ವಿಧಿಸಿದ್ದಾರೆ ಎಂದು ದಕ್ಷಿಣ ಕೊರಿಯಾದ ಚೋಸನ್‌ ಟಿವಿ ವರದಿ ತಿಳಿಸಿದೆ.

ಇದನ್ನೂ ಓದಿ: ಇದು ಲವ್‌ ಬಾಂಬ್‌ ದಾಳಿ, ಮಾತಲ್ಲೇ ಮರಳು ಮಾಡಿ ಪ್ರೀತಿಯ ಬಲೆಗೆ ಬೀಳಿಸಿ, ಯುವಕರ ಜೀವನ ನಾಶ ಮಾಡುವ ತಂತ್ರ

ಈ ಭೀಕರ ಪ್ರವಾಹದಲ್ಲಿ 4 ಸಾವಿರಕ್ಕೂ ಹೆಚ್ಚು ಜನ ಪ್ರಾಣವನ್ನು ಕಳೆದುಕೊಂಡಿದ್ದು, 15 ಸಾವಿರಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಿಗೆ ಸ್ವತಃ ಕಿಮ್ ಜಾಂಗ್‌ ಉನ್‌ ಭೇಟಿ ನೀಡಿ ಪರಿಶೀಲಿಸಿದ್ದಾರೆ. ನಂತರ ಪ್ರವಾಹ ಸಂದರ್ಭದಲ್ಲಿ ಅಧಿಕಾರಿ ತೋರಿದ ನಿರ್ಲಕ್ಷ್ಯದ ಕಾರಣಕ್ಕೆ 30 ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಮತ್ತು ಕರ್ತವ್ಯ ಲೋಪದ ಆರೋಪ ಹೊರಿಸಿ ಅವರಿಗೆ ಮರಣ ದಂಡನೆ ಶಿಕ್ಷೆ ವಿಧಿಸಿದೆ ಎಂದು ವರದಿಗಳು ತಿಳಿಸಿವೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ