AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡಿಶಾ: ಆಳವಾದ ಗುಂಡಿಯಲ್ಲಿ ಬಿದ್ದ ಆನೆಯನ್ನು ರಕ್ಷಿಸಿ ಕರ್ತವ್ಯ ಮೆರೆದ ಅರಣ್ಯ ಇಲಾಖೆ

ಹಳ್ಳಿ ದಾಟಿ ಕಾಡಿಗೆ ಹೋಗಲು ದಾರಿ ತೋಚದೇ ಆನೆಗಳು ಪರದಾಡುತ್ತಿದ್ದವು, ಈ ವೇಳೆಯಲ್ಲಿ ಜನರನ್ನು ಕಂಡು ಕಂಗಾಲಾದ ಆನೆಗಳು ದಿಕ್ಕಾ ಪಾಲಾಗಿ ಓಡಿವೆ. ಅದರಲ್ಲೊಂದು ವಯಸ್ಕ ಆನೆ ಆಳವಾದ ಹಳ್ಳಕ್ಕೆ ಬಿದ್ದಿದೆ ಎಂದು ವರದಿ ಮಾಡಲಾಗಿದೆ.

ಒಡಿಶಾ: ಆಳವಾದ ಗುಂಡಿಯಲ್ಲಿ ಬಿದ್ದ ಆನೆಯನ್ನು ರಕ್ಷಿಸಿ ಕರ್ತವ್ಯ ಮೆರೆದ ಅರಣ್ಯ ಇಲಾಖೆ
ಆಳವಾದ ಗುಂಡಿಯಲ್ಲಿ ಬಿದ್ದ ಆನೆಯನ್ನು ರಕ್ಷಿಸಿದ ಅರಣ್ಯ ಇಲಾಖೆ
TV9 Web
| Edited By: |

Updated on:Oct 06, 2021 | 12:28 PM

Share

ಆಳವಾದ ಗುಂಡಿಯಲ್ಲಿ ಬಿದ್ದಿದ್ದ ಆನೆಯನ್ನು ಅರಣ್ಯ ಇಲಾಖೆ ರಕ್ಷಿಸಿದೆ. ರಕ್ಷಣಾ ಕಾರ್ಯಾಚಾರಣೆಯಲ್ಲಿ ಜೆಸಿಬಿಯನ್ನು ತಂದು ಆನೆಯನ್ನು ರಕ್ಷಿಸಿ ಒಡಿಶಾ ಬಾಂಗಿರಿಪೋಸಿ ಅರಣ್ಯ ಇಲಾಖೆ ಕರ್ತವ್ಯ ಮೆರೆದಿದೆ. ಈ ಕುರಿತಂತೆ ಎಎನ್ಐ ವರದಿ ಮಾಡಿದೆ. ರಾತ್ರಿ ವೇಳೆಯಲ್ಲಿ ಸುಮಾರು 10 ಆನೆಗಳು ಮಯೂರ್​ಭಂಜ್​ ಜಿಲ್ಲೆಯಲ್ಲಿರುವ ಪುಟ್ಟ ಹಳ್ಳಿಯನ್ನು ಪ್ರವೇಶಿಸಿವೆ. ಹಳ್ಳಿ ದಾಟಿ ಕಾಡಿಗೆ ಹೋಗಲು ದಾರಿ ತೋಚದೇ ಆನೆಗಳು ಪರದಾಡುತ್ತಿದ್ದವು, ಈ ವೇಳೆಯಲ್ಲಿ ಜನರನ್ನು ಕಂಡು ಕಂಗಾಲಾದ ಆನೆಗಳು ದಿಕ್ಕಾ ಪಾಲಾಗಿ ಓಡಿವೆ. ಅದರಲ್ಲೊಂದು ವಯಸ್ಕ ಆನೆ ಆಳವಾದ ಹಳ್ಳಕ್ಕೆ ಬಿದ್ದಿದೆ ಎಂದು ವರದಿ ಮಾಡಲಾಗಿದೆ.

ಶನಿವಾರ ತಡ ರಾತ್ರಿ ಮಯೂರ್​ಭಂಜ್​ ಜಿಲ್ಲೆಯ ಟೆಂಬಟೊಲ ಗ್ರಾಮದ ಸಮೀಪದಲ್ಲಿರುವ ಹಳ್ಳದಲ್ಲಿ ಆನೆ ಜಾರಿ ಬಿದ್ದಿದೆ. ಜನರನ್ನು ನೋಡಿದ ಆನೆಗಳು ಹೆದರಿ ಓಡಲು ಪ್ರಾರಂಭಿಸಿದವು ಆ ವೇಳೆ ಆನೆಯೊಂದು ಹಳ್ಳಕ್ಕೆ ಬಿದ್ದಿದೆ ಎಂಬ ಮಾಹಿತಿಯನ್ನು ವನ್ಯಜೀವಿ ತಜ್ಞ ಅನೂಮಿತ್ರ ಆಚಾರ್ಯ ಎಎನ್ಐಗೆ ತಿಳಿಸಿದ್ದಾರೆ.

ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಕ್ಷಣ ವಿಷಯ ತಿಳಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಕೈಗೊಂಡ ಇಲಾಖೆ ಆನೆಯನ್ನು ರಕ್ಷಿಸಿದೆ. ಬಳಿಕ ಕಾಡಿಗೆ ಕಳುಹಿಸಲಾಗಿದೆ. ಮಯೂರ್​ಭಂಜ್​ ಜಿಲ್ಲೆಯಲ್ಲಿ ಇಂಥಹ ಘಟನೆ ನಡೆಯುತ್ತಿರುವುದು ಇದೇ ಮೊದಲಲ್ಲ. 2021 ಏಪ್ರಿಲ್​ನಲ್ಲಿ ಮರಿ ಆನೆಯೊಂದು 15ಅಡಿ ಆಳದ ಬಾವಿಗೆ ಬಿದ್ದಿತ್ತು. ಕಾರ್ಯಾಚರಣೆಯನ್ನು ಕೈಗೊಂಡ ಇಲಾಖೆ ಸುರಕ್ಷಿತವಾಗಿ ಆನೆ ಮರಿಯನ್ನು ರಕ್ಷಿಸಿತ್ತು.

ಇದನ್ನೂ ಓದಿ:

ಶೌಚಗುಂಡಿಗೆ ಬಿದ್ದು ಮೇಲೆ ಬರಲಾಗದೆ ಆನೆ ಮರಿ ನರಳಾಟ; ರಕ್ಷಣೆಗೆ ಮುಂದಾಗಿರುವ ಗ್ರಾಮಸ್ಥರು

ಮೈಸೂರು: ತಾಯಿಯಿಂದ ಬೇರ್ಪಟ್ಟ ಎರಡು ಚಿರತೆ ಮರಿಗಳ ರಕ್ಷಣೆ

Published On - 12:27 pm, Wed, 6 October 21

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ