Video: ಸಿರಪ್‌ ಬಾಟಲಿ ನುಂಗಿ ಸಂಕಷ್ಟಕ್ಕೆ ಸಿಲುಕಿದ ನಾಗಪ್ಪ; ರಕ್ಷಣೆಗೆ ಧಾವಿಸಿದ ಸ್ನೇಕ್‌ ಹೆಲ್ಪ್‌ಲೈನ್‌

ಮನುಷ್ಯರು ಮಾಡುವ ಕೆಲವೊಂದು ತಪ್ಪುಗಳು ಮೂಕ ಪ್ರಾಣಿಗಳಿಗೆ ಅಪಾಯವನ್ನು ತಂದೊಡ್ಡುತ್ತವೆ. ಇದೀಗ ಅಂತಹದೇ ಮಲಕಲಕುವ ಘಟನೆಯೊಂದು ನಡೆದಿದ್ದು, ಯಾರೋ ಎಸೆದಂತಹ ಕೆಮ್ಮಿನ ಸಿರಪ್‌ ಬಾಟಲಿಯನ್ನು ನುಂಗಿ ನಾಗರ ಹಾವೊಂದು ಸಂಕಷ್ಟಕ್ಕೆ ಸಿಲುಕಿದೆ. ಬಾಟಲಿಯನ್ನು ನುಂಗಿ ಉಸಿರಾಡಲು ಕಷ್ಟಪಡುತ್ತಿದ್ದ ಹಾವನ್ನು ಸ್ನೇಕ್‌ ಹೆಲ್ಪ್‌ ಲೈನ್‌ ರಕ್ಷಿಸಿದ್ದು, ಈ ಕುರಿತ ವಿಡಿಯೋವೊಂದು ಇದೀಗ ವೈರಲ್‌ ಆಗುತ್ತಿದೆ.

Video: ಸಿರಪ್‌ ಬಾಟಲಿ ನುಂಗಿ ಸಂಕಷ್ಟಕ್ಕೆ ಸಿಲುಕಿದ ನಾಗಪ್ಪ; ರಕ್ಷಣೆಗೆ ಧಾವಿಸಿದ ಸ್ನೇಕ್‌ ಹೆಲ್ಪ್‌ಲೈನ್‌
ವೈರಲ್​​ ವಿಡಿಯೋ
Edited By:

Updated on: Jul 04, 2024 | 4:29 PM

ಸಮರ್ಪಕವಾಗಿ ತ್ಯಾಜ್ಯ ವಿಲೇವಾರಿ ಮಾಡುವಂತೆ ಜನರಿಗೆ ಎಷ್ಟೇ ಜಾಗೃತಿ, ಎಚ್ಚರಿಕೆ ನೀಡಿದರೂ ಎಲ್ಲೆಂದರಲ್ಲಿ ಕಸ ಎಸೆಯುವ ಚಾಳಿ ಬಿಟ್ಟಿಲ್ಲ. ಹೀಗೆ ಎಲ್ಲೆಂದರಲ್ಲಿ ಕಸ ಎಸೆಯುವುದರಿಂದ ಪರಿಸರಕ್ಕೆ ಹಾನಿಯಾಗುವುದರ ಜೊತೆಗೆ ಮೂಕ ಪ್ರಾಣಿಗಳೂ ಸಂಕಷ್ಟಕ್ಕೆ ಸಿಲುಕುತ್ತವೆ. ಹೌದು ಆಹಾರವನ್ನು ಅರಸಿ ಬರುವ ಪ್ರಾಣಿಗಳು ಅಲ್ಲಲ್ಲಿ ಎಸೆದಂತಹ ಪ್ಲಾಸ್ಟಿಕ್‌ ತ್ಯಾಜ್ಯ ಸೇವಿಸಿ ಅನಾರೋಗ್ಯಕ್ಕೆ ತುತ್ತಾದ ಅದೆಷ್ಟೋ ಘಟನೆಗಳು ನಡೆದಿವೆ. ಇದೀಗ ಅಂತಹದೇ ಘಟನೆಯೊಂದು ನಡೆದಿದ್ದು, ಆಹಾರವೆಂದು ಭಾವಿಸಿ ನಾಗರ ಹಾವೊಂದು ಯಾರೋ ಬೀದಿಯಲ್ಲಿ ಎಸೆದಂತಹತ ಸಿರಪ್‌ ಬಾಟಲಿಯನ್ನು ನುಂಗಿ ಪರದಾಟಕ್ಕೆ ಸಿಲುಕಿದೆ. ತಕ್ಷಣ ಸ್ನೇಕ್‌ ಹೆಲ್ಪ್‌ ಲೈನ್‌ ಸಿಬ್ಬಂದಿ ಹಾವಿನ ಬಾಯಲ್ಲಿ ಸಿಕ್ಕಿಹಾಕಿಕೊಂಡ ಬಾಟಲಿಯನ್ನು ಹೊರ ತೆಗೆದಿದ್ದಾರೆ. ಈ ಕುರಿತ ವಿಡಿಯೋ ಇದೀಗ ವೈರಲ್‌ ಆಗುತ್ತಿದೆ.

ಒಡಿಶಾದ ಭುವನೇಶ್ವರದಲ್ಲಿ ಈ ಘಟನೆ ನಡೆದಿದ್ದು, ನಾಗರ ಹಾವೊಂದು ಸಿರಪ್‌ ಬಾಟಲಿಯನ್ನು ನುಂಗಿ, ಉಸಿರಾಡುವುದಕ್ಕೂ ಆಗದೆ ಪ್ರಾಣ ಸಂಕಟದಲ್ಲಿ ಸಿಲುಕಿದೆ. ನಂತರ ಸ್ನೇಕ್‌ ಹೆಲ್ಪ್‌ಲೈನ್‌ ಸಿಬ್ಬಂದಿಯೊಬ್ಬರು ಹಾವಿನ ಗಂಟಲಲ್ಲಿ ಸಿಲುಕಿದ ಬಾಟಲಿಯನ್ನು ಯಶಸ್ವಿಯಾಗಿ ಹೊರ ತೆಗೆಯುವ ಮೂಲಕ ಮುಗ್ಧ ಜೀವವನ್ನು ರಕ್ಷಿಸಿದ್ದಾರೆ.

ಭಾರತೀಯ ಅರಣ್ಯಾಧಿಕಾರಿ ಸುಸಾಂತ ನಂದಾ (Susantananda3) ಈ ಕುರಿತ ಪೋಸ್ಟ್‌ ಒಂದನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, “ಸ್ನೇಕ್‌ ಹೆಲ್ಪ್‌ಲೈನ್‌ ಸಿಬ್ಬಂದಿ ನಾಗರ ಹಾವಿನ ಗಂಟಲಲ್ಲಿ ಸಿಲುಕಿದ ಕೆಮ್ಮಿನ ಸಿರಪ್‌ ಬಾಟಲಿಯನ್ನು ಹೊರ ತೆಗೆಯುವ ಮೂಲಕ ಅಮೂಲ್ಯ ಜೀವವನ್ನು ರಕ್ಷಿಸಿದ್ದಾರೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ (ಎಕ್ಸ್​​​ ಖಾತೆ )

ವೈರಲ್‌ ವಿಡಿಯೋದಲ್ಲಿ ಸಿರಪ್‌ ಬಾಟಲಿಯನ್ನು ನುಂಗಿದ ಹಾವೊಂದು ಈ ಸಂಕಷ್ಟದಿಂದ ಹೊರ ಬರಲಾರದೆ ಪರದಾಡುತ್ತಿರುವ ಮನಕಲಕುವ ದೃಶ್ಯವನ್ನು ಕಾಣಬಹುದು. ನಂತರ ಸ್ನೇಕ್‌ ಹೆಲ್ಪ್‌ಲೈನ್‌ ಸಿಬ್ಬಂದಿ ನಿಧಾನಕ್ಕೆ ಹಾವಿನ ಬಾಯಲ್ಲಿ ಸಿಲುಕ್ಕಿದ್ದಂತಹ ಬಾಟಲಿಯನ್ನು ನಿಧಾನಕ್ಕೆ ಹೊರ ತೆಗೆದಿದ್ದಾರೆ.

ಇದನ್ನೂ ಓದಿ: ಕುಸಿದು ಬಿದ್ದ ಕಾಂಪೌಂಡ್‌ ಗೋಡೆ, ಕೂದಲೆಳೆ ಅಂತರದಲ್ಲಿ ಯುವಕ ಬಚಾವ್, ಎದೆ ಝಲ್‌ ಎನಿಸುವ ದೃಶ್ಯ

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ಪೋಸ್ಟ್‌ 1 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಜನರು ಬೇಜವಾಬ್ದಾರಿಯಿಂದ ಎಲ್ಲೆಂದರಲ್ಲಿ ಕಸ ಎಸೆದು ಮೂಕ ಪ್ರಾಣಿಗಳ ಪ್ರಾಣಕ್ಕೆ ಕಂಟಕ ತಂದೊಡ್ಡುತ್ತಿದ್ದಾರೆ ಎಂದು ನೆಟ್ಟಿಗರು ಕಿಡಿ ಕಾರಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us