Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡಿಶಾ: ಆಳವಾದ ಗುಂಡಿಯಲ್ಲಿ ಬಿದ್ದ ಆನೆಯನ್ನು ರಕ್ಷಿಸಿ ಕರ್ತವ್ಯ ಮೆರೆದ ಅರಣ್ಯ ಇಲಾಖೆ

ಹಳ್ಳಿ ದಾಟಿ ಕಾಡಿಗೆ ಹೋಗಲು ದಾರಿ ತೋಚದೇ ಆನೆಗಳು ಪರದಾಡುತ್ತಿದ್ದವು, ಈ ವೇಳೆಯಲ್ಲಿ ಜನರನ್ನು ಕಂಡು ಕಂಗಾಲಾದ ಆನೆಗಳು ದಿಕ್ಕಾ ಪಾಲಾಗಿ ಓಡಿವೆ. ಅದರಲ್ಲೊಂದು ವಯಸ್ಕ ಆನೆ ಆಳವಾದ ಹಳ್ಳಕ್ಕೆ ಬಿದ್ದಿದೆ ಎಂದು ವರದಿ ಮಾಡಲಾಗಿದೆ.

ಒಡಿಶಾ: ಆಳವಾದ ಗುಂಡಿಯಲ್ಲಿ ಬಿದ್ದ ಆನೆಯನ್ನು ರಕ್ಷಿಸಿ ಕರ್ತವ್ಯ ಮೆರೆದ ಅರಣ್ಯ ಇಲಾಖೆ
ಆಳವಾದ ಗುಂಡಿಯಲ್ಲಿ ಬಿದ್ದ ಆನೆಯನ್ನು ರಕ್ಷಿಸಿದ ಅರಣ್ಯ ಇಲಾಖೆ
Follow us
TV9 Web
| Updated By: shruti hegde

Updated on:Oct 06, 2021 | 12:28 PM

ಆಳವಾದ ಗುಂಡಿಯಲ್ಲಿ ಬಿದ್ದಿದ್ದ ಆನೆಯನ್ನು ಅರಣ್ಯ ಇಲಾಖೆ ರಕ್ಷಿಸಿದೆ. ರಕ್ಷಣಾ ಕಾರ್ಯಾಚಾರಣೆಯಲ್ಲಿ ಜೆಸಿಬಿಯನ್ನು ತಂದು ಆನೆಯನ್ನು ರಕ್ಷಿಸಿ ಒಡಿಶಾ ಬಾಂಗಿರಿಪೋಸಿ ಅರಣ್ಯ ಇಲಾಖೆ ಕರ್ತವ್ಯ ಮೆರೆದಿದೆ. ಈ ಕುರಿತಂತೆ ಎಎನ್ಐ ವರದಿ ಮಾಡಿದೆ. ರಾತ್ರಿ ವೇಳೆಯಲ್ಲಿ ಸುಮಾರು 10 ಆನೆಗಳು ಮಯೂರ್​ಭಂಜ್​ ಜಿಲ್ಲೆಯಲ್ಲಿರುವ ಪುಟ್ಟ ಹಳ್ಳಿಯನ್ನು ಪ್ರವೇಶಿಸಿವೆ. ಹಳ್ಳಿ ದಾಟಿ ಕಾಡಿಗೆ ಹೋಗಲು ದಾರಿ ತೋಚದೇ ಆನೆಗಳು ಪರದಾಡುತ್ತಿದ್ದವು, ಈ ವೇಳೆಯಲ್ಲಿ ಜನರನ್ನು ಕಂಡು ಕಂಗಾಲಾದ ಆನೆಗಳು ದಿಕ್ಕಾ ಪಾಲಾಗಿ ಓಡಿವೆ. ಅದರಲ್ಲೊಂದು ವಯಸ್ಕ ಆನೆ ಆಳವಾದ ಹಳ್ಳಕ್ಕೆ ಬಿದ್ದಿದೆ ಎಂದು ವರದಿ ಮಾಡಲಾಗಿದೆ.

ಶನಿವಾರ ತಡ ರಾತ್ರಿ ಮಯೂರ್​ಭಂಜ್​ ಜಿಲ್ಲೆಯ ಟೆಂಬಟೊಲ ಗ್ರಾಮದ ಸಮೀಪದಲ್ಲಿರುವ ಹಳ್ಳದಲ್ಲಿ ಆನೆ ಜಾರಿ ಬಿದ್ದಿದೆ. ಜನರನ್ನು ನೋಡಿದ ಆನೆಗಳು ಹೆದರಿ ಓಡಲು ಪ್ರಾರಂಭಿಸಿದವು ಆ ವೇಳೆ ಆನೆಯೊಂದು ಹಳ್ಳಕ್ಕೆ ಬಿದ್ದಿದೆ ಎಂಬ ಮಾಹಿತಿಯನ್ನು ವನ್ಯಜೀವಿ ತಜ್ಞ ಅನೂಮಿತ್ರ ಆಚಾರ್ಯ ಎಎನ್ಐಗೆ ತಿಳಿಸಿದ್ದಾರೆ.

ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಕ್ಷಣ ವಿಷಯ ತಿಳಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಕೈಗೊಂಡ ಇಲಾಖೆ ಆನೆಯನ್ನು ರಕ್ಷಿಸಿದೆ. ಬಳಿಕ ಕಾಡಿಗೆ ಕಳುಹಿಸಲಾಗಿದೆ. ಮಯೂರ್​ಭಂಜ್​ ಜಿಲ್ಲೆಯಲ್ಲಿ ಇಂಥಹ ಘಟನೆ ನಡೆಯುತ್ತಿರುವುದು ಇದೇ ಮೊದಲಲ್ಲ. 2021 ಏಪ್ರಿಲ್​ನಲ್ಲಿ ಮರಿ ಆನೆಯೊಂದು 15ಅಡಿ ಆಳದ ಬಾವಿಗೆ ಬಿದ್ದಿತ್ತು. ಕಾರ್ಯಾಚರಣೆಯನ್ನು ಕೈಗೊಂಡ ಇಲಾಖೆ ಸುರಕ್ಷಿತವಾಗಿ ಆನೆ ಮರಿಯನ್ನು ರಕ್ಷಿಸಿತ್ತು.

ಇದನ್ನೂ ಓದಿ:

ಶೌಚಗುಂಡಿಗೆ ಬಿದ್ದು ಮೇಲೆ ಬರಲಾಗದೆ ಆನೆ ಮರಿ ನರಳಾಟ; ರಕ್ಷಣೆಗೆ ಮುಂದಾಗಿರುವ ಗ್ರಾಮಸ್ಥರು

ಮೈಸೂರು: ತಾಯಿಯಿಂದ ಬೇರ್ಪಟ್ಟ ಎರಡು ಚಿರತೆ ಮರಿಗಳ ರಕ್ಷಣೆ

Published On - 12:27 pm, Wed, 6 October 21

ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್
ಅಕ್ರಮವಾಗಿ ವಿದ್ಯುತ್ ಪಡೆಯುತ್ತಿದ್ದ ಸಂಗತಿ ಜಮೀರ್ ಗಮನಕ್ಕೆ ಬಂದಿದ್ದು ಈಗ
ಅಕ್ರಮವಾಗಿ ವಿದ್ಯುತ್ ಪಡೆಯುತ್ತಿದ್ದ ಸಂಗತಿ ಜಮೀರ್ ಗಮನಕ್ಕೆ ಬಂದಿದ್ದು ಈಗ
ಎರಡು ದಶಕಗಳಿಂದ ಶಾಸಕನಾಗಿದ್ದರೂ ಜಮೀರ್ ಆಹ್ಮದ್ ಏನೂ ಮಾಡಿಲ್ಲ: ನಿವಾಸಿ
ಎರಡು ದಶಕಗಳಿಂದ ಶಾಸಕನಾಗಿದ್ದರೂ ಜಮೀರ್ ಆಹ್ಮದ್ ಏನೂ ಮಾಡಿಲ್ಲ: ನಿವಾಸಿ
ಹನೂರಿನ ಮಹದೇಶ್ವರ ಬೆಟ್ಟ ದೇವಸ್ಥಾನದ ಹುಂಡಿಯಲ್ಲಿ ₹ 2.85 ಕೋಟಿ ಸಂಗ್ರಹ
ಹನೂರಿನ ಮಹದೇಶ್ವರ ಬೆಟ್ಟ ದೇವಸ್ಥಾನದ ಹುಂಡಿಯಲ್ಲಿ ₹ 2.85 ಕೋಟಿ ಸಂಗ್ರಹ
ಮಾರಿಷಸ್ ಜನರಿಂದ ಮೋದಿಗೆ ಸಖತ್ ಸ್ವಾಗತ
ಮಾರಿಷಸ್ ಜನರಿಂದ ಮೋದಿಗೆ ಸಖತ್ ಸ್ವಾಗತ
ಕಳ್ಳನ ಕರಾಮತ್ತು ಠಾಣೆಯ ಸಿಸಿಟಿವಿಯಲ್ಲಿ ಸೆರೆ
ಕಳ್ಳನ ಕರಾಮತ್ತು ಠಾಣೆಯ ಸಿಸಿಟಿವಿಯಲ್ಲಿ ಸೆರೆ
ಮಜಾ ಟಾಕೀಸ್​ನಲ್ಲಿ ಸ್ಯಾಂಡಲ್​ವುಡ್ ಬ್ಯೂಟಿಗಳು; ಕುರಿನ ಕಾಲೆಳೆದ ಮಾನ್ವಿತಾ
ಮಜಾ ಟಾಕೀಸ್​ನಲ್ಲಿ ಸ್ಯಾಂಡಲ್​ವುಡ್ ಬ್ಯೂಟಿಗಳು; ಕುರಿನ ಕಾಲೆಳೆದ ಮಾನ್ವಿತಾ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ