AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡಿಶಾ: ಆಳವಾದ ಗುಂಡಿಯಲ್ಲಿ ಬಿದ್ದ ಆನೆಯನ್ನು ರಕ್ಷಿಸಿ ಕರ್ತವ್ಯ ಮೆರೆದ ಅರಣ್ಯ ಇಲಾಖೆ

ಹಳ್ಳಿ ದಾಟಿ ಕಾಡಿಗೆ ಹೋಗಲು ದಾರಿ ತೋಚದೇ ಆನೆಗಳು ಪರದಾಡುತ್ತಿದ್ದವು, ಈ ವೇಳೆಯಲ್ಲಿ ಜನರನ್ನು ಕಂಡು ಕಂಗಾಲಾದ ಆನೆಗಳು ದಿಕ್ಕಾ ಪಾಲಾಗಿ ಓಡಿವೆ. ಅದರಲ್ಲೊಂದು ವಯಸ್ಕ ಆನೆ ಆಳವಾದ ಹಳ್ಳಕ್ಕೆ ಬಿದ್ದಿದೆ ಎಂದು ವರದಿ ಮಾಡಲಾಗಿದೆ.

ಒಡಿಶಾ: ಆಳವಾದ ಗುಂಡಿಯಲ್ಲಿ ಬಿದ್ದ ಆನೆಯನ್ನು ರಕ್ಷಿಸಿ ಕರ್ತವ್ಯ ಮೆರೆದ ಅರಣ್ಯ ಇಲಾಖೆ
ಆಳವಾದ ಗುಂಡಿಯಲ್ಲಿ ಬಿದ್ದ ಆನೆಯನ್ನು ರಕ್ಷಿಸಿದ ಅರಣ್ಯ ಇಲಾಖೆ
TV9 Web
| Updated By: shruti hegde|

Updated on:Oct 06, 2021 | 12:28 PM

Share

ಆಳವಾದ ಗುಂಡಿಯಲ್ಲಿ ಬಿದ್ದಿದ್ದ ಆನೆಯನ್ನು ಅರಣ್ಯ ಇಲಾಖೆ ರಕ್ಷಿಸಿದೆ. ರಕ್ಷಣಾ ಕಾರ್ಯಾಚಾರಣೆಯಲ್ಲಿ ಜೆಸಿಬಿಯನ್ನು ತಂದು ಆನೆಯನ್ನು ರಕ್ಷಿಸಿ ಒಡಿಶಾ ಬಾಂಗಿರಿಪೋಸಿ ಅರಣ್ಯ ಇಲಾಖೆ ಕರ್ತವ್ಯ ಮೆರೆದಿದೆ. ಈ ಕುರಿತಂತೆ ಎಎನ್ಐ ವರದಿ ಮಾಡಿದೆ. ರಾತ್ರಿ ವೇಳೆಯಲ್ಲಿ ಸುಮಾರು 10 ಆನೆಗಳು ಮಯೂರ್​ಭಂಜ್​ ಜಿಲ್ಲೆಯಲ್ಲಿರುವ ಪುಟ್ಟ ಹಳ್ಳಿಯನ್ನು ಪ್ರವೇಶಿಸಿವೆ. ಹಳ್ಳಿ ದಾಟಿ ಕಾಡಿಗೆ ಹೋಗಲು ದಾರಿ ತೋಚದೇ ಆನೆಗಳು ಪರದಾಡುತ್ತಿದ್ದವು, ಈ ವೇಳೆಯಲ್ಲಿ ಜನರನ್ನು ಕಂಡು ಕಂಗಾಲಾದ ಆನೆಗಳು ದಿಕ್ಕಾ ಪಾಲಾಗಿ ಓಡಿವೆ. ಅದರಲ್ಲೊಂದು ವಯಸ್ಕ ಆನೆ ಆಳವಾದ ಹಳ್ಳಕ್ಕೆ ಬಿದ್ದಿದೆ ಎಂದು ವರದಿ ಮಾಡಲಾಗಿದೆ.

ಶನಿವಾರ ತಡ ರಾತ್ರಿ ಮಯೂರ್​ಭಂಜ್​ ಜಿಲ್ಲೆಯ ಟೆಂಬಟೊಲ ಗ್ರಾಮದ ಸಮೀಪದಲ್ಲಿರುವ ಹಳ್ಳದಲ್ಲಿ ಆನೆ ಜಾರಿ ಬಿದ್ದಿದೆ. ಜನರನ್ನು ನೋಡಿದ ಆನೆಗಳು ಹೆದರಿ ಓಡಲು ಪ್ರಾರಂಭಿಸಿದವು ಆ ವೇಳೆ ಆನೆಯೊಂದು ಹಳ್ಳಕ್ಕೆ ಬಿದ್ದಿದೆ ಎಂಬ ಮಾಹಿತಿಯನ್ನು ವನ್ಯಜೀವಿ ತಜ್ಞ ಅನೂಮಿತ್ರ ಆಚಾರ್ಯ ಎಎನ್ಐಗೆ ತಿಳಿಸಿದ್ದಾರೆ.

ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಕ್ಷಣ ವಿಷಯ ತಿಳಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಕೈಗೊಂಡ ಇಲಾಖೆ ಆನೆಯನ್ನು ರಕ್ಷಿಸಿದೆ. ಬಳಿಕ ಕಾಡಿಗೆ ಕಳುಹಿಸಲಾಗಿದೆ. ಮಯೂರ್​ಭಂಜ್​ ಜಿಲ್ಲೆಯಲ್ಲಿ ಇಂಥಹ ಘಟನೆ ನಡೆಯುತ್ತಿರುವುದು ಇದೇ ಮೊದಲಲ್ಲ. 2021 ಏಪ್ರಿಲ್​ನಲ್ಲಿ ಮರಿ ಆನೆಯೊಂದು 15ಅಡಿ ಆಳದ ಬಾವಿಗೆ ಬಿದ್ದಿತ್ತು. ಕಾರ್ಯಾಚರಣೆಯನ್ನು ಕೈಗೊಂಡ ಇಲಾಖೆ ಸುರಕ್ಷಿತವಾಗಿ ಆನೆ ಮರಿಯನ್ನು ರಕ್ಷಿಸಿತ್ತು.

ಇದನ್ನೂ ಓದಿ:

ಶೌಚಗುಂಡಿಗೆ ಬಿದ್ದು ಮೇಲೆ ಬರಲಾಗದೆ ಆನೆ ಮರಿ ನರಳಾಟ; ರಕ್ಷಣೆಗೆ ಮುಂದಾಗಿರುವ ಗ್ರಾಮಸ್ಥರು

ಮೈಸೂರು: ತಾಯಿಯಿಂದ ಬೇರ್ಪಟ್ಟ ಎರಡು ಚಿರತೆ ಮರಿಗಳ ರಕ್ಷಣೆ

Published On - 12:27 pm, Wed, 6 October 21

ಮರು ಮಾಂಗಲ್ಯ ಅಂದರೆ ಏನು, ಅದನ್ನ ಹೇಗೆ ಧರಿಸಬೇಕು ತಿಳಿಯಿರಿ
ಮರು ಮಾಂಗಲ್ಯ ಅಂದರೆ ಏನು, ಅದನ್ನ ಹೇಗೆ ಧರಿಸಬೇಕು ತಿಳಿಯಿರಿ
Daily horoscope: ವ್ಯಾಪಾರಸ್ಥರಿಗೆ ವೃತ್ತಿ ಜೀವನದಲ್ಲಿ ಯಶಸ್ಸು
Daily horoscope: ವ್ಯಾಪಾರಸ್ಥರಿಗೆ ವೃತ್ತಿ ಜೀವನದಲ್ಲಿ ಯಶಸ್ಸು
ನೂತನ ಜಿಎಸ್​ಟಿಯಿಂದ ಕರ್ನಾಟಕಕ್ಕೆ 70 ಸಾವಿರ ಕೋಟಿ ನಷ್ಟದ ಅಂದಾಜು
ನೂತನ ಜಿಎಸ್​ಟಿಯಿಂದ ಕರ್ನಾಟಕಕ್ಕೆ 70 ಸಾವಿರ ಕೋಟಿ ನಷ್ಟದ ಅಂದಾಜು
ಜನತೆಗೆ ಗುಡ್​ ನ್ಯೂಸ್ ಕೊಟ್ಟ ಕೇಂದ್ರ: ಯಾವೆಲ್ಲಾ ವಸ್ತುಗಳ ಬೆಲೆ ಇಳಿಕೆ?
ಜನತೆಗೆ ಗುಡ್​ ನ್ಯೂಸ್ ಕೊಟ್ಟ ಕೇಂದ್ರ: ಯಾವೆಲ್ಲಾ ವಸ್ತುಗಳ ಬೆಲೆ ಇಳಿಕೆ?
ವಿಷ್ಣುವರ್ಧನ್​​ಗೆ ಕರ್ನಾಟಕ ರತ್ನ ನೀಡುವ ಬಗ್ಗೆ ಸಿಎಂ ಸಕಾರಾತ್ಮಕ ಸ್ಪಂದನೆ
ವಿಷ್ಣುವರ್ಧನ್​​ಗೆ ಕರ್ನಾಟಕ ರತ್ನ ನೀಡುವ ಬಗ್ಗೆ ಸಿಎಂ ಸಕಾರಾತ್ಮಕ ಸ್ಪಂದನೆ
ಸಿನಿಮಾ ಸಾಹಸಕ್ಕೆ ಕೈ ಹಾಕಿದ ‘ಅಮೃತಾಂಜನ್’ ಕಿರುಚಿತ್ರದ ಹುಡುಗರು
ಸಿನಿಮಾ ಸಾಹಸಕ್ಕೆ ಕೈ ಹಾಕಿದ ‘ಅಮೃತಾಂಜನ್’ ಕಿರುಚಿತ್ರದ ಹುಡುಗರು
ಅಪಾಯದ ಮಟ್ಟ ಮೀರಿದ ಜಮ್ಮು-ಕಾಶ್ಮೀರದ ಝೀಲಂ ನದಿ, ಪ್ರವಾಹದ ಎಚ್ಚರಿಕೆ
ಅಪಾಯದ ಮಟ್ಟ ಮೀರಿದ ಜಮ್ಮು-ಕಾಶ್ಮೀರದ ಝೀಲಂ ನದಿ, ಪ್ರವಾಹದ ಎಚ್ಚರಿಕೆ
ಬಾನು ಮುಸ್ತಾಕ್ ಮನೆಯಲ್ಲಿ ಕುರಾನ್ ಜತೆ ಭಗವದ್ಗೀತೆ
ಬಾನು ಮುಸ್ತಾಕ್ ಮನೆಯಲ್ಲಿ ಕುರಾನ್ ಜತೆ ಭಗವದ್ಗೀತೆ
ದರ್ಶನ್ ನೋವು ನೋಡಿ ಖುಷಿಪಡುವ ಕೆಲವರು ಇದ್ದಾರೆ: ನಿರ್ದೇಶಕ ಪ್ರೇಮ್
ದರ್ಶನ್ ನೋವು ನೋಡಿ ಖುಷಿಪಡುವ ಕೆಲವರು ಇದ್ದಾರೆ: ನಿರ್ದೇಶಕ ಪ್ರೇಮ್
ಮೈಸೂರು ದಸರಾ ಉದ್ಘಾಟನೆ: ಫಲತಾಂಬೂಲ ನೀಡಿ ಬಾನು ಮುಸ್ತಾಕ್​ಗೆ ಆಹ್ವಾನ
ಮೈಸೂರು ದಸರಾ ಉದ್ಘಾಟನೆ: ಫಲತಾಂಬೂಲ ನೀಡಿ ಬಾನು ಮುಸ್ತಾಕ್​ಗೆ ಆಹ್ವಾನ