AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡಿಶಾ: ಆಳವಾದ ಗುಂಡಿಯಲ್ಲಿ ಬಿದ್ದ ಆನೆಯನ್ನು ರಕ್ಷಿಸಿ ಕರ್ತವ್ಯ ಮೆರೆದ ಅರಣ್ಯ ಇಲಾಖೆ

ಹಳ್ಳಿ ದಾಟಿ ಕಾಡಿಗೆ ಹೋಗಲು ದಾರಿ ತೋಚದೇ ಆನೆಗಳು ಪರದಾಡುತ್ತಿದ್ದವು, ಈ ವೇಳೆಯಲ್ಲಿ ಜನರನ್ನು ಕಂಡು ಕಂಗಾಲಾದ ಆನೆಗಳು ದಿಕ್ಕಾ ಪಾಲಾಗಿ ಓಡಿವೆ. ಅದರಲ್ಲೊಂದು ವಯಸ್ಕ ಆನೆ ಆಳವಾದ ಹಳ್ಳಕ್ಕೆ ಬಿದ್ದಿದೆ ಎಂದು ವರದಿ ಮಾಡಲಾಗಿದೆ.

ಒಡಿಶಾ: ಆಳವಾದ ಗುಂಡಿಯಲ್ಲಿ ಬಿದ್ದ ಆನೆಯನ್ನು ರಕ್ಷಿಸಿ ಕರ್ತವ್ಯ ಮೆರೆದ ಅರಣ್ಯ ಇಲಾಖೆ
ಆಳವಾದ ಗುಂಡಿಯಲ್ಲಿ ಬಿದ್ದ ಆನೆಯನ್ನು ರಕ್ಷಿಸಿದ ಅರಣ್ಯ ಇಲಾಖೆ
TV9 Web
| Edited By: |

Updated on:Oct 06, 2021 | 12:28 PM

Share

ಆಳವಾದ ಗುಂಡಿಯಲ್ಲಿ ಬಿದ್ದಿದ್ದ ಆನೆಯನ್ನು ಅರಣ್ಯ ಇಲಾಖೆ ರಕ್ಷಿಸಿದೆ. ರಕ್ಷಣಾ ಕಾರ್ಯಾಚಾರಣೆಯಲ್ಲಿ ಜೆಸಿಬಿಯನ್ನು ತಂದು ಆನೆಯನ್ನು ರಕ್ಷಿಸಿ ಒಡಿಶಾ ಬಾಂಗಿರಿಪೋಸಿ ಅರಣ್ಯ ಇಲಾಖೆ ಕರ್ತವ್ಯ ಮೆರೆದಿದೆ. ಈ ಕುರಿತಂತೆ ಎಎನ್ಐ ವರದಿ ಮಾಡಿದೆ. ರಾತ್ರಿ ವೇಳೆಯಲ್ಲಿ ಸುಮಾರು 10 ಆನೆಗಳು ಮಯೂರ್​ಭಂಜ್​ ಜಿಲ್ಲೆಯಲ್ಲಿರುವ ಪುಟ್ಟ ಹಳ್ಳಿಯನ್ನು ಪ್ರವೇಶಿಸಿವೆ. ಹಳ್ಳಿ ದಾಟಿ ಕಾಡಿಗೆ ಹೋಗಲು ದಾರಿ ತೋಚದೇ ಆನೆಗಳು ಪರದಾಡುತ್ತಿದ್ದವು, ಈ ವೇಳೆಯಲ್ಲಿ ಜನರನ್ನು ಕಂಡು ಕಂಗಾಲಾದ ಆನೆಗಳು ದಿಕ್ಕಾ ಪಾಲಾಗಿ ಓಡಿವೆ. ಅದರಲ್ಲೊಂದು ವಯಸ್ಕ ಆನೆ ಆಳವಾದ ಹಳ್ಳಕ್ಕೆ ಬಿದ್ದಿದೆ ಎಂದು ವರದಿ ಮಾಡಲಾಗಿದೆ.

ಶನಿವಾರ ತಡ ರಾತ್ರಿ ಮಯೂರ್​ಭಂಜ್​ ಜಿಲ್ಲೆಯ ಟೆಂಬಟೊಲ ಗ್ರಾಮದ ಸಮೀಪದಲ್ಲಿರುವ ಹಳ್ಳದಲ್ಲಿ ಆನೆ ಜಾರಿ ಬಿದ್ದಿದೆ. ಜನರನ್ನು ನೋಡಿದ ಆನೆಗಳು ಹೆದರಿ ಓಡಲು ಪ್ರಾರಂಭಿಸಿದವು ಆ ವೇಳೆ ಆನೆಯೊಂದು ಹಳ್ಳಕ್ಕೆ ಬಿದ್ದಿದೆ ಎಂಬ ಮಾಹಿತಿಯನ್ನು ವನ್ಯಜೀವಿ ತಜ್ಞ ಅನೂಮಿತ್ರ ಆಚಾರ್ಯ ಎಎನ್ಐಗೆ ತಿಳಿಸಿದ್ದಾರೆ.

ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಕ್ಷಣ ವಿಷಯ ತಿಳಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಕೈಗೊಂಡ ಇಲಾಖೆ ಆನೆಯನ್ನು ರಕ್ಷಿಸಿದೆ. ಬಳಿಕ ಕಾಡಿಗೆ ಕಳುಹಿಸಲಾಗಿದೆ. ಮಯೂರ್​ಭಂಜ್​ ಜಿಲ್ಲೆಯಲ್ಲಿ ಇಂಥಹ ಘಟನೆ ನಡೆಯುತ್ತಿರುವುದು ಇದೇ ಮೊದಲಲ್ಲ. 2021 ಏಪ್ರಿಲ್​ನಲ್ಲಿ ಮರಿ ಆನೆಯೊಂದು 15ಅಡಿ ಆಳದ ಬಾವಿಗೆ ಬಿದ್ದಿತ್ತು. ಕಾರ್ಯಾಚರಣೆಯನ್ನು ಕೈಗೊಂಡ ಇಲಾಖೆ ಸುರಕ್ಷಿತವಾಗಿ ಆನೆ ಮರಿಯನ್ನು ರಕ್ಷಿಸಿತ್ತು.

ಇದನ್ನೂ ಓದಿ:

ಶೌಚಗುಂಡಿಗೆ ಬಿದ್ದು ಮೇಲೆ ಬರಲಾಗದೆ ಆನೆ ಮರಿ ನರಳಾಟ; ರಕ್ಷಣೆಗೆ ಮುಂದಾಗಿರುವ ಗ್ರಾಮಸ್ಥರು

ಮೈಸೂರು: ತಾಯಿಯಿಂದ ಬೇರ್ಪಟ್ಟ ಎರಡು ಚಿರತೆ ಮರಿಗಳ ರಕ್ಷಣೆ

Published On - 12:27 pm, Wed, 6 October 21

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ